News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು….!

46

75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ.

ಪ್ರೀತಿ ಶುರುವಾಗಿದ್ದು ಹೇಗೆ?
1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ ಶುರುವಾಗಿದೆ. 24 ವರ್ಷದಲ್ಲಿದ್ದಾಗ ಕೇಟಿ ರಾಬಿನ್ಸ್, ಜೇನಿನ್‍ನನ್ನು ಭೇಟಿ ಮಾಡಿದ್ದರು. ಮೊದಲ ಭೇಟಿಯಲ್ಲೇ ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದರು. ರಾಬಿನ್ಸ್ ಅಮೆರಿಕದಲ್ಲಿ ವಾಸಿಸುತ್ತಿದ್ದರೆ, ಜೇನಿನ್ ಫ್ರಾನ್ಸ್ ನಲ್ಲಿ ವಾಸಿಸುತ್ತಿದ್ದರು. ರಾಬಿನ್ಸ್ ಅಮೆರಿಕದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದೇ ಸಂದರ್ಭದಲ್ಲಿ 2ನೇ ವಿಶ್ವ ಯುದ್ಧ ನಡೆಯುತ್ತಿದ್ದ ಕಾರಣ ಬೇರೆ ಕಡೆ ಕಳುಹಿಸಲಾಗಿತ್ತು. ಯುದ್ಧ ಮುಗಿದ ನಂತರ ಎಲ್ಲ ಸೈನಿಕರು ತಮ್ಮ ತಮ್ಮ ಮನೆಗೆ ಹಿಂದಿರುಗಿದ್ದರು. ಹಾಗೆಯೇ ರಾಬಿನ್ಸ್ ಕೂಡ ತಮ್ಮ ಮನೆಗೆ ಹಿಂದಿರುಗಿದ್ದರು.
ಹಿಂತಿರುಗಲಿಲ್ಲ ರಾಬಿನ್ಸ್:

ರಾಬಿನ್ಸ್ ನನ್ನನ್ನು ಬಿಟ್ಟು ಹೋಗಿದ್ದ ಸಂದರ್ಭದಲ್ಲಿ ನಾನು ತುಂಬಾ ಅತ್ತಿದ್ದೆ. ರಾಬಿನ್ಸ್ ಮತ್ತೆ ವಾಪಸ್ ಬರುತ್ತಾರೆ ಎಂಬ ಭರವಸೆಯಿಂದ ನಾನು ಆಂಗ್ಲ ಭಾಷೆ ಕೂಡ ಕಲಿತೆ. ಅವರು ಮತ್ತೆ ಬಂದಾಗ ನಾನು ಅವರ ಜೊತೆ ಆಂಗ್ಲ ಭಾಷೆ ಮಾತನಾಡಬೇಕು ಎಂದು ಆಸೆಯಿಂದ ಇದ್ದೆ. ಆದರೆ ಯುದ್ಧ ನಡೆದ ಬಳಿಕ ರಾಬಿನ್ಸ್ ಅಮೆರಿಕಗೆ ಹೊರಟೇ ಹೋದರು ಎಂದು ಜೇನಿನ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಹಿಂತಿರುಗಲಿಲ್ಲ ರಾಬಿನ್ಸ್:
ನಾನು ಕೂಡ ಜೇನಿನ್‍ನನ್ನು ಮರೆಯಲಿಲ್ಲ. ನಾನು ಈಗಲೂ ಸಹ ಜೇನಿನ್ ಫೋಟೋ ಇಟ್ಟುಕೊಂಡಿದ್ದೇನೆ. ನಾನು ಮತ್ತೆ ಹಿಂದಿರುಗಿ ಬಂದು ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಆ ಸಂದರ್ಭದಲ್ಲಿ ಹೇಳಿದ್ದೆ. ಆದರೆ ಆಗ ಅದು ಸಾಧ್ಯವಾಗಿಲ್ಲ ಎಂದು ರಾಬಿನ್ಸ್ ಹೇಳಿದ್ದಾರೆ. ಅಲ್ಲದೆ ಜೇನಿನ್ ಕೂಡ ನಾನು ರಾಬಿನ್ಸ್ ನನ್ನು ತುಂಬಾ ಪ್ರೀತಿಸುತ್ತೇನೆ. ನಾನು ಅವರನ್ನು ಎಂದಿಗೂ ಹೃದಯದಿಂದ ತೆಗೆಯಲಿಲ್ಲ ಎಂದು ಹೇಳಿದ್ದಾರೆ. ರಾಬಿನ್ಸ್ ಟ್ರಕ್‍ನಲ್ಲಿ ಯುದ್ಧಕ್ಕೆ ಹೊರಟಾಗ ನನಗೆ ತುಂಬಾ ದುಃಖ ಆಗಿತ್ತು. ನಾನು ತುಂಬಾ ಅತ್ತಿದ್ದೆ. ಯುದ್ಧ ನಡೆದ ಬಳಿಕ ಅವರು ಅಮೆರಿಕಗೆ ಹೋಗಬಾರದಿತ್ತು ಎಂದು ಜೇನಿನ್ ಹೇಳಿದ್ದಾರೆ.

ಸ್ವಲ್ಪ ವರ್ಷದ ಬಳಿಕ ಇಬ್ಬರು ಬೇರೆಯವರನ್ನು ಮದುವೆಯಾಗಿದ್ದು, ಈಗ ಇಬ್ಬರ ಸಂಗಾತಿ ಕೂಡ ನಿಧನರಾಗಿದ್ದಾರೆ. 75 ವರ್ಷಗಳ ಬಳಿಕ ಇಬ್ಬರು ಪರಸ್ಪರ ಭೇಟಿಯಾಗಿ ಭಾವುಕರಾಗಿದ್ದಾರೆ. ಅಲ್ಲದೆ ಇಬ್ಬರು ಕಿಸ್ ಮಾಡಿ ಕೆಲ ಹೊತ್ತು ಕಾಲ ಕಳೆದಿದ್ದಾರೆ. ಬಳಿಕ ರಾಬಿನ್ಸ್ ನಾನು ಈಗ ಹೋಗಬೇಕು. ನಾನು ಮತ್ತೆ ಹಿಂದಿರುಗುತ್ತೇನೆ ಎಂದು ನಿನಗೆ ಮಾತು ನೀಡುತ್ತೇನೆ ಎಂದು ಹೇಳುತ್ತಾ ಜೇನಿನ್‍ಗೆ ಐ ಲವ್ ಯೂ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…

  • ಮನರಂಜನೆ

    ಹಳ್ಳಿ ಹೈದ ಹನುಮಂತನಿಗೆ ಹೊಸ ವರ್ಷಕ್ಕೆ ಸಿಕ್ತು ಬಂಪರ್ ಆಫರ್..!

    ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.