ಆರೋಗ್ಯ

‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

967

ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು.

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು- ಮೊದಲಾದ ರೀತಿಯಲ್ಲಿ ಈ ಕೆಂಪುಕೆಂಪಾದ ಗಡ್ಡೆ ನಮ್ಮ ನೆರವಿಗೆ ಬರುತ್ತದೆ. ಅತ್ಯಂತ ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್‌ರೂಟ್ ನೀಡುವ ನೆರವು ಯಾವುದೇ ಬೇರೆ ಆಹಾರದಲ್ಲಿಲ್ಲ. ಇಂತಹ ಉತ್ತಮ ತರಕಾರಿ ಗುಣಗಳ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.

ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಿಸುತ್ತದೆ:-

ಈ ತರಕಾರಿಯನ್ನು ಹಸಿಯಾಗಿ ಸೇವಿಸಬಹುದಾದರೂ ಬೇಯಿಸಿ ತಿಂದರೆ ಇದರ ಗರಿಷ್ಟ ಪ್ರಯೋಜನವನ್ನು ಪಡೆಯಬಹುದು.

ಇದರಲ್ಲಿ ಅತಿಹೆಚ್ಚಿರುವ ಕಬ್ಬಿಣದ ಅಂಶದ ಕಾರಣ ರಕ್ತಹೀನತೆ ಹೋಗಲಾಡಿಸಲು ಅತ್ಯಂತ ಸಮರ್ಥವಾದ ಆಹಾರವಾಗಿದ್ದು ಬಾಣಂತಿಯರಿಗೆ ಮತ್ತು ಮಹಿಳೆಯರ ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯಂತ ಸೂಕ್ತವಾದ ಆಹಾರವಾಗಿದೆ.

ವಿವಿಧ ತರಕಾರಿಗಳ ಮಿಶ್ರಣದೊಂದಿಗೆ:-

ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಎಲ್ಲಾ ತರಕಾರಿಗಳನ್ನು ಕೊಂಚಕೊಂಚವಾಗಿ ಸೇರಿಸಿ ಸಾಂಬಾರ್, ಪಲ್ಯ, ಉಪ್ಪಿನಕಾಯಿ ಮೊದಲಾದವುಗಳನ್ನು ಮಾಡುತ್ತಾರೆ. ಇದರಿಂದ ಪ್ರತಿ ತರಕಾರಿಯ ಉತ್ತಮ ಗುಣಗಳು ಇತರ ತರಕಾರಿಯ ಗುಣಗಳೊಂದಿಗೆ ಸೇರಿ ಒಟ್ಟಾರೆಯಾಗಿ ಒಂದು ಪ್ರಬಲ ಆಹಾರವಾಗಿರುತ್ತದೆ.

ಅಂತೆಯೇ ಬೀಟ್ರೂಟ್ ಸಹಾ ಸೇರಿಸಿದ ವಿವಿಧ ತರಕಾರಿಗಳ ಪಲ್ಯ, ಸಾರುಗಳು ಪೋಷಕಾಂಶಗಳ ಆಗರವಾಗಿದ್ದು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ. ಬೀಟ್ರೂಟಿನಲ್ಲಿರುವ ಬೀಟಾಸಯಾನಿನ್ ಎಂಬ ಪೋಷಕಾಂಶದ ಕಾರಣ ಇದಕ್ಕೆ ರಕ್ತದ ಬಣ್ಣ ಬಂದಿದ್ದು ಒಂದು ಪ್ರಬಲ ಆಂಟಿ ಆಕ್ಸಿಡೆಂಟ್ ಆಗಿದೆ.

ಬೀಟ್ರೂಟ್ ಜ್ಯೂಸ್:-

ಬೇಯಿಸಿ ತಿಂದಂತೆಯೇ ಹಸಿ ಬೀಟ್ರೂಟ್ ನ ರಸವೂ ಆರೋಗ್ಯವನ್ನು ಹಲವು ರೀತಿಯಿಂದ ರಕ್ಷಿಸುತ್ತದೆ. ನಿಮಿರು ದೌರ್ಬಲ್ಯವಿದ್ದವರ ರಕ್ತದಲ್ಲಿ ನೈಟ್ರೇಟುಗಳ ಪ್ರಮಾಣ ಹೆಚ್ಚಾಗಿದ್ದು ಇದು ವಿಶೇಷವಾಗಿ ಜನನಾಂಗದ ನರಗಳಲ್ಲಿ ರಕ್ತ ತುಂಬಿಕೊಳ್ಳಲು ಅಡ್ಡಿಯಾಗುತ್ತದೆ.

ಬೀಟ್ರೂಟ್ ರಸದಲ್ಲಿರುವ ಪೋಷಕಾಂಶಗಳು ಈ ನೈಟ್ರೇಟುಗಳ ಪ್ರಭಾವ ಕಡಿಮೆಗೊಳಿಸುವ ಮೂಲಕ ನಿಮಿರುದೌರ್ಬಲ್ಯ ಕಡಿಮೆಯಾಗಲು ಸಾಧ್ಯವಾಗಿಸುತ್ತದೆ

ಬೀಟ್ರೂಟ್ ಸಿಪ್ಪೆ ಯಿಂದ ಕೂಡ ಸಾಕಷ್ಟು ಪ್ರಯೋಜನಗಳಿವೆ:-

ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕವಾಗಿದೆ.

ಈ ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಈ ಲೇಪನವನ್ನು ತೆಳ್ಳಗೆ ಮುಖಕ್ಕೆ ಹಚ್ಚಿ ಕೊಂಚ ಹೊತ್ತಿನ ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ನಯವಾದ, ಕಲೆಯಿಲ್ಲದ ಮತ್ತು ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.

ಬೀಟ್‍ರೂಟ್ ಫ್ರೈ:-

ಬೀಟ್‍ರೂಟ್ ಅನ್ನು ಸ್ವಲ್ಪ ನೀರಿನಲ್ಲಿ ಬೇಯಿಸಿ, ಆ ನೀರು ಸಂಪೂರ್ಣವಾಗಿ ಆವಿಯಾಗುವವರೆಗೆ ಕಾಯಿಸಿ. ಆಲೂಗಡ್ಡೆ, ಬೆಳ್ಳುಳ್ಳಿ, ಜೀರಿಗೆ ಮತ್ತು ಸ್ವಲ್ಪ ಸೋಯಾ ಸಾಸ್ ತೆಗೆದುಕೊಳ್ಳಿ.

ಅದನ್ನು ಬೀಟ್‍ರೂಟ್ ಮತ್ತು ಆಲೀವ್ ಎಣ್ಣೆಯ ಜೊತೆಗೆ ಉರಿದುಕೊಳ್ಳಿ ಮತ್ತು ಮೇಲೆ ಹೇಳಿದ ಉರಿದುಕೊಂಡ ಮಿಶ್ರಣವನ್ನು ಇದಕ್ಕೆ ಬೆರೆಸಿ. ಎಳ್ಳನ್ನು ಇದರ ಮೇಲೆ ಅಲಂಕಾರಕ್ಕೆ ಚಿಮುಕಿಸಿಕೊಂಡು, ಸೇವಿಸಿ

ಕ್ಯಾನ್ಸರ್ ಬರುವುದರಿಂದ ತಡೆಯುತ್ತದೆ:-

ಬೀಟ್‌ರೂಟ್‌ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ನೆರವಾಗುತ್ತದೆ. ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು.(ವಿಕೋಪಕ್ಕೆ ತಿರುಗಿದ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಸಮಯಾವಕಾಶ ಅಗತ್ಯವಿದೆ).

ಕ್ಲುಪ್ತಕಾಲದಲ್ಲಿ ಕ್ಯಾನ್ಸರ್ ಇರುವಿಕೆಯನ್ನು ಗುರುತಿಸಿ ಚಿಕಿತ್ಸೆ ಪಡೆದು ಗುಣಮುಖರಾದವರಿಗೂ ಬೀಟ್‌ರೂಟ್‌ ಅಗತ್ಯವಾಗಿದೆ. ಏಕೆಂದರೆ ಇವರ ದೇಹದಲ್ಲಿ ಮತ್ತೊಮ್ಮೆ ಈ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ. ಪರಿಣಾಮವಾಗಿ ಉತ್ತಮ ಆರೋಗ್ಯವನ್ನು ಮತ್ತು ಆಯಸ್ಸನ್ನು ಪಡೆಯಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸುದ್ದಿ

    7 ವರ್ಷ ಕಾದು, ಕೊನೆಗೂ ವಿಶ್ವದ ಅತೀ ಎತ್ತರದ ಬಿಲ್ಡಿಂಗ್ ಗೆ ಮಿಂಚು ಬಡಿಯೋದನ್ನ ಸೆರೆಹಿಡಿದ.

    ಸಂಯುಕ್ತ ಅರಬ್ ಎಮಿರೇಟ್ಸ್‌ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್‌ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ಆರೋಗ್ಯ

    ಒಣಕೆಮ್ಮು ಸಮಸ್ಯೆಯಿಂದ ಬೇಸತ್ತಿದ್ದೀರಾ.? ಇಲ್ಲಿದೆ ಪರಿಹಾರ.

    ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…