News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಬರುತ್ತಿದೆ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ..!ನೀವೂ ಕೂಡ ಆಡಿಶನ್’ನಲ್ಲಿ ಭಾಗವಹಿಸಿ.ಎಲ್ಲಿ,ಹೇಗೆ ತಿಳಿಯಲು ಮುಂದೆ ಓದಿ…

640

ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ ಇದಾಗಿದ್ದು,ಈಗಾಗಲೇ 3 ಸೀಸನ್’ಗಳನ್ನೂ ಯಶಸ್ವಿಯಾಗಿ ಪೂರೈಸಿದ್ದು, ಈಗ ನಾಲ್ಕನೇ ಸೀಸನ್ ಆರಂಭವಾಗುತ್ತಿದೆ.

ಏನಿದು, ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಕಾರ್ಯಕ್ರಮ..?ಹೇಗೆ ನಡೆಯುತ್ತೆ..?

ಪ್ಯಾಟೆ ಹುಡುಗಿಯರು ಹಳ್ಳಿಗೆ ಹೋಗಿ, ಹಳ್ಳಿ ಜನರಂತೆ ಜೀವನ ನಡೆಸುವ ಕಾರ್ಯಕ್ರಮವೇ ಈ ರಿಯಾಲಿಟಿ ಶೋ.ಬೆಂಗಳೂರು ನಗರದಂತ ಸಿಟಿಯಲ್ಲಿ ಹುಟ್ಟಿ ಬೆಳೆದಿರುವ, ಹಳ್ಳಿ ಜೀವನದ ಗಂಧ ಗಾಳಿಯೇ ಗೊತ್ತಿಲ್ಲದಿರುವ ಯುವತಿಯರು, ಮೂರುವರೆ ತಿಂಗಳ ಕಾಲ ಹಳ್ಳಿಯಲ್ಲಿ ಹಳ್ಳಿಗರಂತೆ ಜೀವನ ನಡೆಸುವುದರ ಜೊತೆಗೆ, ವಿವಿಧ ಬಗೆಯ ಗೇಮ್ಗಳು,ಟಾಸ್ಕ್ ಗಳು ಎಲ್ಲದರಲ್ಲಿ ಭಾಗವಹಿಸಿ ಜಯಿಸಬೇಕಾಗುತ್ತದೆ.

ಭಾಗವಹಿಸಲು ಬೇಕಾದ ಅರ್ಹತೆ…

ಭಾಗವಹಿಸುವ ಯುವತಿಯರು 18-24 ವರ್ಷದೊಳಗಿನರವರಾಗಿರಬೇಕು.ಮೂಲ ಸಿಟಿಯಲ್ಲಿ ಹುಟ್ಟಿ ಬೆಳೆದವರಾಗಿರಬೇಕು.

ಆಡಿಷನ್ ಎಲ್ಲಿ..?

ಬೆಂಗಳೂರಿನ ಮಹಾರಾಣಿ ಅಮ್ಮಣ್ಣಿ ಕಾಲೇಜಿನಲ್ಲಿ ಫೆಬ್ರವರಿ 11 ರಂದು ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4’ ಆಡಿಷನ್ ಬೆಳಿಗ್ಗೆ 9 ಗಂಟೆಯಿಂದ ಶುರುವಾಗಲಿದ್ದು, ಆಡಿಷನ್ ನಲ್ಲಿ ಪಾಸ್ ಆದವರು ನೇರವಾಗಿ ಕಾರ್ಯಕ್ರಮಕ್ಕೆ ಆಯ್ಕೆಯಾಗಬಹುದಂತೆ.ಈಗಾಗಲೇ ಸುವರ್ಣ ವಾಹಿನಿಯಲ್ಲಿ ಶೋನ ಟ್ರೈಲರ್ ಪ್ರಸಾರವಾಗುತ್ತಿದ್ದು, ಇನ್ನೇನು ಸದ್ಯದಲ್ಲೇ ಶೋ ಪ್ರಾರಂಭವಾಗಲಿದೆ.

ನಿಮ್ಗೂ ಅವಕಾಶ ಸಿಗಬಹುದು…

2015ರಲ್ಲಿ ಕೊನೆಯ ಬಾರಿಗೆ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಪ್ರಸಾರವಾಗಿದ್ಡು,ಈಗಾಗಲೇ 3 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿರುವ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಕಾರ್ಯಕ್ರಮ ಈಗ ನಾಲ್ಕನೇ ಸೀಸನ್ ಆರಂಭವಾಗುತ್ತಿದೆ. ಇದಕ್ಕಾಗಿ ಆಡಿಶನ್ ಗೆ ಆಹ್ವಾನ ಮಾಡಲಾಗಿದ್ದು, ನೀವು ಕೂಡ ಭಾಗವಹಿಸುವ ಅವಕಾಶ ಸಿಕ್ಕಿದೆ.ಚಾನ್ಸ್ ಮಿಸ್ ಮಾಡ್ಕೋಬೇಡಿ.ಒಂದು ಬಾರಿ ಪ್ರಯತ್ನಿಸಿ ನೋಡಿ.

ನಿರೂಪಕ ಯಾರು..?

ಜನಪ್ರಿಯ ಈ ರಿಯಾಲಿಟಿ ಶೋ ಇನ್ನೂ ಆಡಿಶನ್ ಹಂತದಲ್ಲಿದ್ದು,ಸ್ಪರ್ದಿಗಳ ಆಯ್ಕೆ ನಂತರ ಶೋ ಪ್ರಸಾರದ ದಿನಾಂಕ ನಿಗದಿಯಾಗಲಿದೆ. ಹಿಂದಿನ ಶೋ ಗಳ ನಿರೂಪಕರಾಗಿ ಅಕುಲ್ ಬಾಲಾಜಿ ಮತ್ತು ಸಂತೋಷ್ ಭರ್ಜರಿಯಾಗಿ ನಡೆಸಿಕೊಟ್ಟಿದ್ದರು.ಆದ್ರೆ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4 ನಿರೂಪಕರು ಯಾರು ಎಂಬುದನ್ನು ಸುವರ್ಣ ವಾಹಿನಿ ಇನ್ನೂ ಬಹಿರಂಗಗೊಳಿಸಿಲ್ಲ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಗೆಲ್ಲಲೇಬೇಕು ಅನ್ನೋರು, ಇದನ್ನ ಮಿಸ್ ಮಾಡದೇ ಓದಿ..!

    ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…

  • ಸುದ್ದಿ

    ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

    ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…

  • ಸುದ್ದಿ

    ಗಂಡನಿಗೆ ಸರ್ ಪ್ರೈಸ್ ಹಾಗಿ ಸ್ಪೆಷಲ್ ಗಿಫ್ಟ್ ನೀಡಿದ ಹೆಂಡತಿ..! ಆ ಗಿಫ್ಟ್ ಏನು ಗೋತ್ತಾ.

    ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…