ಸುದ್ದಿ

ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

120

ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ.

ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿರುವ ಲಿಚಿ ಹಣ್ಣಗಳನ್ನು ಪ್ರಯೋಗಾಲಯಕ್ಕೆ ಕಳಿಸಿ, ಪ್ರಯೋಗಕ್ಕೊಳಪಡಿಸುವಂತೆ ಆದೇಶಿಸಿದೆ. ಈ ಹಣ್ಣಿನ ಸೇವನೆಯಿಂದ ಆರಂಭವಾದ ಕಾಯಿಲೆ ನಂತರ ಒಬ್ಬರಿಂದ ಒಬ್ಬರಿಗೆ ಸೋಂಕಾಗಿ ಹರಡಿರಬಹುದು ಎನ್ನಲಾಗಿದೆ.

ಲಿಚಿ ಹಣ್ಣಿನಲ್ಲಿರುವ ಟಾಕ್ಸಿನ್ ಅಂಶ ರಕ್ತದಲ್ಲಿರುವ ಸಕ್ಕರೆ ಪ್ರಮಾಣ ಕಡಿಮೆಯಾಗಲು ಕಾರಣವಾಗುತ್ತಿದ್ದು, ಆದ್ದರಿಂದಲೇ ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂಬ ಅನುಮಾನ ಎದ್ದಿದೆ. ಲಿಚಿ ಹಣ್ಣುಗಳನ್ನು ಪೋಷ್ಠಿಕಾಂಶದ ಕೊರತೆಯಿಂದ ಬಳಲುತ್ತಿರುವ ಮಕ್ಕಳು ತಿಂದರೆ ಅದರಲ್ಲಿರುವ ಟಾಕ್ಸಿನ್ ಅಂಶ ಅವರ ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ಸಂಪೂರ್ಣವಾಗಿ ಕಡಿಮೆ ಮಾಡುತ್ತದೆ. ಇದರಿಂದ ಸಾವು ಸಂಭವಿಸುತ್ತದೆ ಎಂಬುದು ವೈದ್ಯರ ಅನುಮಾನ.

ಅತಿಯಾದ ಜ್ವರ, ಮಾನಸಿಕ ಸ್ಥಿತಿಯಲ್ಲಿ ಅಸ್ಥಿರತೆ, ಕೋಮಾ ಸ್ಥಿತಿಗೆ ತಲುಪುವ ಪರಿಸ್ಥಿತಿ ಉಂಟಾಗುವುದು ಈ ರೋಗದ ಲಕ್ಷಣ. ಕಳೆದ ಎರಡು ವರ್ಷಗಳಿಂದ ಬಿಹಾರದಲ್ಲಿ ಈ ಸಮಸ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿತ್ತು. ಆದರೆ ಈ ವರ್ಷ ಮತ್ತೆ ಹೆಚ್ಚಾಗಿರುವುದು ಆತಂಕ ಸೃಷ್ಟಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಮನೆ ಒಡೆಯದೇ ಈ ಸರಳ ಕ್ರಮಗಳಿಂದ ವಾಸ್ತುದೋಷ ನಿವಾರಣೆ ಮಾಡಿಕೊಳ್ಳಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

    ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….

  • ಸುದ್ದಿ

    18ನೇ ವೆಡ್ಡಿಂಗ್ ಡೇ ವಾರ್ಷಿಕೋತ್ಸವದಲ್ಲಿ ಸುದೀಪ್ ದಂಪತಿಯ ಸಂಭ್ರಮ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಈ ಒಂದು ಡ್ರಾಗನ್ ಪ್ರುಟ್. ಈ ಅರೋಗ್ಯ ಮಾಹಿತಿ ನೋಡಿ.

    ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್‌ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.  ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಸರ್ಕಾರದ ಯೋಜನೆಗಳು

    ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

    ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.