ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಪಿಂಗ್ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

1.ಗಡಿಬಿಡಿಯಲ್ಲಿ ಶಾಪಿಂಗ್ ಖಂಡಿತ ಮಾಡ್ಬೇಡಿ:-
ಅಯ್ಯೋ ಟೈಂ ಇಲ್ಲ.. ಬೇಗ ಹೋಗ್ಬೇಕು ಅಂದುಕೊಂಡು ಎಂದೂ ಶಾಪಿಂಗ್ ಮಾಡ್ಬೇಡಿ. ಇಂತ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಡಿಸೈನ್ಗಳನ್ನ ನೋಡದೆ ಮೊದಲು ಅಂಗಡಿಗೆ ಹೋದಾಗ ಯಾವುದು ಕಣ್ಣಿಗೆ ಚೆನ್ನಾಗಿ ಕಾಣುತ್ತೋ ಅದನ್ನೇ ಕೊಂಡುಕೊಳ್ತೀವಿ.

ಆದ್ರೆ ಇನ್ನೂ ಸ್ವಲ್ಪ ಸಮಯ ಹುಡುಕಿದ್ರೆ ಅದಕ್ಕಿಂತ ಚೆಂದದ ಡಿಸೈನ್ವುಳ್ಳ ಬಟ್ಟೆ ಸಿಗಬಹುದು.
2.ಟ್ರಯಲ್ ಮಾಡದೆ ಪರ್ಚೇಸ್ ಮಾಡ್ಬೇಡಿ:-
ಕಣ್ಣಿಗೆ ಚೆಂದವಾಗಿ ಕಂಡ ಬಟ್ಟೆಯನ್ನ ಧರಿಸಿ ನೋಡಿದಾಗ ಅದು ನಿಮಗೆ ಸೂಟ್ ಆಗದಿರಬಹುದು. ಅಥವಾ ಫಿಟಿಂಗ್ನಲ್ಲಿ ವ್ಯತ್ಯಾಸವಿರುವ ಸಾಧ್ಯತೆಯೂ ಇರುತ್ತದೆ.

ಹೀಗಾಗಿ ಯಾವಾಗ್ಲೂ ಟ್ರಯಲ್ ನೋಡಿಯೇ ಬಟ್ಟೆ ಖರೀದಿ ಮಾಡಿ. ಅದರಲ್ಲೂ ವಿವಿಧ ಬ್ರ್ಯಾಂಡ್ಗಳ ಜೀನ್ಸ್ ಮತ್ತು ಟಾಪ್ಗಳ ಸೈಜ್ನಲ್ಲಿ ವ್ಯತ್ಯಾಸವಿರುತ್ತದೆ.
3.ಒಂದೇ ಡಿಸೈನ್ನಲ್ಲಿ ಬೇರೆ ಬೇರೆ ಬಣ್ಣದ ಬಟ್ಟೆ ತಗೋಬೇಡಿ:-
ಒಂದು ಟೀ ಶರ್ಟ್/ಟಾಪ್/ಪ್ಯಾಂಟ್ ಇಷ್ಟವಾದ್ರೆ ಅದೇ ಡಿಸೈನ್ನಲ್ಲಿ ಮೂರ್ನಾಲ್ಕು ವಿವಿಧ ಬಣ್ಣದ ಟೀ-ಶರ್ಟ್/ಟಾಪ್ ತೆಗೆದುಕೊಳ್ಳೋದನ್ನ ಮಾಡ್ಬೇಡಿ. ಸಾಕಷ್ಟು ವೆರೈಟಿಯ ಡಿಸೈನ್ಗಳು ಇರುವಾಗ ಒಂದೇ ಡಿಸೈನ್ಗೆ ಅಂಟಿಕೊಳ್ಳೋದು ಯಾಕೆ?

4.ನಿಮಗೆ ಫಿಟ್ ಆಗದ ಬಟ್ಟೆಯನ್ನ ಅಲ್ಲೇ ಬಿಡಿ:-
ಅಯ್ಯೋ ಈ ಟಾಪ್ ಎಷ್ಟೊಂದು ಚೆನ್ನಾಗಿದೆ… ಆದ್ರೆ ನನಗೆ ಸ್ವಲ್ಪ ಟೈಟ್ ಆಗ್ತಿದೆ… ಪರ್ವಾಗಿಲ್ಲ, ಮುಂದೆ ಸಣ್ಣ ಆಗ್ತೀನಿ…. ಎಂತೆಲ್ಲಾ ಅಂದುಕೊಂಡು ನಿಮಗೆ ಫಿಟ್ ಆಗದಿರುವ ಬಟ್ಟೆಯನ್ನ ಖರೀದಿಸಬೇಡಿ. ತುಂಬಾ ಇಷ್ಟವಾದ ಬಟ್ಟೆ ಸ್ವಲ್ಪ ಇದ್ದು, ನಿಮ್ಮ ಸೈಜ್ ನಲ್ಲಿ ಲಭ್ಯವಿಲ್ಲದಿದ್ರೆ ಅದನ್ನ ಟೈಲರ್ ಬಳಿ ಕೊಟ್ಟು ಫಿಟ್ ಮಾಡಿಸಿಕೊಳ್ಳಬಹುದು.

5.ಸೇಲ್ ಇದ್ದಾಗ ಶಾಪಿಂಗ್ ಹೋಗಿ:-
ಹೊಸ ಡಿಸೈನ್ನ ಬಟ್ಟೆಗಳ ಬೆಲೆ ತುಂಬಾ ದುಬಾರಿ ಎನಿಸಿದ್ರೆ ಸ್ವಲ್ಪ ಕಾಯಿರಿ. ಸ್ವಲ್ಪ ಸಮಯದ ನಂತರ ಡಿಸ್ಕೌಂಟ್ ಸೇಲ್ ಹಾಕಿದಾಗ ಅದೇ ಬಟ್ಟೆ ಕಡಿಮೆ ಬೆಲೆ/ ಅರ್ಧ ಬೆಲೆಗೂ ಸಿಗಬಹುದು. ಹಾಗಂತ ಎಲ್ಲಾ ಬಟ್ಟೆಗಳು ಸೇಲ್ನಲ್ಲಿ ಬರುತ್ತವೆ ಅಂದ್ಕೋಬೇಡಿ. ಇಂತದ್ದೊಂದು ಜಾಕೇಟ್ ಖರೀದಿಸಬೇಕು ಅಂದ್ಕೊಂಡು ಅದು ತುಂಬಾ ದಿನಗಳ ನಂತರ ಸಿಕ್ಕರೆ ಅದನ್ನ ಆಗಲೇ ಖರೀದಿಸಿದ್ರೆ ಉತ್ತಮ. ಸಾಮಾನ್ಯವಾಗಿ ಸಿಗೋ ಉಡುಪುಗಳಾದ್ರೆ ಸೇಲ್ ಹಾಕಿದಾಗಲೇ ಖರೀದಿ ಮಾಡಿ.

6.ಫ್ರೆಂಡ್ಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೇ ಇರಬೇಡಿ:-
ನಿಮ್ಮ ಸ್ಟೈಲ್ ಅಥವಾ ಟೇಸ್ಟ್ ನಿಮ್ಮ ಸ್ನೇಹಿತರಿಗೆ ಇಷ್ಟವಾಗದಿರಬಹುದು. ಅಥವಾ ನೀವು ಆರಿಸಿದ ಬಟ್ಟೆ ಚೆನ್ನಾಗಿಲ್ಲ ಅಂತಲೂ ಅವರು ಹೇಳಿಬಿಡಬಹುದು. ಆದ್ರೆ ಆ ಬಟ್ಟೆಯನ್ನ ಯಾವ ರೀತಿ ಸ್ಟೈಲ್ ಮಾಡಬೇಕು , ಯಾವುದರೊಂದಿಗೆ ಮ್ಯಾಚ್ ಮಾಡಿ ಹಾಕೋಬೇಕು ಅನ್ನೋದು ಅವರಿಗಿಂತ ಚೆನ್ನಾಗಿ ನಿಮಗೆ ಗೊತ್ತಿರುತ್ತದೆ. ಹೀಗಾಗಿ ಗೆಳೆಯ/ ಗೆಳತಿಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೆ ಇದ್ರೆ ನಿಮಗೇ ಲಾಸ್. ಸ್ನೇಹಿತರಿಗಿಂತ ನಿಮ್ಮ ಟೇಸ್ಟ್ ಭಿನ್ನವಾಗಿದ್ರೆ ಒಬ್ಬರೇ ಶಾಪಿಂಗ್ ಮಾಡಲು ಹೋಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…