ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ.

ಪ್ರೀತಿ ಶುರುವಾಗಿದ್ದು ಹೇಗೆ?
1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ ಶುರುವಾಗಿದೆ. 24 ವರ್ಷದಲ್ಲಿದ್ದಾಗ ಕೇಟಿ ರಾಬಿನ್ಸ್, ಜೇನಿನ್ನನ್ನು ಭೇಟಿ ಮಾಡಿದ್ದರು. ಮೊದಲ ಭೇಟಿಯಲ್ಲೇ ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದರು. ರಾಬಿನ್ಸ್ ಅಮೆರಿಕದಲ್ಲಿ ವಾಸಿಸುತ್ತಿದ್ದರೆ, ಜೇನಿನ್ ಫ್ರಾನ್ಸ್ ನಲ್ಲಿ ವಾಸಿಸುತ್ತಿದ್ದರು. ರಾಬಿನ್ಸ್ ಅಮೆರಿಕದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದೇ ಸಂದರ್ಭದಲ್ಲಿ 2ನೇ ವಿಶ್ವ ಯುದ್ಧ ನಡೆಯುತ್ತಿದ್ದ ಕಾರಣ ಬೇರೆ ಕಡೆ ಕಳುಹಿಸಲಾಗಿತ್ತು. ಯುದ್ಧ ಮುಗಿದ ನಂತರ ಎಲ್ಲ ಸೈನಿಕರು ತಮ್ಮ ತಮ್ಮ ಮನೆಗೆ ಹಿಂದಿರುಗಿದ್ದರು. ಹಾಗೆಯೇ ರಾಬಿನ್ಸ್ ಕೂಡ ತಮ್ಮ ಮನೆಗೆ ಹಿಂದಿರುಗಿದ್ದರು.
ಹಿಂತಿರುಗಲಿಲ್ಲ ರಾಬಿನ್ಸ್:

ರಾಬಿನ್ಸ್ ನನ್ನನ್ನು ಬಿಟ್ಟು ಹೋಗಿದ್ದ ಸಂದರ್ಭದಲ್ಲಿ ನಾನು ತುಂಬಾ ಅತ್ತಿದ್ದೆ. ರಾಬಿನ್ಸ್ ಮತ್ತೆ ವಾಪಸ್ ಬರುತ್ತಾರೆ ಎಂಬ ಭರವಸೆಯಿಂದ ನಾನು ಆಂಗ್ಲ ಭಾಷೆ ಕೂಡ ಕಲಿತೆ. ಅವರು ಮತ್ತೆ ಬಂದಾಗ ನಾನು ಅವರ ಜೊತೆ ಆಂಗ್ಲ ಭಾಷೆ ಮಾತನಾಡಬೇಕು ಎಂದು ಆಸೆಯಿಂದ ಇದ್ದೆ. ಆದರೆ ಯುದ್ಧ ನಡೆದ ಬಳಿಕ ರಾಬಿನ್ಸ್ ಅಮೆರಿಕಗೆ ಹೊರಟೇ ಹೋದರು ಎಂದು ಜೇನಿನ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಹಿಂತಿರುಗಲಿಲ್ಲ ರಾಬಿನ್ಸ್:
ನಾನು ಕೂಡ ಜೇನಿನ್ನನ್ನು ಮರೆಯಲಿಲ್ಲ. ನಾನು ಈಗಲೂ ಸಹ ಜೇನಿನ್ ಫೋಟೋ ಇಟ್ಟುಕೊಂಡಿದ್ದೇನೆ. ನಾನು ಮತ್ತೆ ಹಿಂದಿರುಗಿ ಬಂದು ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಆ ಸಂದರ್ಭದಲ್ಲಿ ಹೇಳಿದ್ದೆ. ಆದರೆ ಆಗ ಅದು ಸಾಧ್ಯವಾಗಿಲ್ಲ ಎಂದು ರಾಬಿನ್ಸ್ ಹೇಳಿದ್ದಾರೆ. ಅಲ್ಲದೆ ಜೇನಿನ್ ಕೂಡ ನಾನು ರಾಬಿನ್ಸ್ ನನ್ನು ತುಂಬಾ ಪ್ರೀತಿಸುತ್ತೇನೆ. ನಾನು ಅವರನ್ನು ಎಂದಿಗೂ ಹೃದಯದಿಂದ ತೆಗೆಯಲಿಲ್ಲ ಎಂದು ಹೇಳಿದ್ದಾರೆ. ರಾಬಿನ್ಸ್ ಟ್ರಕ್ನಲ್ಲಿ ಯುದ್ಧಕ್ಕೆ ಹೊರಟಾಗ ನನಗೆ ತುಂಬಾ ದುಃಖ ಆಗಿತ್ತು. ನಾನು ತುಂಬಾ ಅತ್ತಿದ್ದೆ. ಯುದ್ಧ ನಡೆದ ಬಳಿಕ ಅವರು ಅಮೆರಿಕಗೆ ಹೋಗಬಾರದಿತ್ತು ಎಂದು ಜೇನಿನ್ ಹೇಳಿದ್ದಾರೆ.
ಸ್ವಲ್ಪ ವರ್ಷದ ಬಳಿಕ ಇಬ್ಬರು ಬೇರೆಯವರನ್ನು ಮದುವೆಯಾಗಿದ್ದು, ಈಗ ಇಬ್ಬರ ಸಂಗಾತಿ ಕೂಡ ನಿಧನರಾಗಿದ್ದಾರೆ. 75 ವರ್ಷಗಳ ಬಳಿಕ ಇಬ್ಬರು ಪರಸ್ಪರ ಭೇಟಿಯಾಗಿ ಭಾವುಕರಾಗಿದ್ದಾರೆ. ಅಲ್ಲದೆ ಇಬ್ಬರು ಕಿಸ್ ಮಾಡಿ ಕೆಲ ಹೊತ್ತು ಕಾಲ ಕಳೆದಿದ್ದಾರೆ. ಬಳಿಕ ರಾಬಿನ್ಸ್ ನಾನು ಈಗ ಹೋಗಬೇಕು. ನಾನು ಮತ್ತೆ ಹಿಂದಿರುಗುತ್ತೇನೆ ಎಂದು ನಿನಗೆ ಮಾತು ನೀಡುತ್ತೇನೆ ಎಂದು ಹೇಳುತ್ತಾ ಜೇನಿನ್ಗೆ ಐ ಲವ್ ಯೂ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…