News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಬಾಹುಬಲಿ-2 ದಾಖಲೆಗಳು ಉಡೀಸ್ !!!

315

ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು. ಇದೀಗ ‘ಬಾಹುಬಲಿ 2’ ಚಿತ್ರದ ಎಲ್ಲ ದಾಖಲೆಗಳನ್ನು ಮತ್ತೊಂದು ಸೌತ್‌ ಇಂಡಿಯನ್‌ ಚಿತ್ರ ಮುರಿಯಲಿದೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.

ಸದ್ಯಕ್ಕೆ ಪ್ರಭಾಸ್‌ ಅಭಿನಯದ ‘ಬಾಹುಬಲಿ 2’ ಚಿತ್ರ ಜಗತ್ತಿನಾದ್ಯಂತ 1700 ಕೋಟಿ ಕಲೆಕ್ಷನ್‌ ಸನಿಹಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ ಈ ಚಿತ್ರದ ಹಿಂದಿ ಅವತರಣಿಕೆಯೇ 500 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಹೊಸ ದಾಖಲೆ ಸೃಷ್ಟಿಸಿದೆ. ಭಾರತೀಯ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲಾಗಿ ನಿಂತಿರುವ ‘ಬಾಹುಬಲಿ’ ಚಿತ್ರದ ದಾಖಲೆಗಳನ್ನು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ 2.0 ಚಿತ್ರ ಅಳಿಸಿಹಾಕಲಿದೆಯಂತೆ.

ಹೌದು, ಕೆಲ ಸಿನಿ ಪಂಡಿತರು ಈಗಾಗಲೇ 2.0 ಚಿತ್ರದ ಸಕ್ಸಸ್‌ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ. ಅವರ ಲೆಕ್ಕಾಚಾರದ ಪ್ರಕಾರ ಶಂಕರ್‌ ನಿರ್ದೇಶನದ 2.0 ಚಿತ್ರ ದೇಶಾದ್ಯಂತ ಒಟ್ಟು 7000 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಇದಷ್ಟೇ ಅಲ್ಲದೆ 15 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿರುವುದು ಮತ್ತೊಂದು ವಿಶೇಷ.

ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಯಾದ ‘ಬಾಹುಬಲಿ 2’ ಚಿತ್ರ ದೇಶಾದ್ಯಂತ 6500 ಚಿತ್ರಮಂದಿರಗಳಲ್ಲಿ ತೆರೆ ಕಂಡು, 5 ಭಾಷೆಗಳಲ್ಲಿ ಡಬ್‌ ಆಗಿ ಪ್ರೇಕ್ಷಕರನ್ನು ರಂಜಿಸಿದೆ. ಭಾಷೆ ಹಾಗೂ ಚಿತ್ರಮಂದಿರಗಳ ಲೆಕ್ಕಾಚಾರದಲ್ಲಿ ಹೊಸ ದಾಖಲೆ ಬರೆಯಲು ಅಣಿಯಗಿರುವ 2.0 ಚಿತ್ರ, ಕಲೆಕ್ಷನ್‌ ವಿಚಾರದಲ್ಲಿಯೂ ದಾಖಲೆ ಬರೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇಲ್ಲಿ ಓದಿ :-ಕನ್ನಡಕ್ಕೆ ಬಾಹುಬಲಿಯ ಬಲ್ಲಾಳದೇವ !!!

ಬಹುಕೋಟಿ ವೆಚ್ಚದ ‘2.0’ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನಿಮಗೆಲ್ಲ ಗೊತ್ತೇ ಇದೆ. ಸದ್ಯಕ್ಕೆ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ 26ರಂದು ತೆರೆಗೆ ಬರುವ ನಿರೀಕ್ಷೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ದೇವರು-ಧರ್ಮ

    ಶವದ ಕಾಲಿನ ಎರಡು ಹೆಬ್ಬೆರಳನ್ನು ಒಟ್ಟಿಗೆ ಸೇರಿಸಿ ಕಟ್ಟುತ್ತಾರೆ ಯಾಕೆ ಗೊತ್ತಾ…? ತಿಳಿಯಲು ಈ ಲೇಖನ ಓದಿ …

    ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.

  • ದೇಶ-ವಿದೇಶ

    2018ರ ಮೊದಲ ದಿನದ ಯಾವ ದೇಶದಲ್ಲಿ ಎಷ್ಟು ಶಿಶುಗಳ ಜನನ..!ತಿಳಿಯಲು ಈ ಲೇಖನ ಓದಿ..

    2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • India, nation, ಆಧ್ಯಾತ್ಮ

    ಅದ್ಭುತ ವಾಸ್ತುಶಿಲ್ಪದ ಅಕ್ಷರ್ಧಮ್ ಮಂದಿರ

    ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು  ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….