ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ.

ಪ್ರೀತಿ ಶುರುವಾಗಿದ್ದು ಹೇಗೆ?
1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ ಶುರುವಾಗಿದೆ. 24 ವರ್ಷದಲ್ಲಿದ್ದಾಗ ಕೇಟಿ ರಾಬಿನ್ಸ್, ಜೇನಿನ್ನನ್ನು ಭೇಟಿ ಮಾಡಿದ್ದರು. ಮೊದಲ ಭೇಟಿಯಲ್ಲೇ ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದರು. ರಾಬಿನ್ಸ್ ಅಮೆರಿಕದಲ್ಲಿ ವಾಸಿಸುತ್ತಿದ್ದರೆ, ಜೇನಿನ್ ಫ್ರಾನ್ಸ್ ನಲ್ಲಿ ವಾಸಿಸುತ್ತಿದ್ದರು. ರಾಬಿನ್ಸ್ ಅಮೆರಿಕದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದೇ ಸಂದರ್ಭದಲ್ಲಿ 2ನೇ ವಿಶ್ವ ಯುದ್ಧ ನಡೆಯುತ್ತಿದ್ದ ಕಾರಣ ಬೇರೆ ಕಡೆ ಕಳುಹಿಸಲಾಗಿತ್ತು. ಯುದ್ಧ ಮುಗಿದ ನಂತರ ಎಲ್ಲ ಸೈನಿಕರು ತಮ್ಮ ತಮ್ಮ ಮನೆಗೆ ಹಿಂದಿರುಗಿದ್ದರು. ಹಾಗೆಯೇ ರಾಬಿನ್ಸ್ ಕೂಡ ತಮ್ಮ ಮನೆಗೆ ಹಿಂದಿರುಗಿದ್ದರು.
ಹಿಂತಿರುಗಲಿಲ್ಲ ರಾಬಿನ್ಸ್:

ರಾಬಿನ್ಸ್ ನನ್ನನ್ನು ಬಿಟ್ಟು ಹೋಗಿದ್ದ ಸಂದರ್ಭದಲ್ಲಿ ನಾನು ತುಂಬಾ ಅತ್ತಿದ್ದೆ. ರಾಬಿನ್ಸ್ ಮತ್ತೆ ವಾಪಸ್ ಬರುತ್ತಾರೆ ಎಂಬ ಭರವಸೆಯಿಂದ ನಾನು ಆಂಗ್ಲ ಭಾಷೆ ಕೂಡ ಕಲಿತೆ. ಅವರು ಮತ್ತೆ ಬಂದಾಗ ನಾನು ಅವರ ಜೊತೆ ಆಂಗ್ಲ ಭಾಷೆ ಮಾತನಾಡಬೇಕು ಎಂದು ಆಸೆಯಿಂದ ಇದ್ದೆ. ಆದರೆ ಯುದ್ಧ ನಡೆದ ಬಳಿಕ ರಾಬಿನ್ಸ್ ಅಮೆರಿಕಗೆ ಹೊರಟೇ ಹೋದರು ಎಂದು ಜೇನಿನ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಹಿಂತಿರುಗಲಿಲ್ಲ ರಾಬಿನ್ಸ್:
ನಾನು ಕೂಡ ಜೇನಿನ್ನನ್ನು ಮರೆಯಲಿಲ್ಲ. ನಾನು ಈಗಲೂ ಸಹ ಜೇನಿನ್ ಫೋಟೋ ಇಟ್ಟುಕೊಂಡಿದ್ದೇನೆ. ನಾನು ಮತ್ತೆ ಹಿಂದಿರುಗಿ ಬಂದು ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಆ ಸಂದರ್ಭದಲ್ಲಿ ಹೇಳಿದ್ದೆ. ಆದರೆ ಆಗ ಅದು ಸಾಧ್ಯವಾಗಿಲ್ಲ ಎಂದು ರಾಬಿನ್ಸ್ ಹೇಳಿದ್ದಾರೆ. ಅಲ್ಲದೆ ಜೇನಿನ್ ಕೂಡ ನಾನು ರಾಬಿನ್ಸ್ ನನ್ನು ತುಂಬಾ ಪ್ರೀತಿಸುತ್ತೇನೆ. ನಾನು ಅವರನ್ನು ಎಂದಿಗೂ ಹೃದಯದಿಂದ ತೆಗೆಯಲಿಲ್ಲ ಎಂದು ಹೇಳಿದ್ದಾರೆ. ರಾಬಿನ್ಸ್ ಟ್ರಕ್ನಲ್ಲಿ ಯುದ್ಧಕ್ಕೆ ಹೊರಟಾಗ ನನಗೆ ತುಂಬಾ ದುಃಖ ಆಗಿತ್ತು. ನಾನು ತುಂಬಾ ಅತ್ತಿದ್ದೆ. ಯುದ್ಧ ನಡೆದ ಬಳಿಕ ಅವರು ಅಮೆರಿಕಗೆ ಹೋಗಬಾರದಿತ್ತು ಎಂದು ಜೇನಿನ್ ಹೇಳಿದ್ದಾರೆ.
ಸ್ವಲ್ಪ ವರ್ಷದ ಬಳಿಕ ಇಬ್ಬರು ಬೇರೆಯವರನ್ನು ಮದುವೆಯಾಗಿದ್ದು, ಈಗ ಇಬ್ಬರ ಸಂಗಾತಿ ಕೂಡ ನಿಧನರಾಗಿದ್ದಾರೆ. 75 ವರ್ಷಗಳ ಬಳಿಕ ಇಬ್ಬರು ಪರಸ್ಪರ ಭೇಟಿಯಾಗಿ ಭಾವುಕರಾಗಿದ್ದಾರೆ. ಅಲ್ಲದೆ ಇಬ್ಬರು ಕಿಸ್ ಮಾಡಿ ಕೆಲ ಹೊತ್ತು ಕಾಲ ಕಳೆದಿದ್ದಾರೆ. ಬಳಿಕ ರಾಬಿನ್ಸ್ ನಾನು ಈಗ ಹೋಗಬೇಕು. ನಾನು ಮತ್ತೆ ಹಿಂದಿರುಗುತ್ತೇನೆ ಎಂದು ನಿನಗೆ ಮಾತು ನೀಡುತ್ತೇನೆ ಎಂದು ಹೇಳುತ್ತಾ ಜೇನಿನ್ಗೆ ಐ ಲವ್ ಯೂ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…