ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಭಕ್ತರು ತಮ್ಮ ಭಕ್ತಿಗೆ ತಕ್ಕಂತೆ, ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕಾಣಿಕೆಗಳನ್ನು ಸಲ್ಲಿಸುತ್ತಾರೆ. ಹೀಗೆ ಸಲ್ಲಿಸಿದ ಕಾಣಿಕೆಗಳಲ್ಲಿ ಭಾಗಶಃ ಚಿನ್ನದ ಕಾಣಿಕೆಯೇ ಹೆಚ್ಚಗಿದೆ ಎಂದು ಅಂದಾಜಿಸಲಾಗಿದೆ. ತಿರುಪತಿಯ ತಮ್ಮಪ್ಪನ ದೇವಾಲಯ, ಜಮ್ಮು ಕಾಶ್ಮೀರದ ವೈಷ್ಣೋ ದೇವತೆಯ ದೇವಾಲಯ, ಅನಂತ ಪದ್ಮನಾಭ ಸ್ವಾಮಿ ದೇವಾಲಯ, ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶೇಖರಣೆಗೊಂಡಿರುವ ಒಟ್ಟು ಚಿನ್ನದ ಮೌಲ್ಯ, ಬರೋಬ್ಬರಿ 50 ಬಿಲಿಯನ್ ರೂಪಾಯಿಗಳು.

ತಿರುಮಲ ವೆಂಕಟೇಶ್ವರ ದೇವಸ್ಥಾನ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಬಳಿ ತಿರುಮಲ ಬೆಟ್ಟದ ಪಟ್ಟಣದಲ್ಲಿ ಪ್ರಸಿದ್ಧ ವೈದಿಕ ದೇವಾಲಯ ಆಗಿದೆ .ಇದು ಹೈದರಾಬಾದ್ ನಿಂದ ಸುಮಾರು 600 ಕಿ ( 370 ಮೈಲಿ) , ಚೆನೈ ನಿಂದ 138 ಕಿ ( 86 ಮೈಲಿ) ಮತ್ತು ಬೆಂಗಳೂರಿನಿಂದ 291 ಕಿಮೀ ( 181 ಮೈಲು) ದುರದಲ್ಲಿದೆ. ತಿರುಮಲ ಬೆಟ್ಟ ಸಮುದ್ರ ಮಟ್ಟದಿಂದ 853m ಮತ್ತು ಪ್ರದೇಶದಿಂದ 10,33 ಚದರ ಮೈಲಿ ( 27 ಕಿಮಿ 2 ) ಇದೆ . ತಿರುಪತಿ ತಿಮ್ಮಪ್ಪ ಎಷ್ಟು ಶ್ರೀಮಂತ ದೇವರು ಎಂದರೆ, ಪ್ರತಿ ತಿಂಗಳು 80 ರಿಂದ 100ಕಿಲೋ ಚಿನ್ನವನ್ನು ಭಕ್ತರು ತಿಮ್ಮಪ್ಪನಿಗೆ ಕಾಣಿಕೆಯಾಗಿ ನೀಡ್ತಾರಂತೆ. ಒಟ್ಟಾರೆಯಾಗಿ ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿ ಸುಮರು 70,000 ಕೋಟಿ ಮವಲ್ಯದ ಚಿನ್ನ ಅಡಗಿ ಕುಳಿತಿದೆ.ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿರುವ ಚಿನ್ನವನ್ನು ಕೆಲವು ಬ್ಯಾಂಕಿನಲ್ಲಿ ಇಡಲಾಗಿದೆ. ಇದರ ಬಡ್ಡಿಯೇ ಸುಮಾರು ಕೋಟಿಗಟ್ಟಲೇ ಬರುತ್ತದೆ ಎಂದು ಎಂದು ಮೂಲಗಳು ಅಂದಾಜಿಸಿವೆ. ಇಂಡಿಯನ್ ಓವರ್ಸಿಸ್ ಬ್ಯಾಂಕಿನಲ್ಲಿ 1353 ಕಿಲೋ, ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2275 ಕಿಲೋ ಚಿನ್ನವನ್ನು ಠೇವಣಿ ಮಾಡಿ ಇಡಲಾಗಿದೆ.

ಕೇರಳದಲ್ಲಿರುವ ಒಂದು ಹಿಂದೂ ಪುಣ್ಯ ಕ್ಷೇತ್ರ. ಇದು ಕೇರಳದ ಪಶ್ಚಿಮ ಘಟ್ಟ ಪರ್ವತ ಶ್ರೇಣಿಯಲ್ಲಿರುವ ಪತ್ತನಂತಿಟ್ಟ ಜಿಲ್ಲೆಯಲ್ಲಿದೆ. ಇಲ್ಲಿ ಸ್ವಾಮಿ ಅಯ್ಯಪ್ಪನ ದೇವಾಲಯವಿದೆ.ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನ ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ಸಾಸ್ತಾ ದೇವಾಲಯಗಳಲ್ಲಿ ಒಂದಾಗಿದೆ. ಶಬರಿಮಲೆಯ ದೇವಾಲಯ ದಕ್ಷಿಣ ಭಾರತದ ಅತ್ಯಂತ ದೂರದ ದೇವಾಲಯಗಳಲ್ಲಿ ಒಂದಾಗಿದೆ ಆದರು ಮೂರು ನಾಲ್ಕು ದಶಲಕ್ಷದಷ್ಟು ಯಾತ್ರಿಗಳು ಪ್ರತಿ ವರ್ಷ ಸೆಳೆಯುತ್ತದೆ. ಪರ್ವತಗಳನ್ನು ಮತ್ತು ದಟ್ಟವಾದ ಅರಣ್ಯದಿಂದ ಸುತ್ತುವರೆದಿದೆ. ಬಹುಶಃ ಕೇರಳದೆ ಅತ್ಯುತ್ತಮ ತೀರ್ಥಯಾತ್ರಾ ಸ್ಥಳವಾಗಿದೆ ಶಬರಿಮಲೆ ಆಗಿದೆ. ತೀರ್ಥಯಾತ್ರೆ ನವೆಂಬರ್ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ಜನವರಿ ಕೊನೆಯಾಗುತ್ತದೆ . ದೇವಾಲಯದ ಭಾರತದ ದಕ್ಷಿಣ ರಾಜ್ಯಗಳ ,ದೇಶದ ಮತ್ತು ವಿದೇಶದಲ್ಲಿ ಇತರ ಭಾಗಗಳಿಂದ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ. ಶಬರಿಮಲೆ ಸ್ವಾಮಿಯ ಒಟ್ಟು ಆರ್ಥಿಕ ವರಮಾನ ಎಷ್ಟು ಗೊತ್ತೇ? ಬರೋಬ್ಬರಿ 105 ಕೋಟಿಗಳು. ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 15 ಕಿಲೋಗಳಷ್ಟು ಚಿನ್ನ ಇದೆ ಎಂದು ಹೇಳಲಾಗುತ್ತದೆ.

ಕಟ್ರಾ ಅಥವಾ ಕಟ್ರಾ ವೈಷ್ಣೋ ದೇವಿ ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ್ ಜಿಲ್ಲೆಯ ಒಂದು ಸಣ್ಣ ಪಟ್ಟಣ ಮತ್ತು ವೈಷ್ಣೋ ದೇವಿ ಪವಿತ್ರ ದೇವಾಲಯ ನೆಲೆಗೊಂಡಿರುವ ತ್ರಿಕೂಟ ಬೆಟ್ಟಗಳ ತಪ್ಪಲಿನಲ್ಲಿ ಸ್ಥಿತವಾಗಿದೆ. ಅದು ಜಮ್ಮು ನಗರದಿಂದ ೪೨ ಕಿ.ಮಿ. ದೂರದಲ್ಲಿ ನೆಲೆಗೊಂಡಿದೆ. ಭಾರತದ ಮುಂಚೂಣಿಯಲ್ಲಿರುವ ತಾಂತ್ರಿಕ ವಿಶ್ವವಿದ್ಯಾಲಯಗಳ ಪೈಕಿ ಒಂದಾದ ಶ್ರೀ ಮಾತಾ ವೈಷ್ಣೋ ದೇವಿ ವಿಶ್ವವಿದ್ಯಾಲಯವೂ ಇಲ್ಲಿ ನೆಲೆಗೊಂಡಿದೆ.
ಅತಿ ಶ್ರೀಮಂತ ದೇವಾಲಯಗಳಲ್ಲಿ 5 ನೇ ಸ್ಥಾನದಲ್ಲಿ ಇರುವ ದೇವಾಲಯ ಜಮ್ಮು ಕಾಶ್ಮೀರದ ವೈಷ್ಣೋ ದೇವಯಿ ದೇವಾಲಯ. ಇಲ್ಲಿಗೆ ನವರಾತ್ರಿ ಸಮಯದಲ್ಲಿ ಕನಿಷ್ಟ ಸುಮಾರು 80 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವೈಷ್ಣೋ ದೇವಿಯ ಸನ್ನಿಧಿಯಲ್ಲಿರುವ ಒಟ್ಟು ಚಿನ್ನ ಎಂದರೆ 20,000 ಟನ್ ಎಂದು ಅಂದಾಜಿಸಲಾಗಿದೆ.

ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯ 108 ವಿಷ್ಣು ದೇವಾಲಯಗಳಲ್ಲಿ ಅತ್ಯಂತ ಪ್ರಮುಖ ದೇವಾಲಯವಾಗಿದೆ. ಇಲ್ಲಿ ನೀವು ಶೇಷ ಶಯನ ಅನಂತ ಪದ್ಮನಾಭನ ದಿವ್ಯ ಮೂರ್ತಿಯನ್ನು ಕಾಣಬಹುದು. ಮಲಗಿದ ರೂಪದಲ್ಲಿರುವ ಇಂತಹ ಬೃಹತ್ ಮೂರ್ತಿಯನ್ನು ನೀವು ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ. ಇಲ್ಲಿ ವಿಷ್ಣು ತಾವರೆಯ ಮೇಲೆ ಮಲಗಿರುವುದರಿಂದ ಪದ್ಮನಾಭ ಎಂದು ಕರೆಯಲಾಗುತ್ತದೆ. ಕೇರಳದ ಅನಂತ ಪದ್ಮನಾಭಸ್ವಾಮಿ ದೇವಾಲಯವು ಭಾರತದ ಅತಿ ಶ್ರೀಮಂತ ದೇವಾಲಯ ಎಂಬುದಾಗಿ ಗುರ್ತಿಸಿಕೊಂಡಿದೆ. ಈ ದೇವಾಲಯದಲ್ಲಿನ ಒಟ್ಟು ಚಿನ್ನದ ಮೌಲ್ಯ 1 ಲಕ್ಷ ಕೋಟಿ ರೂಪಾಯಿಗಳು..

ಗುರುವಾಯೂರು, ಗುರುಪಾವನಪುರಿ ಎಂದೂ ಪರಿಚಿತವಾಗಿದೆ, ಭಾರತದ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಒಂದು ಪುರಸಭಾ ಪಟ್ಟಣ. ಇದು, ದೈನಂದಿನ ಭಕ್ತಾದಿಗಳ ಸಂಖ್ಯೆಯ ದೃಷ್ಟಿಯಿಂದ, ಭಾರತದ ನಾಲ್ಕನೆ ಅತಿ ದೊಡ್ಡ ದೇವಸ್ಥಾನವೆನಿಸಿರುವ ಗುರುವಾಯೂರು ಶ್ರೀ ಕೃಷ್ಣ ದೇವಾಲಯದ ನೆಲೆಯಾಗಿದೆ. ಗುರುವಾಯೂರು, ದಂತಕಥೆಗಳ ಪ್ರಕಾರ, ಗುರುವಾಯೂರು ದೇವಸ್ಥಾನದ ಮೂರ್ತಿಯಷ್ಟು ಅಂದರೆ, 5000 ವರ್ಷಗಳಷ್ಟು ಹಳೆಯದಿರಬಹುದು.
ಕೇರಳಾದಲ್ಲಿ ಇರುವ ಖ್ಯಾತ ಹಿಂದೂ ದೇವಾಲಯ ಗುರುವಾಯೂರು ದೇವಾಲಯ. ಶ್ರೀಕೃಷ್ಣನ ಆವಾಸ ಸ್ಥಾನವಾಗಿರುವ ಗುರುವಾಯೂರು ದೇವಾಲಯದ ಒಟ್ಟು ಆದಾಯ 50 ಕೋಟಿಗಳು. ಭಕ್ತರಿಂದ ಕೆಜಿಗಟ್ಟಲೇ ಚಿನ್ನ ಉಡುಗೊರೆಯಾಗಿ ಶ್ರೀಕೃಷ್ಣನ ಪಾದಕ್ಕೆ ಬಂದು ಬೀಳುತ್ತದೆ. ಈ ದೇವಾಲಯದಲ್ಲಿ ಸುಮಾರು 600ಕಿಲೋಗಿಂತಲೂ ಹೆಚ್ಚಿನ ಪ್ರಮಾಣದ ಚಿನ್ನ ಇದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ 500 ಕಿಲೋ ಚಿನ್ನವನ್ನು ಭಾರತೀಯ ಸ್ಟೇಟ್ ಬ್ಯಾಂಕಿನ ಮುಂಬೈ ಶಾಖೆಯಲ್ಲಿ ಠೇವಣಿ ಮಾಡಿ ಇಡಲಾಗಿದೆ. ಇನ್ನುಳಿದ ಚಿನ್ನ ದೇವಾಲಯದ ವಶದಲ್ಲಿ ಇದೆ ಎಂದು ಹೇಳಲಾಗುತ್ತದೆ.

ಮುಂಬೈನ ಖ್ಯಾತ ದೇವಾಲಯ ಶ್ರೀ ಸಿದ್ದಿ ವಿನಾಯಕ ದೆವಾಲಯ. ಗಣೇಶ ಹಬ್ಬವನ್ನು ಇಲ್ಲಿನ ಜನರು ಭಕ್ತಿಯಿಂದ, ವಿಜೃಂಭಣೆಯಿಂದ ಅಚರಿಸುತ್ತಾರೆ. ಈ ದೇವಾಲಯದಲ್ಲಿ ಒಟ್ಟಾರೆಯಾಗಿ 150 ಕಿಲೋ ಚಿನ್ನ ಇದ್ದು, ಅದರಲ್ಲಿ ಕೇವಲ 10 ಕಿಲೋ ಚಿನ್ನವನ್ನು 10 ನಲ್ಲಿ ಇಡಲಾಗಿದೆ. ಇನ್ನುಳಿದ 140 ಕಿಲೋ ಚಿನ್ನವು ದೇವಸ್ಥಾನದ ಖಜಾನೆಯಲ್ಲಿ ಭದ್ರವಾಗಿದೆ ಅಂತ ಹೇಳಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…