News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಬಾಹುಬಲಿ-2 ದಾಖಲೆಗಳು ಉಡೀಸ್ !!!

314

ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು. ಇದೀಗ ‘ಬಾಹುಬಲಿ 2’ ಚಿತ್ರದ ಎಲ್ಲ ದಾಖಲೆಗಳನ್ನು ಮತ್ತೊಂದು ಸೌತ್‌ ಇಂಡಿಯನ್‌ ಚಿತ್ರ ಮುರಿಯಲಿದೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.

ಸದ್ಯಕ್ಕೆ ಪ್ರಭಾಸ್‌ ಅಭಿನಯದ ‘ಬಾಹುಬಲಿ 2’ ಚಿತ್ರ ಜಗತ್ತಿನಾದ್ಯಂತ 1700 ಕೋಟಿ ಕಲೆಕ್ಷನ್‌ ಸನಿಹಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ ಈ ಚಿತ್ರದ ಹಿಂದಿ ಅವತರಣಿಕೆಯೇ 500 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಹೊಸ ದಾಖಲೆ ಸೃಷ್ಟಿಸಿದೆ. ಭಾರತೀಯ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲಾಗಿ ನಿಂತಿರುವ ‘ಬಾಹುಬಲಿ’ ಚಿತ್ರದ ದಾಖಲೆಗಳನ್ನು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ 2.0 ಚಿತ್ರ ಅಳಿಸಿಹಾಕಲಿದೆಯಂತೆ.

ಹೌದು, ಕೆಲ ಸಿನಿ ಪಂಡಿತರು ಈಗಾಗಲೇ 2.0 ಚಿತ್ರದ ಸಕ್ಸಸ್‌ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ. ಅವರ ಲೆಕ್ಕಾಚಾರದ ಪ್ರಕಾರ ಶಂಕರ್‌ ನಿರ್ದೇಶನದ 2.0 ಚಿತ್ರ ದೇಶಾದ್ಯಂತ ಒಟ್ಟು 7000 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಇದಷ್ಟೇ ಅಲ್ಲದೆ 15 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿರುವುದು ಮತ್ತೊಂದು ವಿಶೇಷ.

ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಯಾದ ‘ಬಾಹುಬಲಿ 2’ ಚಿತ್ರ ದೇಶಾದ್ಯಂತ 6500 ಚಿತ್ರಮಂದಿರಗಳಲ್ಲಿ ತೆರೆ ಕಂಡು, 5 ಭಾಷೆಗಳಲ್ಲಿ ಡಬ್‌ ಆಗಿ ಪ್ರೇಕ್ಷಕರನ್ನು ರಂಜಿಸಿದೆ. ಭಾಷೆ ಹಾಗೂ ಚಿತ್ರಮಂದಿರಗಳ ಲೆಕ್ಕಾಚಾರದಲ್ಲಿ ಹೊಸ ದಾಖಲೆ ಬರೆಯಲು ಅಣಿಯಗಿರುವ 2.0 ಚಿತ್ರ, ಕಲೆಕ್ಷನ್‌ ವಿಚಾರದಲ್ಲಿಯೂ ದಾಖಲೆ ಬರೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇಲ್ಲಿ ಓದಿ :-ಕನ್ನಡಕ್ಕೆ ಬಾಹುಬಲಿಯ ಬಲ್ಲಾಳದೇವ !!!

ಬಹುಕೋಟಿ ವೆಚ್ಚದ ‘2.0’ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನಿಮಗೆಲ್ಲ ಗೊತ್ತೇ ಇದೆ. ಸದ್ಯಕ್ಕೆ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ 26ರಂದು ತೆರೆಗೆ ಬರುವ ನಿರೀಕ್ಷೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…

  • ಸಾಧನೆ, ಸ್ಪೂರ್ತಿ

    ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

    ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…

  • ಆರೋಗ್ಯ

    ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…

  • ಸುದ್ದಿ

    ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

    ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…