News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
Uncategorized

ಬಿಸಿಲು ಬಿಸಿಲು ಬಿಸಿಲು…!!!

770

ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ.

ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ ಬಿರು ಬಸಿಲಿನ ಬೇಗೆ ತಟ್ಟತೊಡಗಿದೆ.

ಬೆಂಗಳೂರೇ ಹೀಗಾದರೆ ಇನ್ನು ಉತ್ತರ ಕನ್ನಡ, ಗಡಿ ನಾಡುಗಳ ಪರಿಸ್ಥಿತಿ ಹೇಳಲೂ ಆಗದ ಹಾಗಿದೆ. 10 ರಿಂದ 4 ಗಂಟೆಯವರೆಗೆ ಹೊರಗೆ ಬರಲಾಗದ ಸ್ಥಿತಿ ಈ ಊರುಗಳಲ್ಲಿದೆ. ಹಣ್ಣು ಹಾಗೂ ತಂಪು ಪಾನೀಯಗಳ ಮಾರಾಟ ಬಲು ಭರಾಟೆಯಿಂದ ಸಾಗಿದೆ.

ತಾಯಂದಿರ ಕಷ್ಟ ಹೇಳಲಿಕ್ಕಾಗದಷ್ಟಿದೆ. ಮಕ್ಕಳಿಗೆ ಪರೀಕ್ಷೆ ಮುಗಿದು ಬೇಸಿಗೆ ರಜಾ ಶುರುವಾಗಿದೆ. ಇನ್ನು ಪುಟ್ಟ ಕಂದಮ್ಮಗಳ ಗೋಳಂತೂ ಹೇಳಲಾಗದು. ಅಳು ಒಂದೇ ಗೋಳಾಗಿದೆ. ಇವೆಲ್ಲದರ ನಡುವೆ ಕರೆಂಟ್ ಹೋದರಂತೂ ಒಂದು ಕ್ಷಣ ಕೂಡ ಇರಲಿಕ್ಕೆ ಆಗಿಲ್ಲ.

ಇದು ಮಕ್ಕಳ ಕತೆಯಾದರೆ ವಯಸ್ಸಾದವರ ಕಷ್ಟ ಮತ್ತೊಂದು ಥರ. ಮಲಗಲೂ ಆಗದೆ, ಕೂರಲೂ ಆಗದ ಅವರ ಪರಿಸ್ಥಿತಿ ಹೇಳತೀರದು. ಮಾರ್ಚ್ ನಲ್ಲೇ ಈ ಗತಿಯಾದರೆ ಇನ್ನೂ ಮೇ ಜೂನ್ ನಲ್ಲಿ ಏನಾಗಬಹುದು ಹೇಳಿ.

ನಾವೆಲ್ಲರೂ ಇದಕ್ಕೆ ಪರಿಹಾರ ಏನೂ ಮಾಡದೇ ಬಿಸಿಲು, ಬೇಸಿಗೆ ಅಂತ ನಾವು ನಮ್ಮ ಕೆಲಸ ಮಾಡುತ್ತ ಸುಮ್ಮನೆ ಕುಳಿತುಕೊಳ್ಳುವುದು ಬಿಟ್ಟು ಮನೆಯಲ್ಲಿರೊ ಎಲ್ಲ ಸದಸ್ಯರಿಗೂ ಒಬ್ಬರಿಗೆ ಒಂದರಂತೆ ಗಿಡಗಳನ್ನು ನೆಟ್ಟು ಬೆಳೆಸಿ. ಮನೆ ಕಟ್ಟುವವರೆಲ್ಲರೂ ಮಳೆ ಕೋಯ್ಲ ಮಾಡಿ, ಊರಿನ ಸುತ್ತ ಮಳೆ ನೀರಿನ ಹೋರಟ ನಿರ್ಮಿಸಿ, ನಮ್ಮ ಕರ್ತವ್ಯ ಮಾಡಿದರೆ ಈ ಬಿಸಿ ಬಿಸಿ ಬೇಸಿಗೆಯಿಂದ ಸ್ವಲ್ಪವಾದರೂ ತಪ್ಪಿಸಿಕೊಳ್ಳಬಹುದು

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ