News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕಾನೂನು

ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ‘ಯು.ಟಿ.ಖಾದರ್’ ತಿಳಿಸಿರುವ ಸಿಹಿ ಸುದ್ದಿ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

9092

ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೊಂದಾಯಿತ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯುವ ವ್ಯವಸ್ಥೆ ಇತ್ತು. ಈ ಅನಿವಾರ್ಯತೆಯ ಕಾರಣಕ್ಕಾಗಿ ನ್ಯಾಯಬೆಲೆ ಅಂಗಡಿಯವರು ಫಲಾನುಭವಿಗಳ ಜೊತೆ ಒರಟಾಗಿ ಮಾತನಾಡುತ್ತಿದ್ದರು.

ಇನ್ನು ಮುಂದೆ ಈ ರೀತಿಯ ಮುಜುಗರ ತಪ್ಪಲಿದೆ. ರಾಜ್ಯದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಣಿಯಾಗಿ ಆಧಾರ್ ಸಂಖ್ಯೆಯನ್ನು ಸಂಪರ್ಕಿಸಿದ್ದರೆ ಸಾಕು. ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ಬಿಪಿಎಲ್ ಚೀಟಿದಾರರು ಪಡಿತರ ಪಡೆದುಕೊಳ್ಳಬಹುದು ಎಂದರು. ಇನ್ನು ಮುಂದೆ ಪಡಿತರಚೀಟಿ ಪಡೆಯಲು ಆಧಾರ್ ಸಂಖ್ಯೆ ಇದ್ದರೆ ಸಾಕು, ಮನೆ ಸಂಖ್ಯೆ, ವಿದ್ಯುತ್ ಬಿಲ್ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್ ಕಾರ್ಡ್‍ಗಾಗಿ ಇದುವರೆಗೂ 9.05 ಲಕ್ಷ ಅರ್ಜಿಗಳು ಬಂದಿವೆ. ಅದರಲ್ಲಿ 4.05 ಲಕ್ಷ ಕಾರ್ಡ್‍ಗಳು ಮುದ್ರಣಗೊಂಡಿವೆ. ಪ್ರತಿದಿನ 40 ಸಾವಿರ ಕಾರ್ಡ್‍ಗಳು ಮುದ್ರಣಗೊಳ್ಳುತ್ತಿವೆ. ಇನ್ನು ಕೆಲವು ಕಾರ್ಡ್‍ನ ಮಾಹಿತಿಗಳು ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ಜನಸ್ನೇಹಿ ಕೇಂದ್ರಗಳಲ್ಲಿ ಉಳಿದಿದ್ದು, ಸುಮಾರು 5 ಲಕ್ಷ ಕಾರ್ಡ್‍ಗಳ ವಿತರಣೆ ಬಾಕಿ ಇದೆ. ಮಾಹಿತಿ ಸಂಪೂರ್ಣ ಲಭ್ಯವಾದರೆ 10 ದಿನದೊಳಗಾಗಿ ಫಲಾನುಭವಿಗಳ ಮನೆಗೆ ಕಾರ್ಡ್‍ಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಅನಿಲಭಾಗ್ಯ ಯೋಜನೆ ಫಲಾನುಭವಿಗಳ ಆಯ್ಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು , ಶಾಸಕರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಸಮಿತಿಗೆ ಶಾಸಕರು ವಾರದೊಳಗಾಗಿ ಫಲಾನುಭವಿಗಳ ಪಟ್ಟಿ ಕೊಡಬೇಕು.

ಸರ್ಕಾರ ಜಿಲ್ಲಾವಾರು ಕೋಟಾವನ್ನು ನಿಗದಿಮಾಡಿದ್ದು ಮೊದಲ ಹಂತದಲ್ಲಿ 10 ಲಕ್ಷ ಮಂದಿಗೆ ಅನಿಲ ಭಾಗ್ಯ ಯೋಜನೆಯಡಿ ಉಚಿತ ಸಂಪರ್ಕ, ಎರಡು ರಿಫೀಲಿಂಗ್ ಸಿಲಿಂಡ್, ಗ್ಯಾಸ್ ಸ್ಟವ್ ನೀಡಲಾಗುವುದು. 2ನೇ ಹಂತದಲ್ಲಿ 10 ಲಕ್ಷ ಫಲಾನುಭವಿಗಳಿಗೆ ಅನಿಲಭಾಗ್ಯ ಸಂಪರ್ಕ ನೀಡಲಾಗುತ್ತದೆ ಎಂದು ಹೇಳಿದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…

  • ಆಧ್ಯಾತ್ಮ

    ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

    ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • ಸುದ್ದಿ

    ವ್ಯಕ್ತಿಯ ಹೊಟ್ಟೆಯಲ್ಲಿದ್ದವು 8 ಚಮಚ, 2 ಸ್ಕ್ರೂ ಡ್ರೈವರ್, 2 ಹಲ್ಲುಜ್ಜುವ ಬ್ರಷ್ , 1 ಚಾಕು, ನಂತರ ಏನಾಯ್ತು..?

    ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್‌ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…