News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

436

ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

1.ಗಡಿಬಿಡಿಯಲ್ಲಿ ಶಾಪಿಂಗ್ ಖಂಡಿತ ಮಾಡ್ಬೇಡಿ:-
ಅಯ್ಯೋ ಟೈಂ ಇಲ್ಲ.. ಬೇಗ ಹೋಗ್ಬೇಕು ಅಂದುಕೊಂಡು ಎಂದೂ ಶಾಪಿಂಗ್ ಮಾಡ್ಬೇಡಿ. ಇಂತ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಡಿಸೈನ್‍ಗಳನ್ನ ನೋಡದೆ ಮೊದಲು ಅಂಗಡಿಗೆ ಹೋದಾಗ ಯಾವುದು ಕಣ್ಣಿಗೆ ಚೆನ್ನಾಗಿ ಕಾಣುತ್ತೋ ಅದನ್ನೇ ಕೊಂಡುಕೊಳ್ತೀವಿ.

ಆದ್ರೆ ಇನ್ನೂ ಸ್ವಲ್ಪ ಸಮಯ ಹುಡುಕಿದ್ರೆ ಅದಕ್ಕಿಂತ ಚೆಂದದ ಡಿಸೈನ್‍ವುಳ್ಳ ಬಟ್ಟೆ ಸಿಗಬಹುದು.

2.ಟ್ರಯಲ್ ಮಾಡದೆ ಪರ್ಚೇಸ್ ಮಾಡ್ಬೇಡಿ:-
ಕಣ್ಣಿಗೆ ಚೆಂದವಾಗಿ ಕಂಡ ಬಟ್ಟೆಯನ್ನ ಧರಿಸಿ ನೋಡಿದಾಗ ಅದು ನಿಮಗೆ ಸೂಟ್ ಆಗದಿರಬಹುದು. ಅಥವಾ ಫಿಟಿಂಗ್‍ನಲ್ಲಿ ವ್ಯತ್ಯಾಸವಿರುವ ಸಾಧ್ಯತೆಯೂ ಇರುತ್ತದೆ.

ಹೀಗಾಗಿ ಯಾವಾಗ್ಲೂ ಟ್ರಯಲ್ ನೋಡಿಯೇ ಬಟ್ಟೆ ಖರೀದಿ ಮಾಡಿ. ಅದರಲ್ಲೂ ವಿವಿಧ ಬ್ರ್ಯಾಂಡ್‍ಗಳ ಜೀನ್ಸ್ ಮತ್ತು ಟಾಪ್‍ಗಳ ಸೈಜ್‍ನಲ್ಲಿ ವ್ಯತ್ಯಾಸವಿರುತ್ತದೆ.

3.ಒಂದೇ ಡಿಸೈನ್‍ನಲ್ಲಿ ಬೇರೆ ಬೇರೆ ಬಣ್ಣದ ಬಟ್ಟೆ ತಗೋಬೇಡಿ:-
ಒಂದು ಟೀ ಶರ್ಟ್/ಟಾಪ್/ಪ್ಯಾಂಟ್ ಇಷ್ಟವಾದ್ರೆ ಅದೇ ಡಿಸೈನ್‍ನಲ್ಲಿ ಮೂರ್ನಾಲ್ಕು ವಿವಿಧ ಬಣ್ಣದ ಟೀ-ಶರ್ಟ್/ಟಾಪ್ ತೆಗೆದುಕೊಳ್ಳೋದನ್ನ ಮಾಡ್ಬೇಡಿ. ಸಾಕಷ್ಟು ವೆರೈಟಿಯ ಡಿಸೈನ್‍ಗಳು ಇರುವಾಗ ಒಂದೇ ಡಿಸೈನ್‍ಗೆ ಅಂಟಿಕೊಳ್ಳೋದು ಯಾಕೆ?

4.ನಿಮಗೆ ಫಿಟ್ ಆಗದ ಬಟ್ಟೆಯನ್ನ ಅಲ್ಲೇ ಬಿಡಿ:-
ಅಯ್ಯೋ ಈ ಟಾಪ್ ಎಷ್ಟೊಂದು ಚೆನ್ನಾಗಿದೆ… ಆದ್ರೆ ನನಗೆ ಸ್ವಲ್ಪ ಟೈಟ್ ಆಗ್ತಿದೆ… ಪರ್ವಾಗಿಲ್ಲ, ಮುಂದೆ ಸಣ್ಣ ಆಗ್ತೀನಿ…. ಎಂತೆಲ್ಲಾ ಅಂದುಕೊಂಡು ನಿಮಗೆ ಫಿಟ್ ಆಗದಿರುವ ಬಟ್ಟೆಯನ್ನ ಖರೀದಿಸಬೇಡಿ. ತುಂಬಾ ಇಷ್ಟವಾದ ಬಟ್ಟೆ ಸ್ವಲ್ಪ ಇದ್ದು, ನಿಮ್ಮ ಸೈಜ್ ನಲ್ಲಿ ಲಭ್ಯವಿಲ್ಲದಿದ್ರೆ ಅದನ್ನ ಟೈಲರ್ ಬಳಿ ಕೊಟ್ಟು ಫಿಟ್ ಮಾಡಿಸಿಕೊಳ್ಳಬಹುದು.

5.ಸೇಲ್ ಇದ್ದಾಗ ಶಾಪಿಂಗ್ ಹೋಗಿ:-
ಹೊಸ ಡಿಸೈನ್‍ನ ಬಟ್ಟೆಗಳ ಬೆಲೆ ತುಂಬಾ ದುಬಾರಿ ಎನಿಸಿದ್ರೆ ಸ್ವಲ್ಪ ಕಾಯಿರಿ. ಸ್ವಲ್ಪ ಸಮಯದ ನಂತರ ಡಿಸ್ಕೌಂಟ್ ಸೇಲ್ ಹಾಕಿದಾಗ ಅದೇ ಬಟ್ಟೆ ಕಡಿಮೆ ಬೆಲೆ/ ಅರ್ಧ ಬೆಲೆಗೂ ಸಿಗಬಹುದು. ಹಾಗಂತ ಎಲ್ಲಾ ಬಟ್ಟೆಗಳು ಸೇಲ್‍ನಲ್ಲಿ ಬರುತ್ತವೆ ಅಂದ್ಕೋಬೇಡಿ. ಇಂತದ್ದೊಂದು ಜಾಕೇಟ್ ಖರೀದಿಸಬೇಕು ಅಂದ್ಕೊಂಡು ಅದು ತುಂಬಾ ದಿನಗಳ ನಂತರ ಸಿಕ್ಕರೆ ಅದನ್ನ ಆಗಲೇ ಖರೀದಿಸಿದ್ರೆ ಉತ್ತಮ. ಸಾಮಾನ್ಯವಾಗಿ ಸಿಗೋ ಉಡುಪುಗಳಾದ್ರೆ ಸೇಲ್ ಹಾಕಿದಾಗಲೇ ಖರೀದಿ ಮಾಡಿ.

6.ಫ್ರೆಂಡ್‍ಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೇ ಇರಬೇಡಿ:-
ನಿಮ್ಮ ಸ್ಟೈಲ್ ಅಥವಾ ಟೇಸ್ಟ್ ನಿಮ್ಮ ಸ್ನೇಹಿತರಿಗೆ ಇಷ್ಟವಾಗದಿರಬಹುದು. ಅಥವಾ ನೀವು ಆರಿಸಿದ ಬಟ್ಟೆ ಚೆನ್ನಾಗಿಲ್ಲ ಅಂತಲೂ ಅವರು ಹೇಳಿಬಿಡಬಹುದು. ಆದ್ರೆ ಆ ಬಟ್ಟೆಯನ್ನ ಯಾವ ರೀತಿ ಸ್ಟೈಲ್ ಮಾಡಬೇಕು , ಯಾವುದರೊಂದಿಗೆ ಮ್ಯಾಚ್ ಮಾಡಿ ಹಾಕೋಬೇಕು ಅನ್ನೋದು ಅವರಿಗಿಂತ ಚೆನ್ನಾಗಿ ನಿಮಗೆ ಗೊತ್ತಿರುತ್ತದೆ. ಹೀಗಾಗಿ ಗೆಳೆಯ/ ಗೆಳತಿಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೆ ಇದ್ರೆ ನಿಮಗೇ ಲಾಸ್. ಸ್ನೇಹಿತರಿಗಿಂತ ನಿಮ್ಮ ಟೇಸ್ಟ್ ಭಿನ್ನವಾಗಿದ್ರೆ ಒಬ್ಬರೇ ಶಾಪಿಂಗ್ ಮಾಡಲು ಹೋಗಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    ‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

    ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • India, nation, ಆಧ್ಯಾತ್ಮ

    ಅದ್ಭುತ ವಾಸ್ತುಶಿಲ್ಪದ ಅಕ್ಷರ್ಧಮ್ ಮಂದಿರ

    ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು  ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

    ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…

  • ಸುದ್ದಿ

    ಪ್ಲಾಸ್ಟಿಕ್ ಬಳಕೆಯನ್ನು ನಿಷೇದ ಮಾಡಿ, ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು – ಡಾ. ಕೆ. ಸುಧಾಕರ್ ಹೇಳಿಕೆ …!

    ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.  ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಬ್ರಿಗೇಡ್…