ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ ಇದಾಗಿದ್ದು,ಈಗಾಗಲೇ 3 ಸೀಸನ್’ಗಳನ್ನೂ ಯಶಸ್ವಿಯಾಗಿ ಪೂರೈಸಿದ್ದು, ಈಗ ನಾಲ್ಕನೇ ಸೀಸನ್ ಆರಂಭವಾಗುತ್ತಿದೆ.

ಪ್ಯಾಟೆ ಹುಡುಗಿಯರು ಹಳ್ಳಿಗೆ ಹೋಗಿ, ಹಳ್ಳಿ ಜನರಂತೆ ಜೀವನ ನಡೆಸುವ ಕಾರ್ಯಕ್ರಮವೇ ಈ ರಿಯಾಲಿಟಿ ಶೋ.ಬೆಂಗಳೂರು ನಗರದಂತ ಸಿಟಿಯಲ್ಲಿ ಹುಟ್ಟಿ ಬೆಳೆದಿರುವ, ಹಳ್ಳಿ ಜೀವನದ ಗಂಧ ಗಾಳಿಯೇ ಗೊತ್ತಿಲ್ಲದಿರುವ ಯುವತಿಯರು, ಮೂರುವರೆ ತಿಂಗಳ ಕಾಲ ಹಳ್ಳಿಯಲ್ಲಿ ಹಳ್ಳಿಗರಂತೆ ಜೀವನ ನಡೆಸುವುದರ ಜೊತೆಗೆ, ವಿವಿಧ ಬಗೆಯ ಗೇಮ್ಗಳು,ಟಾಸ್ಕ್ ಗಳು ಎಲ್ಲದರಲ್ಲಿ ಭಾಗವಹಿಸಿ ಜಯಿಸಬೇಕಾಗುತ್ತದೆ.

ಭಾಗವಹಿಸುವ ಯುವತಿಯರು 18-24 ವರ್ಷದೊಳಗಿನರವರಾಗಿರಬೇಕು.ಮೂಲ ಸಿಟಿಯಲ್ಲಿ ಹುಟ್ಟಿ ಬೆಳೆದವರಾಗಿರಬೇಕು.

ಬೆಂಗಳೂರಿನ ಮಹಾರಾಣಿ ಅಮ್ಮಣ್ಣಿ ಕಾಲೇಜಿನಲ್ಲಿ ಫೆಬ್ರವರಿ 11 ರಂದು ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4’ ಆಡಿಷನ್ ಬೆಳಿಗ್ಗೆ 9 ಗಂಟೆಯಿಂದ ಶುರುವಾಗಲಿದ್ದು, ಆಡಿಷನ್ ನಲ್ಲಿ ಪಾಸ್ ಆದವರು ನೇರವಾಗಿ ಕಾರ್ಯಕ್ರಮಕ್ಕೆ ಆಯ್ಕೆಯಾಗಬಹುದಂತೆ.ಈಗಾಗಲೇ ಸುವರ್ಣ ವಾಹಿನಿಯಲ್ಲಿ ಶೋನ ಟ್ರೈಲರ್ ಪ್ರಸಾರವಾಗುತ್ತಿದ್ದು, ಇನ್ನೇನು ಸದ್ಯದಲ್ಲೇ ಶೋ ಪ್ರಾರಂಭವಾಗಲಿದೆ.

2015ರಲ್ಲಿ ಕೊನೆಯ ಬಾರಿಗೆ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಪ್ರಸಾರವಾಗಿದ್ಡು,ಈಗಾಗಲೇ 3 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿರುವ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಕಾರ್ಯಕ್ರಮ ಈಗ ನಾಲ್ಕನೇ ಸೀಸನ್ ಆರಂಭವಾಗುತ್ತಿದೆ. ಇದಕ್ಕಾಗಿ ಆಡಿಶನ್ ಗೆ ಆಹ್ವಾನ ಮಾಡಲಾಗಿದ್ದು, ನೀವು ಕೂಡ ಭಾಗವಹಿಸುವ ಅವಕಾಶ ಸಿಕ್ಕಿದೆ.ಚಾನ್ಸ್ ಮಿಸ್ ಮಾಡ್ಕೋಬೇಡಿ.ಒಂದು ಬಾರಿ ಪ್ರಯತ್ನಿಸಿ ನೋಡಿ.

ಜನಪ್ರಿಯ ಈ ರಿಯಾಲಿಟಿ ಶೋ ಇನ್ನೂ ಆಡಿಶನ್ ಹಂತದಲ್ಲಿದ್ದು,ಸ್ಪರ್ದಿಗಳ ಆಯ್ಕೆ ನಂತರ ಶೋ ಪ್ರಸಾರದ ದಿನಾಂಕ ನಿಗದಿಯಾಗಲಿದೆ. ಹಿಂದಿನ ಶೋ ಗಳ ನಿರೂಪಕರಾಗಿ ಅಕುಲ್ ಬಾಲಾಜಿ ಮತ್ತು ಸಂತೋಷ್ ಭರ್ಜರಿಯಾಗಿ ನಡೆಸಿಕೊಟ್ಟಿದ್ದರು.ಆದ್ರೆ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4 ನಿರೂಪಕರು ಯಾರು ಎಂಬುದನ್ನು ಸುವರ್ಣ ವಾಹಿನಿ ಇನ್ನೂ ಬಹಿರಂಗಗೊಳಿಸಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!