ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ.

ಪ್ರೀತಿ ಶುರುವಾಗಿದ್ದು ಹೇಗೆ?
1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ ಶುರುವಾಗಿದೆ. 24 ವರ್ಷದಲ್ಲಿದ್ದಾಗ ಕೇಟಿ ರಾಬಿನ್ಸ್, ಜೇನಿನ್ನನ್ನು ಭೇಟಿ ಮಾಡಿದ್ದರು. ಮೊದಲ ಭೇಟಿಯಲ್ಲೇ ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದರು. ರಾಬಿನ್ಸ್ ಅಮೆರಿಕದಲ್ಲಿ ವಾಸಿಸುತ್ತಿದ್ದರೆ, ಜೇನಿನ್ ಫ್ರಾನ್ಸ್ ನಲ್ಲಿ ವಾಸಿಸುತ್ತಿದ್ದರು. ರಾಬಿನ್ಸ್ ಅಮೆರಿಕದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದೇ ಸಂದರ್ಭದಲ್ಲಿ 2ನೇ ವಿಶ್ವ ಯುದ್ಧ ನಡೆಯುತ್ತಿದ್ದ ಕಾರಣ ಬೇರೆ ಕಡೆ ಕಳುಹಿಸಲಾಗಿತ್ತು. ಯುದ್ಧ ಮುಗಿದ ನಂತರ ಎಲ್ಲ ಸೈನಿಕರು ತಮ್ಮ ತಮ್ಮ ಮನೆಗೆ ಹಿಂದಿರುಗಿದ್ದರು. ಹಾಗೆಯೇ ರಾಬಿನ್ಸ್ ಕೂಡ ತಮ್ಮ ಮನೆಗೆ ಹಿಂದಿರುಗಿದ್ದರು.
ಹಿಂತಿರುಗಲಿಲ್ಲ ರಾಬಿನ್ಸ್:

ರಾಬಿನ್ಸ್ ನನ್ನನ್ನು ಬಿಟ್ಟು ಹೋಗಿದ್ದ ಸಂದರ್ಭದಲ್ಲಿ ನಾನು ತುಂಬಾ ಅತ್ತಿದ್ದೆ. ರಾಬಿನ್ಸ್ ಮತ್ತೆ ವಾಪಸ್ ಬರುತ್ತಾರೆ ಎಂಬ ಭರವಸೆಯಿಂದ ನಾನು ಆಂಗ್ಲ ಭಾಷೆ ಕೂಡ ಕಲಿತೆ. ಅವರು ಮತ್ತೆ ಬಂದಾಗ ನಾನು ಅವರ ಜೊತೆ ಆಂಗ್ಲ ಭಾಷೆ ಮಾತನಾಡಬೇಕು ಎಂದು ಆಸೆಯಿಂದ ಇದ್ದೆ. ಆದರೆ ಯುದ್ಧ ನಡೆದ ಬಳಿಕ ರಾಬಿನ್ಸ್ ಅಮೆರಿಕಗೆ ಹೊರಟೇ ಹೋದರು ಎಂದು ಜೇನಿನ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಹಿಂತಿರುಗಲಿಲ್ಲ ರಾಬಿನ್ಸ್:
ನಾನು ಕೂಡ ಜೇನಿನ್ನನ್ನು ಮರೆಯಲಿಲ್ಲ. ನಾನು ಈಗಲೂ ಸಹ ಜೇನಿನ್ ಫೋಟೋ ಇಟ್ಟುಕೊಂಡಿದ್ದೇನೆ. ನಾನು ಮತ್ತೆ ಹಿಂದಿರುಗಿ ಬಂದು ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಆ ಸಂದರ್ಭದಲ್ಲಿ ಹೇಳಿದ್ದೆ. ಆದರೆ ಆಗ ಅದು ಸಾಧ್ಯವಾಗಿಲ್ಲ ಎಂದು ರಾಬಿನ್ಸ್ ಹೇಳಿದ್ದಾರೆ. ಅಲ್ಲದೆ ಜೇನಿನ್ ಕೂಡ ನಾನು ರಾಬಿನ್ಸ್ ನನ್ನು ತುಂಬಾ ಪ್ರೀತಿಸುತ್ತೇನೆ. ನಾನು ಅವರನ್ನು ಎಂದಿಗೂ ಹೃದಯದಿಂದ ತೆಗೆಯಲಿಲ್ಲ ಎಂದು ಹೇಳಿದ್ದಾರೆ. ರಾಬಿನ್ಸ್ ಟ್ರಕ್ನಲ್ಲಿ ಯುದ್ಧಕ್ಕೆ ಹೊರಟಾಗ ನನಗೆ ತುಂಬಾ ದುಃಖ ಆಗಿತ್ತು. ನಾನು ತುಂಬಾ ಅತ್ತಿದ್ದೆ. ಯುದ್ಧ ನಡೆದ ಬಳಿಕ ಅವರು ಅಮೆರಿಕಗೆ ಹೋಗಬಾರದಿತ್ತು ಎಂದು ಜೇನಿನ್ ಹೇಳಿದ್ದಾರೆ.
ಸ್ವಲ್ಪ ವರ್ಷದ ಬಳಿಕ ಇಬ್ಬರು ಬೇರೆಯವರನ್ನು ಮದುವೆಯಾಗಿದ್ದು, ಈಗ ಇಬ್ಬರ ಸಂಗಾತಿ ಕೂಡ ನಿಧನರಾಗಿದ್ದಾರೆ. 75 ವರ್ಷಗಳ ಬಳಿಕ ಇಬ್ಬರು ಪರಸ್ಪರ ಭೇಟಿಯಾಗಿ ಭಾವುಕರಾಗಿದ್ದಾರೆ. ಅಲ್ಲದೆ ಇಬ್ಬರು ಕಿಸ್ ಮಾಡಿ ಕೆಲ ಹೊತ್ತು ಕಾಲ ಕಳೆದಿದ್ದಾರೆ. ಬಳಿಕ ರಾಬಿನ್ಸ್ ನಾನು ಈಗ ಹೋಗಬೇಕು. ನಾನು ಮತ್ತೆ ಹಿಂದಿರುಗುತ್ತೇನೆ ಎಂದು ನಿನಗೆ ಮಾತು ನೀಡುತ್ತೇನೆ ಎಂದು ಹೇಳುತ್ತಾ ಜೇನಿನ್ಗೆ ಐ ಲವ್ ಯೂ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…