News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕಾನೂನು

ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ‘ಯು.ಟಿ.ಖಾದರ್’ ತಿಳಿಸಿರುವ ಸಿಹಿ ಸುದ್ದಿ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

9092

ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೊಂದಾಯಿತ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯುವ ವ್ಯವಸ್ಥೆ ಇತ್ತು. ಈ ಅನಿವಾರ್ಯತೆಯ ಕಾರಣಕ್ಕಾಗಿ ನ್ಯಾಯಬೆಲೆ ಅಂಗಡಿಯವರು ಫಲಾನುಭವಿಗಳ ಜೊತೆ ಒರಟಾಗಿ ಮಾತನಾಡುತ್ತಿದ್ದರು.

ಇನ್ನು ಮುಂದೆ ಈ ರೀತಿಯ ಮುಜುಗರ ತಪ್ಪಲಿದೆ. ರಾಜ್ಯದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಣಿಯಾಗಿ ಆಧಾರ್ ಸಂಖ್ಯೆಯನ್ನು ಸಂಪರ್ಕಿಸಿದ್ದರೆ ಸಾಕು. ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ಬಿಪಿಎಲ್ ಚೀಟಿದಾರರು ಪಡಿತರ ಪಡೆದುಕೊಳ್ಳಬಹುದು ಎಂದರು. ಇನ್ನು ಮುಂದೆ ಪಡಿತರಚೀಟಿ ಪಡೆಯಲು ಆಧಾರ್ ಸಂಖ್ಯೆ ಇದ್ದರೆ ಸಾಕು, ಮನೆ ಸಂಖ್ಯೆ, ವಿದ್ಯುತ್ ಬಿಲ್ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್ ಕಾರ್ಡ್‍ಗಾಗಿ ಇದುವರೆಗೂ 9.05 ಲಕ್ಷ ಅರ್ಜಿಗಳು ಬಂದಿವೆ. ಅದರಲ್ಲಿ 4.05 ಲಕ್ಷ ಕಾರ್ಡ್‍ಗಳು ಮುದ್ರಣಗೊಂಡಿವೆ. ಪ್ರತಿದಿನ 40 ಸಾವಿರ ಕಾರ್ಡ್‍ಗಳು ಮುದ್ರಣಗೊಳ್ಳುತ್ತಿವೆ. ಇನ್ನು ಕೆಲವು ಕಾರ್ಡ್‍ನ ಮಾಹಿತಿಗಳು ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ಜನಸ್ನೇಹಿ ಕೇಂದ್ರಗಳಲ್ಲಿ ಉಳಿದಿದ್ದು, ಸುಮಾರು 5 ಲಕ್ಷ ಕಾರ್ಡ್‍ಗಳ ವಿತರಣೆ ಬಾಕಿ ಇದೆ. ಮಾಹಿತಿ ಸಂಪೂರ್ಣ ಲಭ್ಯವಾದರೆ 10 ದಿನದೊಳಗಾಗಿ ಫಲಾನುಭವಿಗಳ ಮನೆಗೆ ಕಾರ್ಡ್‍ಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಅನಿಲಭಾಗ್ಯ ಯೋಜನೆ ಫಲಾನುಭವಿಗಳ ಆಯ್ಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು , ಶಾಸಕರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಸಮಿತಿಗೆ ಶಾಸಕರು ವಾರದೊಳಗಾಗಿ ಫಲಾನುಭವಿಗಳ ಪಟ್ಟಿ ಕೊಡಬೇಕು.

ಸರ್ಕಾರ ಜಿಲ್ಲಾವಾರು ಕೋಟಾವನ್ನು ನಿಗದಿಮಾಡಿದ್ದು ಮೊದಲ ಹಂತದಲ್ಲಿ 10 ಲಕ್ಷ ಮಂದಿಗೆ ಅನಿಲ ಭಾಗ್ಯ ಯೋಜನೆಯಡಿ ಉಚಿತ ಸಂಪರ್ಕ, ಎರಡು ರಿಫೀಲಿಂಗ್ ಸಿಲಿಂಡ್, ಗ್ಯಾಸ್ ಸ್ಟವ್ ನೀಡಲಾಗುವುದು. 2ನೇ ಹಂತದಲ್ಲಿ 10 ಲಕ್ಷ ಫಲಾನುಭವಿಗಳಿಗೆ ಅನಿಲಭಾಗ್ಯ ಸಂಪರ್ಕ ನೀಡಲಾಗುತ್ತದೆ ಎಂದು ಹೇಳಿದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…

  • ಸುದ್ದಿ

    ಪರೀಕ್ಷೆ ನಡಸೆ ಬೇಕಂದ್ರೆ ವಿದ್ಯಾರ್ಥಿ ಹೆಸರಿನಲ್ಲಿ 50 ಲಕ್ಷ, ಶಿಕ್ಷಕರಿಗೆ 25 ಲಕ್ಷ, ಡೆಪಾಸಿಟ್ ಮಾಡಿ . ವಾಟಾಳ್ ನಾಗರಾಜ್ ಆಕ್ರೋಶ.

    ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…

  • ಜ್ಯೋತಿಷ್ಯ

    ವೀಳ್ಯದೆಲೆಯನ್ನು ಎಲ್ಲರ ಕಣ್ಣು ತಪ್ಪಿಸಿ ಗುಪ್ತವಾಗಿ ನಿಮ್ಮ ಕಬೋರ್ಡ್ ನಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

    ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…

  • ಉಪಯುಕ್ತ ಮಾಹಿತಿ

    ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

    ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…