ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ.

ಪ್ರೀತಿ ಶುರುವಾಗಿದ್ದು ಹೇಗೆ?
1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ ಶುರುವಾಗಿದೆ. 24 ವರ್ಷದಲ್ಲಿದ್ದಾಗ ಕೇಟಿ ರಾಬಿನ್ಸ್, ಜೇನಿನ್ನನ್ನು ಭೇಟಿ ಮಾಡಿದ್ದರು. ಮೊದಲ ಭೇಟಿಯಲ್ಲೇ ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದರು. ರಾಬಿನ್ಸ್ ಅಮೆರಿಕದಲ್ಲಿ ವಾಸಿಸುತ್ತಿದ್ದರೆ, ಜೇನಿನ್ ಫ್ರಾನ್ಸ್ ನಲ್ಲಿ ವಾಸಿಸುತ್ತಿದ್ದರು. ರಾಬಿನ್ಸ್ ಅಮೆರಿಕದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದೇ ಸಂದರ್ಭದಲ್ಲಿ 2ನೇ ವಿಶ್ವ ಯುದ್ಧ ನಡೆಯುತ್ತಿದ್ದ ಕಾರಣ ಬೇರೆ ಕಡೆ ಕಳುಹಿಸಲಾಗಿತ್ತು. ಯುದ್ಧ ಮುಗಿದ ನಂತರ ಎಲ್ಲ ಸೈನಿಕರು ತಮ್ಮ ತಮ್ಮ ಮನೆಗೆ ಹಿಂದಿರುಗಿದ್ದರು. ಹಾಗೆಯೇ ರಾಬಿನ್ಸ್ ಕೂಡ ತಮ್ಮ ಮನೆಗೆ ಹಿಂದಿರುಗಿದ್ದರು.
ಹಿಂತಿರುಗಲಿಲ್ಲ ರಾಬಿನ್ಸ್:

ರಾಬಿನ್ಸ್ ನನ್ನನ್ನು ಬಿಟ್ಟು ಹೋಗಿದ್ದ ಸಂದರ್ಭದಲ್ಲಿ ನಾನು ತುಂಬಾ ಅತ್ತಿದ್ದೆ. ರಾಬಿನ್ಸ್ ಮತ್ತೆ ವಾಪಸ್ ಬರುತ್ತಾರೆ ಎಂಬ ಭರವಸೆಯಿಂದ ನಾನು ಆಂಗ್ಲ ಭಾಷೆ ಕೂಡ ಕಲಿತೆ. ಅವರು ಮತ್ತೆ ಬಂದಾಗ ನಾನು ಅವರ ಜೊತೆ ಆಂಗ್ಲ ಭಾಷೆ ಮಾತನಾಡಬೇಕು ಎಂದು ಆಸೆಯಿಂದ ಇದ್ದೆ. ಆದರೆ ಯುದ್ಧ ನಡೆದ ಬಳಿಕ ರಾಬಿನ್ಸ್ ಅಮೆರಿಕಗೆ ಹೊರಟೇ ಹೋದರು ಎಂದು ಜೇನಿನ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಹಿಂತಿರುಗಲಿಲ್ಲ ರಾಬಿನ್ಸ್:
ನಾನು ಕೂಡ ಜೇನಿನ್ನನ್ನು ಮರೆಯಲಿಲ್ಲ. ನಾನು ಈಗಲೂ ಸಹ ಜೇನಿನ್ ಫೋಟೋ ಇಟ್ಟುಕೊಂಡಿದ್ದೇನೆ. ನಾನು ಮತ್ತೆ ಹಿಂದಿರುಗಿ ಬಂದು ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಆ ಸಂದರ್ಭದಲ್ಲಿ ಹೇಳಿದ್ದೆ. ಆದರೆ ಆಗ ಅದು ಸಾಧ್ಯವಾಗಿಲ್ಲ ಎಂದು ರಾಬಿನ್ಸ್ ಹೇಳಿದ್ದಾರೆ. ಅಲ್ಲದೆ ಜೇನಿನ್ ಕೂಡ ನಾನು ರಾಬಿನ್ಸ್ ನನ್ನು ತುಂಬಾ ಪ್ರೀತಿಸುತ್ತೇನೆ. ನಾನು ಅವರನ್ನು ಎಂದಿಗೂ ಹೃದಯದಿಂದ ತೆಗೆಯಲಿಲ್ಲ ಎಂದು ಹೇಳಿದ್ದಾರೆ. ರಾಬಿನ್ಸ್ ಟ್ರಕ್ನಲ್ಲಿ ಯುದ್ಧಕ್ಕೆ ಹೊರಟಾಗ ನನಗೆ ತುಂಬಾ ದುಃಖ ಆಗಿತ್ತು. ನಾನು ತುಂಬಾ ಅತ್ತಿದ್ದೆ. ಯುದ್ಧ ನಡೆದ ಬಳಿಕ ಅವರು ಅಮೆರಿಕಗೆ ಹೋಗಬಾರದಿತ್ತು ಎಂದು ಜೇನಿನ್ ಹೇಳಿದ್ದಾರೆ.
ಸ್ವಲ್ಪ ವರ್ಷದ ಬಳಿಕ ಇಬ್ಬರು ಬೇರೆಯವರನ್ನು ಮದುವೆಯಾಗಿದ್ದು, ಈಗ ಇಬ್ಬರ ಸಂಗಾತಿ ಕೂಡ ನಿಧನರಾಗಿದ್ದಾರೆ. 75 ವರ್ಷಗಳ ಬಳಿಕ ಇಬ್ಬರು ಪರಸ್ಪರ ಭೇಟಿಯಾಗಿ ಭಾವುಕರಾಗಿದ್ದಾರೆ. ಅಲ್ಲದೆ ಇಬ್ಬರು ಕಿಸ್ ಮಾಡಿ ಕೆಲ ಹೊತ್ತು ಕಾಲ ಕಳೆದಿದ್ದಾರೆ. ಬಳಿಕ ರಾಬಿನ್ಸ್ ನಾನು ಈಗ ಹೋಗಬೇಕು. ನಾನು ಮತ್ತೆ ಹಿಂದಿರುಗುತ್ತೇನೆ ಎಂದು ನಿನಗೆ ಮಾತು ನೀಡುತ್ತೇನೆ ಎಂದು ಹೇಳುತ್ತಾ ಜೇನಿನ್ಗೆ ಐ ಲವ್ ಯೂ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…