ಉಪಯುಕ್ತ ಮಾಹಿತಿ

ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

423

ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

1.ಗಡಿಬಿಡಿಯಲ್ಲಿ ಶಾಪಿಂಗ್ ಖಂಡಿತ ಮಾಡ್ಬೇಡಿ:-
ಅಯ್ಯೋ ಟೈಂ ಇಲ್ಲ.. ಬೇಗ ಹೋಗ್ಬೇಕು ಅಂದುಕೊಂಡು ಎಂದೂ ಶಾಪಿಂಗ್ ಮಾಡ್ಬೇಡಿ. ಇಂತ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಡಿಸೈನ್‍ಗಳನ್ನ ನೋಡದೆ ಮೊದಲು ಅಂಗಡಿಗೆ ಹೋದಾಗ ಯಾವುದು ಕಣ್ಣಿಗೆ ಚೆನ್ನಾಗಿ ಕಾಣುತ್ತೋ ಅದನ್ನೇ ಕೊಂಡುಕೊಳ್ತೀವಿ.

ಆದ್ರೆ ಇನ್ನೂ ಸ್ವಲ್ಪ ಸಮಯ ಹುಡುಕಿದ್ರೆ ಅದಕ್ಕಿಂತ ಚೆಂದದ ಡಿಸೈನ್‍ವುಳ್ಳ ಬಟ್ಟೆ ಸಿಗಬಹುದು.

2.ಟ್ರಯಲ್ ಮಾಡದೆ ಪರ್ಚೇಸ್ ಮಾಡ್ಬೇಡಿ:-
ಕಣ್ಣಿಗೆ ಚೆಂದವಾಗಿ ಕಂಡ ಬಟ್ಟೆಯನ್ನ ಧರಿಸಿ ನೋಡಿದಾಗ ಅದು ನಿಮಗೆ ಸೂಟ್ ಆಗದಿರಬಹುದು. ಅಥವಾ ಫಿಟಿಂಗ್‍ನಲ್ಲಿ ವ್ಯತ್ಯಾಸವಿರುವ ಸಾಧ್ಯತೆಯೂ ಇರುತ್ತದೆ.

ಹೀಗಾಗಿ ಯಾವಾಗ್ಲೂ ಟ್ರಯಲ್ ನೋಡಿಯೇ ಬಟ್ಟೆ ಖರೀದಿ ಮಾಡಿ. ಅದರಲ್ಲೂ ವಿವಿಧ ಬ್ರ್ಯಾಂಡ್‍ಗಳ ಜೀನ್ಸ್ ಮತ್ತು ಟಾಪ್‍ಗಳ ಸೈಜ್‍ನಲ್ಲಿ ವ್ಯತ್ಯಾಸವಿರುತ್ತದೆ.

3.ಒಂದೇ ಡಿಸೈನ್‍ನಲ್ಲಿ ಬೇರೆ ಬೇರೆ ಬಣ್ಣದ ಬಟ್ಟೆ ತಗೋಬೇಡಿ:-
ಒಂದು ಟೀ ಶರ್ಟ್/ಟಾಪ್/ಪ್ಯಾಂಟ್ ಇಷ್ಟವಾದ್ರೆ ಅದೇ ಡಿಸೈನ್‍ನಲ್ಲಿ ಮೂರ್ನಾಲ್ಕು ವಿವಿಧ ಬಣ್ಣದ ಟೀ-ಶರ್ಟ್/ಟಾಪ್ ತೆಗೆದುಕೊಳ್ಳೋದನ್ನ ಮಾಡ್ಬೇಡಿ. ಸಾಕಷ್ಟು ವೆರೈಟಿಯ ಡಿಸೈನ್‍ಗಳು ಇರುವಾಗ ಒಂದೇ ಡಿಸೈನ್‍ಗೆ ಅಂಟಿಕೊಳ್ಳೋದು ಯಾಕೆ?

4.ನಿಮಗೆ ಫಿಟ್ ಆಗದ ಬಟ್ಟೆಯನ್ನ ಅಲ್ಲೇ ಬಿಡಿ:-
ಅಯ್ಯೋ ಈ ಟಾಪ್ ಎಷ್ಟೊಂದು ಚೆನ್ನಾಗಿದೆ… ಆದ್ರೆ ನನಗೆ ಸ್ವಲ್ಪ ಟೈಟ್ ಆಗ್ತಿದೆ… ಪರ್ವಾಗಿಲ್ಲ, ಮುಂದೆ ಸಣ್ಣ ಆಗ್ತೀನಿ…. ಎಂತೆಲ್ಲಾ ಅಂದುಕೊಂಡು ನಿಮಗೆ ಫಿಟ್ ಆಗದಿರುವ ಬಟ್ಟೆಯನ್ನ ಖರೀದಿಸಬೇಡಿ. ತುಂಬಾ ಇಷ್ಟವಾದ ಬಟ್ಟೆ ಸ್ವಲ್ಪ ಇದ್ದು, ನಿಮ್ಮ ಸೈಜ್ ನಲ್ಲಿ ಲಭ್ಯವಿಲ್ಲದಿದ್ರೆ ಅದನ್ನ ಟೈಲರ್ ಬಳಿ ಕೊಟ್ಟು ಫಿಟ್ ಮಾಡಿಸಿಕೊಳ್ಳಬಹುದು.

5.ಸೇಲ್ ಇದ್ದಾಗ ಶಾಪಿಂಗ್ ಹೋಗಿ:-
ಹೊಸ ಡಿಸೈನ್‍ನ ಬಟ್ಟೆಗಳ ಬೆಲೆ ತುಂಬಾ ದುಬಾರಿ ಎನಿಸಿದ್ರೆ ಸ್ವಲ್ಪ ಕಾಯಿರಿ. ಸ್ವಲ್ಪ ಸಮಯದ ನಂತರ ಡಿಸ್ಕೌಂಟ್ ಸೇಲ್ ಹಾಕಿದಾಗ ಅದೇ ಬಟ್ಟೆ ಕಡಿಮೆ ಬೆಲೆ/ ಅರ್ಧ ಬೆಲೆಗೂ ಸಿಗಬಹುದು. ಹಾಗಂತ ಎಲ್ಲಾ ಬಟ್ಟೆಗಳು ಸೇಲ್‍ನಲ್ಲಿ ಬರುತ್ತವೆ ಅಂದ್ಕೋಬೇಡಿ. ಇಂತದ್ದೊಂದು ಜಾಕೇಟ್ ಖರೀದಿಸಬೇಕು ಅಂದ್ಕೊಂಡು ಅದು ತುಂಬಾ ದಿನಗಳ ನಂತರ ಸಿಕ್ಕರೆ ಅದನ್ನ ಆಗಲೇ ಖರೀದಿಸಿದ್ರೆ ಉತ್ತಮ. ಸಾಮಾನ್ಯವಾಗಿ ಸಿಗೋ ಉಡುಪುಗಳಾದ್ರೆ ಸೇಲ್ ಹಾಕಿದಾಗಲೇ ಖರೀದಿ ಮಾಡಿ.

6.ಫ್ರೆಂಡ್‍ಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೇ ಇರಬೇಡಿ:-
ನಿಮ್ಮ ಸ್ಟೈಲ್ ಅಥವಾ ಟೇಸ್ಟ್ ನಿಮ್ಮ ಸ್ನೇಹಿತರಿಗೆ ಇಷ್ಟವಾಗದಿರಬಹುದು. ಅಥವಾ ನೀವು ಆರಿಸಿದ ಬಟ್ಟೆ ಚೆನ್ನಾಗಿಲ್ಲ ಅಂತಲೂ ಅವರು ಹೇಳಿಬಿಡಬಹುದು. ಆದ್ರೆ ಆ ಬಟ್ಟೆಯನ್ನ ಯಾವ ರೀತಿ ಸ್ಟೈಲ್ ಮಾಡಬೇಕು , ಯಾವುದರೊಂದಿಗೆ ಮ್ಯಾಚ್ ಮಾಡಿ ಹಾಕೋಬೇಕು ಅನ್ನೋದು ಅವರಿಗಿಂತ ಚೆನ್ನಾಗಿ ನಿಮಗೆ ಗೊತ್ತಿರುತ್ತದೆ. ಹೀಗಾಗಿ ಗೆಳೆಯ/ ಗೆಳತಿಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೆ ಇದ್ರೆ ನಿಮಗೇ ಲಾಸ್. ಸ್ನೇಹಿತರಿಗಿಂತ ನಿಮ್ಮ ಟೇಸ್ಟ್ ಭಿನ್ನವಾಗಿದ್ರೆ ಒಬ್ಬರೇ ಶಾಪಿಂಗ್ ಮಾಡಲು ಹೋಗಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • ವಿಜ್ಞಾನ

    ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

    ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…

  • inspirational

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….

  • ಆರೋಗ್ಯ

    ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…

  • ಸ್ಪೂರ್ತಿ

    19 ವರ್ಷದ ಈ ಯುವತಿ ತನ್ನ ಓದಿಗಾಗಿ ಮಾಡಿದ್ದು ಏನು ಗೊತ್ತಾ..!ಮುಂದೆ ಓದಿ ಶಾಕ್…

    ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.

  • ಹಣ ಕಾಸು

    10 ರೂಪಾಯಿ ನಾಣ್ಯವನ್ನು ಹೊಂದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ..

    10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.