ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಭಕ್ತರು ತಮ್ಮ ಭಕ್ತಿಗೆ ತಕ್ಕಂತೆ, ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕಾಣಿಕೆಗಳನ್ನು ಸಲ್ಲಿಸುತ್ತಾರೆ. ಹೀಗೆ ಸಲ್ಲಿಸಿದ ಕಾಣಿಕೆಗಳಲ್ಲಿ ಭಾಗಶಃ ಚಿನ್ನದ ಕಾಣಿಕೆಯೇ ಹೆಚ್ಚಗಿದೆ ಎಂದು ಅಂದಾಜಿಸಲಾಗಿದೆ. ತಿರುಪತಿಯ ತಮ್ಮಪ್ಪನ ದೇವಾಲಯ, ಜಮ್ಮು ಕಾಶ್ಮೀರದ ವೈಷ್ಣೋ ದೇವತೆಯ ದೇವಾಲಯ, ಅನಂತ ಪದ್ಮನಾಭ ಸ್ವಾಮಿ ದೇವಾಲಯ, ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶೇಖರಣೆಗೊಂಡಿರುವ ಒಟ್ಟು ಚಿನ್ನದ ಮೌಲ್ಯ, ಬರೋಬ್ಬರಿ 50 ಬಿಲಿಯನ್ ರೂಪಾಯಿಗಳು.

ತಿರುಮಲ ವೆಂಕಟೇಶ್ವರ ದೇವಸ್ಥಾನ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಬಳಿ ತಿರುಮಲ ಬೆಟ್ಟದ ಪಟ್ಟಣದಲ್ಲಿ ಪ್ರಸಿದ್ಧ ವೈದಿಕ ದೇವಾಲಯ ಆಗಿದೆ .ಇದು ಹೈದರಾಬಾದ್ ನಿಂದ ಸುಮಾರು 600 ಕಿ ( 370 ಮೈಲಿ) , ಚೆನೈ ನಿಂದ 138 ಕಿ ( 86 ಮೈಲಿ) ಮತ್ತು ಬೆಂಗಳೂರಿನಿಂದ 291 ಕಿಮೀ ( 181 ಮೈಲು) ದುರದಲ್ಲಿದೆ. ತಿರುಮಲ ಬೆಟ್ಟ ಸಮುದ್ರ ಮಟ್ಟದಿಂದ 853m ಮತ್ತು ಪ್ರದೇಶದಿಂದ 10,33 ಚದರ ಮೈಲಿ ( 27 ಕಿಮಿ 2 ) ಇದೆ . ತಿರುಪತಿ ತಿಮ್ಮಪ್ಪ ಎಷ್ಟು ಶ್ರೀಮಂತ ದೇವರು ಎಂದರೆ, ಪ್ರತಿ ತಿಂಗಳು 80 ರಿಂದ 100ಕಿಲೋ ಚಿನ್ನವನ್ನು ಭಕ್ತರು ತಿಮ್ಮಪ್ಪನಿಗೆ ಕಾಣಿಕೆಯಾಗಿ ನೀಡ್ತಾರಂತೆ. ಒಟ್ಟಾರೆಯಾಗಿ ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿ ಸುಮರು 70,000 ಕೋಟಿ ಮವಲ್ಯದ ಚಿನ್ನ ಅಡಗಿ ಕುಳಿತಿದೆ.ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿರುವ ಚಿನ್ನವನ್ನು ಕೆಲವು ಬ್ಯಾಂಕಿನಲ್ಲಿ ಇಡಲಾಗಿದೆ. ಇದರ ಬಡ್ಡಿಯೇ ಸುಮಾರು ಕೋಟಿಗಟ್ಟಲೇ ಬರುತ್ತದೆ ಎಂದು ಎಂದು ಮೂಲಗಳು ಅಂದಾಜಿಸಿವೆ. ಇಂಡಿಯನ್ ಓವರ್ಸಿಸ್ ಬ್ಯಾಂಕಿನಲ್ಲಿ 1353 ಕಿಲೋ, ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2275 ಕಿಲೋ ಚಿನ್ನವನ್ನು ಠೇವಣಿ ಮಾಡಿ ಇಡಲಾಗಿದೆ.

ಕೇರಳದಲ್ಲಿರುವ ಒಂದು ಹಿಂದೂ ಪುಣ್ಯ ಕ್ಷೇತ್ರ. ಇದು ಕೇರಳದ ಪಶ್ಚಿಮ ಘಟ್ಟ ಪರ್ವತ ಶ್ರೇಣಿಯಲ್ಲಿರುವ ಪತ್ತನಂತಿಟ್ಟ ಜಿಲ್ಲೆಯಲ್ಲಿದೆ. ಇಲ್ಲಿ ಸ್ವಾಮಿ ಅಯ್ಯಪ್ಪನ ದೇವಾಲಯವಿದೆ.ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನ ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ಸಾಸ್ತಾ ದೇವಾಲಯಗಳಲ್ಲಿ ಒಂದಾಗಿದೆ. ಶಬರಿಮಲೆಯ ದೇವಾಲಯ ದಕ್ಷಿಣ ಭಾರತದ ಅತ್ಯಂತ ದೂರದ ದೇವಾಲಯಗಳಲ್ಲಿ ಒಂದಾಗಿದೆ ಆದರು ಮೂರು ನಾಲ್ಕು ದಶಲಕ್ಷದಷ್ಟು ಯಾತ್ರಿಗಳು ಪ್ರತಿ ವರ್ಷ ಸೆಳೆಯುತ್ತದೆ. ಪರ್ವತಗಳನ್ನು ಮತ್ತು ದಟ್ಟವಾದ ಅರಣ್ಯದಿಂದ ಸುತ್ತುವರೆದಿದೆ. ಬಹುಶಃ ಕೇರಳದೆ ಅತ್ಯುತ್ತಮ ತೀರ್ಥಯಾತ್ರಾ ಸ್ಥಳವಾಗಿದೆ ಶಬರಿಮಲೆ ಆಗಿದೆ. ತೀರ್ಥಯಾತ್ರೆ ನವೆಂಬರ್ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ಜನವರಿ ಕೊನೆಯಾಗುತ್ತದೆ . ದೇವಾಲಯದ ಭಾರತದ ದಕ್ಷಿಣ ರಾಜ್ಯಗಳ ,ದೇಶದ ಮತ್ತು ವಿದೇಶದಲ್ಲಿ ಇತರ ಭಾಗಗಳಿಂದ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ. ಶಬರಿಮಲೆ ಸ್ವಾಮಿಯ ಒಟ್ಟು ಆರ್ಥಿಕ ವರಮಾನ ಎಷ್ಟು ಗೊತ್ತೇ? ಬರೋಬ್ಬರಿ 105 ಕೋಟಿಗಳು. ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 15 ಕಿಲೋಗಳಷ್ಟು ಚಿನ್ನ ಇದೆ ಎಂದು ಹೇಳಲಾಗುತ್ತದೆ.

ಕಟ್ರಾ ಅಥವಾ ಕಟ್ರಾ ವೈಷ್ಣೋ ದೇವಿ ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ್ ಜಿಲ್ಲೆಯ ಒಂದು ಸಣ್ಣ ಪಟ್ಟಣ ಮತ್ತು ವೈಷ್ಣೋ ದೇವಿ ಪವಿತ್ರ ದೇವಾಲಯ ನೆಲೆಗೊಂಡಿರುವ ತ್ರಿಕೂಟ ಬೆಟ್ಟಗಳ ತಪ್ಪಲಿನಲ್ಲಿ ಸ್ಥಿತವಾಗಿದೆ. ಅದು ಜಮ್ಮು ನಗರದಿಂದ ೪೨ ಕಿ.ಮಿ. ದೂರದಲ್ಲಿ ನೆಲೆಗೊಂಡಿದೆ. ಭಾರತದ ಮುಂಚೂಣಿಯಲ್ಲಿರುವ ತಾಂತ್ರಿಕ ವಿಶ್ವವಿದ್ಯಾಲಯಗಳ ಪೈಕಿ ಒಂದಾದ ಶ್ರೀ ಮಾತಾ ವೈಷ್ಣೋ ದೇವಿ ವಿಶ್ವವಿದ್ಯಾಲಯವೂ ಇಲ್ಲಿ ನೆಲೆಗೊಂಡಿದೆ.
ಅತಿ ಶ್ರೀಮಂತ ದೇವಾಲಯಗಳಲ್ಲಿ 5 ನೇ ಸ್ಥಾನದಲ್ಲಿ ಇರುವ ದೇವಾಲಯ ಜಮ್ಮು ಕಾಶ್ಮೀರದ ವೈಷ್ಣೋ ದೇವಯಿ ದೇವಾಲಯ. ಇಲ್ಲಿಗೆ ನವರಾತ್ರಿ ಸಮಯದಲ್ಲಿ ಕನಿಷ್ಟ ಸುಮಾರು 80 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವೈಷ್ಣೋ ದೇವಿಯ ಸನ್ನಿಧಿಯಲ್ಲಿರುವ ಒಟ್ಟು ಚಿನ್ನ ಎಂದರೆ 20,000 ಟನ್ ಎಂದು ಅಂದಾಜಿಸಲಾಗಿದೆ.

ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯ 108 ವಿಷ್ಣು ದೇವಾಲಯಗಳಲ್ಲಿ ಅತ್ಯಂತ ಪ್ರಮುಖ ದೇವಾಲಯವಾಗಿದೆ. ಇಲ್ಲಿ ನೀವು ಶೇಷ ಶಯನ ಅನಂತ ಪದ್ಮನಾಭನ ದಿವ್ಯ ಮೂರ್ತಿಯನ್ನು ಕಾಣಬಹುದು. ಮಲಗಿದ ರೂಪದಲ್ಲಿರುವ ಇಂತಹ ಬೃಹತ್ ಮೂರ್ತಿಯನ್ನು ನೀವು ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ. ಇಲ್ಲಿ ವಿಷ್ಣು ತಾವರೆಯ ಮೇಲೆ ಮಲಗಿರುವುದರಿಂದ ಪದ್ಮನಾಭ ಎಂದು ಕರೆಯಲಾಗುತ್ತದೆ. ಕೇರಳದ ಅನಂತ ಪದ್ಮನಾಭಸ್ವಾಮಿ ದೇವಾಲಯವು ಭಾರತದ ಅತಿ ಶ್ರೀಮಂತ ದೇವಾಲಯ ಎಂಬುದಾಗಿ ಗುರ್ತಿಸಿಕೊಂಡಿದೆ. ಈ ದೇವಾಲಯದಲ್ಲಿನ ಒಟ್ಟು ಚಿನ್ನದ ಮೌಲ್ಯ 1 ಲಕ್ಷ ಕೋಟಿ ರೂಪಾಯಿಗಳು..

ಗುರುವಾಯೂರು, ಗುರುಪಾವನಪುರಿ ಎಂದೂ ಪರಿಚಿತವಾಗಿದೆ, ಭಾರತದ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಒಂದು ಪುರಸಭಾ ಪಟ್ಟಣ. ಇದು, ದೈನಂದಿನ ಭಕ್ತಾದಿಗಳ ಸಂಖ್ಯೆಯ ದೃಷ್ಟಿಯಿಂದ, ಭಾರತದ ನಾಲ್ಕನೆ ಅತಿ ದೊಡ್ಡ ದೇವಸ್ಥಾನವೆನಿಸಿರುವ ಗುರುವಾಯೂರು ಶ್ರೀ ಕೃಷ್ಣ ದೇವಾಲಯದ ನೆಲೆಯಾಗಿದೆ. ಗುರುವಾಯೂರು, ದಂತಕಥೆಗಳ ಪ್ರಕಾರ, ಗುರುವಾಯೂರು ದೇವಸ್ಥಾನದ ಮೂರ್ತಿಯಷ್ಟು ಅಂದರೆ, 5000 ವರ್ಷಗಳಷ್ಟು ಹಳೆಯದಿರಬಹುದು.
ಕೇರಳಾದಲ್ಲಿ ಇರುವ ಖ್ಯಾತ ಹಿಂದೂ ದೇವಾಲಯ ಗುರುವಾಯೂರು ದೇವಾಲಯ. ಶ್ರೀಕೃಷ್ಣನ ಆವಾಸ ಸ್ಥಾನವಾಗಿರುವ ಗುರುವಾಯೂರು ದೇವಾಲಯದ ಒಟ್ಟು ಆದಾಯ 50 ಕೋಟಿಗಳು. ಭಕ್ತರಿಂದ ಕೆಜಿಗಟ್ಟಲೇ ಚಿನ್ನ ಉಡುಗೊರೆಯಾಗಿ ಶ್ರೀಕೃಷ್ಣನ ಪಾದಕ್ಕೆ ಬಂದು ಬೀಳುತ್ತದೆ. ಈ ದೇವಾಲಯದಲ್ಲಿ ಸುಮಾರು 600ಕಿಲೋಗಿಂತಲೂ ಹೆಚ್ಚಿನ ಪ್ರಮಾಣದ ಚಿನ್ನ ಇದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ 500 ಕಿಲೋ ಚಿನ್ನವನ್ನು ಭಾರತೀಯ ಸ್ಟೇಟ್ ಬ್ಯಾಂಕಿನ ಮುಂಬೈ ಶಾಖೆಯಲ್ಲಿ ಠೇವಣಿ ಮಾಡಿ ಇಡಲಾಗಿದೆ. ಇನ್ನುಳಿದ ಚಿನ್ನ ದೇವಾಲಯದ ವಶದಲ್ಲಿ ಇದೆ ಎಂದು ಹೇಳಲಾಗುತ್ತದೆ.

ಮುಂಬೈನ ಖ್ಯಾತ ದೇವಾಲಯ ಶ್ರೀ ಸಿದ್ದಿ ವಿನಾಯಕ ದೆವಾಲಯ. ಗಣೇಶ ಹಬ್ಬವನ್ನು ಇಲ್ಲಿನ ಜನರು ಭಕ್ತಿಯಿಂದ, ವಿಜೃಂಭಣೆಯಿಂದ ಅಚರಿಸುತ್ತಾರೆ. ಈ ದೇವಾಲಯದಲ್ಲಿ ಒಟ್ಟಾರೆಯಾಗಿ 150 ಕಿಲೋ ಚಿನ್ನ ಇದ್ದು, ಅದರಲ್ಲಿ ಕೇವಲ 10 ಕಿಲೋ ಚಿನ್ನವನ್ನು 10 ನಲ್ಲಿ ಇಡಲಾಗಿದೆ. ಇನ್ನುಳಿದ 140 ಕಿಲೋ ಚಿನ್ನವು ದೇವಸ್ಥಾನದ ಖಜಾನೆಯಲ್ಲಿ ಭದ್ರವಾಗಿದೆ ಅಂತ ಹೇಳಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.