ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಭಕ್ತರು ತಮ್ಮ ಭಕ್ತಿಗೆ ತಕ್ಕಂತೆ, ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕಾಣಿಕೆಗಳನ್ನು ಸಲ್ಲಿಸುತ್ತಾರೆ. ಹೀಗೆ ಸಲ್ಲಿಸಿದ ಕಾಣಿಕೆಗಳಲ್ಲಿ ಭಾಗಶಃ ಚಿನ್ನದ ಕಾಣಿಕೆಯೇ ಹೆಚ್ಚಗಿದೆ ಎಂದು ಅಂದಾಜಿಸಲಾಗಿದೆ. ತಿರುಪತಿಯ ತಮ್ಮಪ್ಪನ ದೇವಾಲಯ, ಜಮ್ಮು ಕಾಶ್ಮೀರದ ವೈಷ್ಣೋ ದೇವತೆಯ ದೇವಾಲಯ, ಅನಂತ ಪದ್ಮನಾಭ ಸ್ವಾಮಿ ದೇವಾಲಯ, ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶೇಖರಣೆಗೊಂಡಿರುವ ಒಟ್ಟು ಚಿನ್ನದ ಮೌಲ್ಯ, ಬರೋಬ್ಬರಿ 50 ಬಿಲಿಯನ್ ರೂಪಾಯಿಗಳು.

ತಿರುಮಲ ವೆಂಕಟೇಶ್ವರ ದೇವಸ್ಥಾನ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಬಳಿ ತಿರುಮಲ ಬೆಟ್ಟದ ಪಟ್ಟಣದಲ್ಲಿ ಪ್ರಸಿದ್ಧ ವೈದಿಕ ದೇವಾಲಯ ಆಗಿದೆ .ಇದು ಹೈದರಾಬಾದ್ ನಿಂದ ಸುಮಾರು 600 ಕಿ ( 370 ಮೈಲಿ) , ಚೆನೈ ನಿಂದ 138 ಕಿ ( 86 ಮೈಲಿ) ಮತ್ತು ಬೆಂಗಳೂರಿನಿಂದ 291 ಕಿಮೀ ( 181 ಮೈಲು) ದುರದಲ್ಲಿದೆ. ತಿರುಮಲ ಬೆಟ್ಟ ಸಮುದ್ರ ಮಟ್ಟದಿಂದ 853m ಮತ್ತು ಪ್ರದೇಶದಿಂದ 10,33 ಚದರ ಮೈಲಿ ( 27 ಕಿಮಿ 2 ) ಇದೆ . ತಿರುಪತಿ ತಿಮ್ಮಪ್ಪ ಎಷ್ಟು ಶ್ರೀಮಂತ ದೇವರು ಎಂದರೆ, ಪ್ರತಿ ತಿಂಗಳು 80 ರಿಂದ 100ಕಿಲೋ ಚಿನ್ನವನ್ನು ಭಕ್ತರು ತಿಮ್ಮಪ್ಪನಿಗೆ ಕಾಣಿಕೆಯಾಗಿ ನೀಡ್ತಾರಂತೆ. ಒಟ್ಟಾರೆಯಾಗಿ ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿ ಸುಮರು 70,000 ಕೋಟಿ ಮವಲ್ಯದ ಚಿನ್ನ ಅಡಗಿ ಕುಳಿತಿದೆ.ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿರುವ ಚಿನ್ನವನ್ನು ಕೆಲವು ಬ್ಯಾಂಕಿನಲ್ಲಿ ಇಡಲಾಗಿದೆ. ಇದರ ಬಡ್ಡಿಯೇ ಸುಮಾರು ಕೋಟಿಗಟ್ಟಲೇ ಬರುತ್ತದೆ ಎಂದು ಎಂದು ಮೂಲಗಳು ಅಂದಾಜಿಸಿವೆ. ಇಂಡಿಯನ್ ಓವರ್ಸಿಸ್ ಬ್ಯಾಂಕಿನಲ್ಲಿ 1353 ಕಿಲೋ, ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2275 ಕಿಲೋ ಚಿನ್ನವನ್ನು ಠೇವಣಿ ಮಾಡಿ ಇಡಲಾಗಿದೆ.

ಕೇರಳದಲ್ಲಿರುವ ಒಂದು ಹಿಂದೂ ಪುಣ್ಯ ಕ್ಷೇತ್ರ. ಇದು ಕೇರಳದ ಪಶ್ಚಿಮ ಘಟ್ಟ ಪರ್ವತ ಶ್ರೇಣಿಯಲ್ಲಿರುವ ಪತ್ತನಂತಿಟ್ಟ ಜಿಲ್ಲೆಯಲ್ಲಿದೆ. ಇಲ್ಲಿ ಸ್ವಾಮಿ ಅಯ್ಯಪ್ಪನ ದೇವಾಲಯವಿದೆ.ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನ ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ಸಾಸ್ತಾ ದೇವಾಲಯಗಳಲ್ಲಿ ಒಂದಾಗಿದೆ. ಶಬರಿಮಲೆಯ ದೇವಾಲಯ ದಕ್ಷಿಣ ಭಾರತದ ಅತ್ಯಂತ ದೂರದ ದೇವಾಲಯಗಳಲ್ಲಿ ಒಂದಾಗಿದೆ ಆದರು ಮೂರು ನಾಲ್ಕು ದಶಲಕ್ಷದಷ್ಟು ಯಾತ್ರಿಗಳು ಪ್ರತಿ ವರ್ಷ ಸೆಳೆಯುತ್ತದೆ. ಪರ್ವತಗಳನ್ನು ಮತ್ತು ದಟ್ಟವಾದ ಅರಣ್ಯದಿಂದ ಸುತ್ತುವರೆದಿದೆ. ಬಹುಶಃ ಕೇರಳದೆ ಅತ್ಯುತ್ತಮ ತೀರ್ಥಯಾತ್ರಾ ಸ್ಥಳವಾಗಿದೆ ಶಬರಿಮಲೆ ಆಗಿದೆ. ತೀರ್ಥಯಾತ್ರೆ ನವೆಂಬರ್ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ಜನವರಿ ಕೊನೆಯಾಗುತ್ತದೆ . ದೇವಾಲಯದ ಭಾರತದ ದಕ್ಷಿಣ ರಾಜ್ಯಗಳ ,ದೇಶದ ಮತ್ತು ವಿದೇಶದಲ್ಲಿ ಇತರ ಭಾಗಗಳಿಂದ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ. ಶಬರಿಮಲೆ ಸ್ವಾಮಿಯ ಒಟ್ಟು ಆರ್ಥಿಕ ವರಮಾನ ಎಷ್ಟು ಗೊತ್ತೇ? ಬರೋಬ್ಬರಿ 105 ಕೋಟಿಗಳು. ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 15 ಕಿಲೋಗಳಷ್ಟು ಚಿನ್ನ ಇದೆ ಎಂದು ಹೇಳಲಾಗುತ್ತದೆ.

ಕಟ್ರಾ ಅಥವಾ ಕಟ್ರಾ ವೈಷ್ಣೋ ದೇವಿ ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ್ ಜಿಲ್ಲೆಯ ಒಂದು ಸಣ್ಣ ಪಟ್ಟಣ ಮತ್ತು ವೈಷ್ಣೋ ದೇವಿ ಪವಿತ್ರ ದೇವಾಲಯ ನೆಲೆಗೊಂಡಿರುವ ತ್ರಿಕೂಟ ಬೆಟ್ಟಗಳ ತಪ್ಪಲಿನಲ್ಲಿ ಸ್ಥಿತವಾಗಿದೆ. ಅದು ಜಮ್ಮು ನಗರದಿಂದ ೪೨ ಕಿ.ಮಿ. ದೂರದಲ್ಲಿ ನೆಲೆಗೊಂಡಿದೆ. ಭಾರತದ ಮುಂಚೂಣಿಯಲ್ಲಿರುವ ತಾಂತ್ರಿಕ ವಿಶ್ವವಿದ್ಯಾಲಯಗಳ ಪೈಕಿ ಒಂದಾದ ಶ್ರೀ ಮಾತಾ ವೈಷ್ಣೋ ದೇವಿ ವಿಶ್ವವಿದ್ಯಾಲಯವೂ ಇಲ್ಲಿ ನೆಲೆಗೊಂಡಿದೆ.
ಅತಿ ಶ್ರೀಮಂತ ದೇವಾಲಯಗಳಲ್ಲಿ 5 ನೇ ಸ್ಥಾನದಲ್ಲಿ ಇರುವ ದೇವಾಲಯ ಜಮ್ಮು ಕಾಶ್ಮೀರದ ವೈಷ್ಣೋ ದೇವಯಿ ದೇವಾಲಯ. ಇಲ್ಲಿಗೆ ನವರಾತ್ರಿ ಸಮಯದಲ್ಲಿ ಕನಿಷ್ಟ ಸುಮಾರು 80 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವೈಷ್ಣೋ ದೇವಿಯ ಸನ್ನಿಧಿಯಲ್ಲಿರುವ ಒಟ್ಟು ಚಿನ್ನ ಎಂದರೆ 20,000 ಟನ್ ಎಂದು ಅಂದಾಜಿಸಲಾಗಿದೆ.

ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯ 108 ವಿಷ್ಣು ದೇವಾಲಯಗಳಲ್ಲಿ ಅತ್ಯಂತ ಪ್ರಮುಖ ದೇವಾಲಯವಾಗಿದೆ. ಇಲ್ಲಿ ನೀವು ಶೇಷ ಶಯನ ಅನಂತ ಪದ್ಮನಾಭನ ದಿವ್ಯ ಮೂರ್ತಿಯನ್ನು ಕಾಣಬಹುದು. ಮಲಗಿದ ರೂಪದಲ್ಲಿರುವ ಇಂತಹ ಬೃಹತ್ ಮೂರ್ತಿಯನ್ನು ನೀವು ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ. ಇಲ್ಲಿ ವಿಷ್ಣು ತಾವರೆಯ ಮೇಲೆ ಮಲಗಿರುವುದರಿಂದ ಪದ್ಮನಾಭ ಎಂದು ಕರೆಯಲಾಗುತ್ತದೆ. ಕೇರಳದ ಅನಂತ ಪದ್ಮನಾಭಸ್ವಾಮಿ ದೇವಾಲಯವು ಭಾರತದ ಅತಿ ಶ್ರೀಮಂತ ದೇವಾಲಯ ಎಂಬುದಾಗಿ ಗುರ್ತಿಸಿಕೊಂಡಿದೆ. ಈ ದೇವಾಲಯದಲ್ಲಿನ ಒಟ್ಟು ಚಿನ್ನದ ಮೌಲ್ಯ 1 ಲಕ್ಷ ಕೋಟಿ ರೂಪಾಯಿಗಳು..

ಗುರುವಾಯೂರು, ಗುರುಪಾವನಪುರಿ ಎಂದೂ ಪರಿಚಿತವಾಗಿದೆ, ಭಾರತದ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಒಂದು ಪುರಸಭಾ ಪಟ್ಟಣ. ಇದು, ದೈನಂದಿನ ಭಕ್ತಾದಿಗಳ ಸಂಖ್ಯೆಯ ದೃಷ್ಟಿಯಿಂದ, ಭಾರತದ ನಾಲ್ಕನೆ ಅತಿ ದೊಡ್ಡ ದೇವಸ್ಥಾನವೆನಿಸಿರುವ ಗುರುವಾಯೂರು ಶ್ರೀ ಕೃಷ್ಣ ದೇವಾಲಯದ ನೆಲೆಯಾಗಿದೆ. ಗುರುವಾಯೂರು, ದಂತಕಥೆಗಳ ಪ್ರಕಾರ, ಗುರುವಾಯೂರು ದೇವಸ್ಥಾನದ ಮೂರ್ತಿಯಷ್ಟು ಅಂದರೆ, 5000 ವರ್ಷಗಳಷ್ಟು ಹಳೆಯದಿರಬಹುದು.
ಕೇರಳಾದಲ್ಲಿ ಇರುವ ಖ್ಯಾತ ಹಿಂದೂ ದೇವಾಲಯ ಗುರುವಾಯೂರು ದೇವಾಲಯ. ಶ್ರೀಕೃಷ್ಣನ ಆವಾಸ ಸ್ಥಾನವಾಗಿರುವ ಗುರುವಾಯೂರು ದೇವಾಲಯದ ಒಟ್ಟು ಆದಾಯ 50 ಕೋಟಿಗಳು. ಭಕ್ತರಿಂದ ಕೆಜಿಗಟ್ಟಲೇ ಚಿನ್ನ ಉಡುಗೊರೆಯಾಗಿ ಶ್ರೀಕೃಷ್ಣನ ಪಾದಕ್ಕೆ ಬಂದು ಬೀಳುತ್ತದೆ. ಈ ದೇವಾಲಯದಲ್ಲಿ ಸುಮಾರು 600ಕಿಲೋಗಿಂತಲೂ ಹೆಚ್ಚಿನ ಪ್ರಮಾಣದ ಚಿನ್ನ ಇದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ 500 ಕಿಲೋ ಚಿನ್ನವನ್ನು ಭಾರತೀಯ ಸ್ಟೇಟ್ ಬ್ಯಾಂಕಿನ ಮುಂಬೈ ಶಾಖೆಯಲ್ಲಿ ಠೇವಣಿ ಮಾಡಿ ಇಡಲಾಗಿದೆ. ಇನ್ನುಳಿದ ಚಿನ್ನ ದೇವಾಲಯದ ವಶದಲ್ಲಿ ಇದೆ ಎಂದು ಹೇಳಲಾಗುತ್ತದೆ.

ಮುಂಬೈನ ಖ್ಯಾತ ದೇವಾಲಯ ಶ್ರೀ ಸಿದ್ದಿ ವಿನಾಯಕ ದೆವಾಲಯ. ಗಣೇಶ ಹಬ್ಬವನ್ನು ಇಲ್ಲಿನ ಜನರು ಭಕ್ತಿಯಿಂದ, ವಿಜೃಂಭಣೆಯಿಂದ ಅಚರಿಸುತ್ತಾರೆ. ಈ ದೇವಾಲಯದಲ್ಲಿ ಒಟ್ಟಾರೆಯಾಗಿ 150 ಕಿಲೋ ಚಿನ್ನ ಇದ್ದು, ಅದರಲ್ಲಿ ಕೇವಲ 10 ಕಿಲೋ ಚಿನ್ನವನ್ನು 10 ನಲ್ಲಿ ಇಡಲಾಗಿದೆ. ಇನ್ನುಳಿದ 140 ಕಿಲೋ ಚಿನ್ನವು ದೇವಸ್ಥಾನದ ಖಜಾನೆಯಲ್ಲಿ ಭದ್ರವಾಗಿದೆ ಅಂತ ಹೇಳಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…