ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ. ಎಲೆಯ ಅಲಗು ಭಾಗದಲ್ಲಿ ರೆಟಿಕ್ಯುಲೇಟ್ ನಾಳವಿನ್ಯಾಸ ಇದೆ. ಬೆಂಡೆಕಾಯಿ ಎಂಬ ತರಕಾರಿಯನ್ನು ಹಲವು ರೀತಿಯ ಜೀವಸತ್ವಗಳ ಆಗಾರ ಎನ್ನಬಹುದು. ಇದರಿಂದ ತಯಾರಿಸುವ ಅಡುಗೆ ಸಹ ಬಹಳ ರುಚಿಯಾಗಿರುತ್ತದೆ. ಇನ್ನು ಕೆಲವರಿಗೆ ಬೆಂಡೆ ಎಂದರೇನೇ ಅಷ್ಟಕಷ್ಟೆ. ಆದರೆ ಈ ತರಕಾರಿಯಿಂದ ಸಿಗುವ ಪ್ರಯೋಜನಗಳು ಮಾತ್ರ ಅಷ್ಟಿಷ್ಟಲ್ಲ. ಇದರಲ್ಲಿ ಅಡಗಿರುವ ಪೋಷಕಾಂಶಗಳು ಹಲವು ರೋಗಗಳಿಗೆ ಮನೆಮದ್ದು. ಬೆಂಡೆಯು ಮಾಲ್ವೇಸೀ ಕುಟುಂಬಕ್ಕೆ ಸೇರಿದ ದ್ವಿದಳ ಸಸ್ಯ. ಇದರ ವೈಜ್ಞಾನಿಕ ಹೆಸರು ಹೈಬಿಸ್ಕಸ್ ಎಸ್ಕ್ಯುಲೆಂಟಸ್ ಅಥವಾ ಅಬಲ್ಮಾಸ್ಕಸ್ ಎಸ್ಕ್ಯುಲೆಂಟಸ್. ಇದನ್ನು ಹಿಂದಿಯಲ್ಲಿ ಬಿಂಡಿ.
ಬೆಂಡೆಕಾಯಿಯು ತೂಕ ಇಳಿಸಲು ನೆರವಾಗುವುದು

ಬೆಂಡೆಕಾಯಿಯಲ್ಲಿ ಇರುವ ತುಂಬಾ ಕಡಿಮೆ ಕ್ಯಾಲರಿ (30ಕೆಸಿಎಎಲ್/100ಗ್ರಾಂ) ತೂಕ ಇಳಿಸಲು ಒಂದು ಅತ್ಯುತ್ತಮ ಆಹಾರ. ಇದು ತುಂಬಾ ಕಡಿಮೆ ಕ್ಯಾಲರಿ ನೀಡುವುದು. ಅಷ್ಟೇ ಅಲ್ಲದೇ ಬೆಂಡೆಕಾಯಿಯಲ್ಲಿ ಉನ್ನತ ಮಟ್ಟದ ನಾರಿನಾಂಶವಿದ್ದು, ಇದು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು.
ಹೃದಯ ಕಾಯಿಲೆಗೆ ಒಳ್ಳೆಯದು
ಬೆಂಡೆಕಾಯಿಯಲ್ಲಿ ಹೀರಿಕೊಳ್ಳುವ ನಾರಿನಾಂಶ ಪೆಕ್ಟಿನ್ ಇದೆ. ಪೆಕ್ಟಿನ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು ಮತ್ತು ಅಪಧಮನಿಕಾಠಿಣ್ಯ ತಡೆಯುವುದು. ಜಮೆಯಾಗಿರುವಂತಹ ಕೊಲೆಸ್ಟ್ರಾಲ್ ಮತ್ತು ಹೆಪ್ಪುಗಟ್ಟುವಿಕೆಯನ್ನು ಇದು ತಡೆಯುವುದು.
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಇದಕ್ಕೆ ಪ್ರಮುಖ ಕಾರಣವಾಗಿದೆ. ಯುಜೆನಾಲ್ ಎನ್ನುವಂತಹ ಒಂದು ರೀತಿಯ ನಾರಿನಾಂಶವು ಜೀರ್ಣಕ್ರಿಯೆ ನಿಧಾನಗೊಳಿಸುವುದು ಮತ್ತು ರಕ್ತನಾಳದಲ್ಲಿ ಇರುವಂತಹ ಸಕ್ಕರೆ ಹೀರಿಕೊಳ್ಳುವುದು. ಊಟದ ಬಳಿಕ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ಇದು ತಡೆಯುವುದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದು. ನಾರಿನಾಂಶವು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.
ಜೀರ್ಣಕ್ರಿಯೆಗೆ ಸಹಕಾರಿ

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಇದು ಕರುಳಿನ ಕ್ರಿಯೆಯನ್ನು ನಿಯಂತ್ರಿಉಸುವುದ. ಪೆಕ್ಟಿನ್ ಕರುಳಿನಲ್ಲಿ ಊದಿಕೊಂಡು ಕರುಳಿನಲ್ಲಿರುವಂತಹ ಕಲ್ಮಷವು ಸುಲಭವಾಗಿ ಹೊರಹೋಗುವಂತೆ ಮಾಡುವುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೆಂಡೆಕಾಯಿ ತಿಂದರೆ ಅದರಿಂದ ಲಾಭ ಪಡೆಯಬಹುದು.
ಗರ್ಭಧಾರಣೆಗೆ ನೆರವಾಗುವುದು
ಗರ್ಭ ಧರಿಸಬೇಕು ಎಂದು ಬಯಸುವವರಿಗೆ ಬೆಂಡೆಕಾಯಿಯು ತುಂಬಾ ಒಳ್ಳೆಯ ಆಹಾರವಾಗಿದೆ. ಬೆಂಡೆಕಾಯಿಯಲ್ಲಿ ಇರುವಂತಹ ಫಾಲಿಕ್ ಆಮ್ಲವು ಗರ್ಭ ಧರಿಸಲು ನೆರವಾಗುವುದು ಮಾತ್ರವಲ್ಲದೆ ಇದು ಭ್ರೂಣದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುವುದು. ಬೆಂಡೆಕಾಯಿಯು ಗರ್ಭಪಾತವಾಗದಂತೆ ತಡೆಯುವುದು. ಭ್ರೂಣದ ನರಕೊಳವೆಗಳು ಬೆಳೆಯಲು ಫಾಲಿಕ್ ಆಮ್ಲವು ನೆರವಾಗುವುದು.
ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ
ಬೆಂಡೆಯಲ್ಲಿರುವ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಚರ್ಮಕ್ಕೆ ಒಳಗಿನಿಂದ ನೀಡುವ ಪೋಷಣೆಯ ಪರಿಣಾಮವಾಗಿ ಚರ್ಮ ತನ್ನ ಸಹಜ ಸೌಂದರ್ಯ ಮತ್ತು ಕಾಂತಿಯನ್ನು ಹೊಂದುತ್ತದೆ. ಇದಕ್ಕಾಗಿ ಎಳೆಯ ಬೆಂಡೆಯನ್ನು ಆಗಾಗ ಹಸಿಯಾಗಿ ತಿಂದರೆ ಹೆಚ್ಚು ಪರಿಣಾಮಕಾರಿಯಾಗಿದೆ.
ಪ್ರತಿರೋಧಕ ಶಕ್ತಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ವಿಟಮಿನ್ ಸಿ ಅಂಶವು ಪ್ರತಿರೋಧಕ ಶಕ್ತಿ ಸುಧಾರಣೆ ಮಾಡುವಲ್ಲಿ ಸಹಕಾರಿ ಆಗಿರುವುದು.
ರಕ್ತಹೀನತೆ ನಿವಾರಣೆ
ಬೆಂಡೆಕಾಯಿಯಲ್ಲಿ ಕಬ್ಬಿನಾಂಶ, ಫಾಲಿಕ್ ಆಮ್ಲ ಮತ್ತು ವಿಟಮಿನ್ ಕೆ ಇದೆ. ಇದು ರಕ್ತಹೀನತೆ ತಡೆಯಲು ಮತ್ತು ನಿವಾರಣೆ ಮಾಡಲು ನೆರವಾಗುವುದು.
ಕರುಳಿನ ಕ್ಯಾನ್ಸರ್ ತಡೆಯಲು ನೆರವಾಗುವುದು
ಬೇರೆಲ್ಲಾ ನಾರಿನಾಂಶವಿರುವಂತಹ ಆಹಾರದಂತೆ ಬೆಂಡೆಕಾಯಿ ಕೂಡ ಕರುಳಿನ ಕ್ಯಾನರ್ ತಡೆಯುವಲ್ಲಿ ನೆರವಾಗುವುದು. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಟ್ಟು ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ನೆರವಾಗುವುದು.
ಕಣ್ಣಿನ ದೃಷ್ಟಿ ಸುಧಾರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ಬೆಟಾ ಕ್ಯಾರೋಟಿನ್ ಮತ್ತು ವಿಟಮಿನ್ ಎ ಅಂಶವು ಕಣ್ಣಿನ ದೃಷ್ಟಿ ಸುಧಾರಿಸಲು ತುಂಬಾ ನೆರವಾಗುವುದು.
ತಲೆಹೊಟ್ಟು ಮತ್ತು ಹೇನಿಗೆ ಚಿಕಿತ್ಸೆ
ತಲೆಹೊಟ್ಟು ಮತ್ತು ಹೇನು ನಿವಾರಿಸಲು ಬೆಂಡೆಕಾಯಿ ಬಳಸಲಾಗುತ್ತದೆ. ನೇರವಾಗಿ ಬೆಂಡೆಕಾಯಿ ಕತ್ತರಿಸಿಕೊಳ್ಳಿ ಮತ್ತು ಇದನ್ನು ನೀರಿನಲ್ಲಿ ಬಿಸಿ ಮಾಡಿ. ಈ ನೀರಿಗೆ ಲಿಂಬೆರಸ ಹಾಕಿ ಮತ್ತು ಕೂದಲು ತೊಳೆಯಲು ಈ ನೀರನ್ನು ಬಳಸಿ. ಬೆಂಡೆಕಾಯಿಯಲ್ಲಿ ನಾರಿನಾಂಶವು ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣದಿಂದಾಗಿ ಆಹಾರ ತಜ್ಞರು ಸಾಧ್ಯವಾದಷ್ಟು ತರಕಾರಿ ಸೇವಿಸಲು ಹೇಳುವರು.
ಕೊಲೆಸ್ಟ್ರಾಲ್ ರೋಗಿಗಳಿಗೆ ಸೂಕ್ತವಾಗಿದೆ

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇರುವ ರೋಗಿಗಳಿಗೆ ವೈದ್ಯರು ಹೆಚ್ಚಿನ ಆಹಾರಗಳನ್ನು ಸೇವಿಸದಂತೆ ಸಲಹೆ ಮಾಡುತ್ತಾರೆ. ಆದರೆ ಈ ರೋಗಿಗಳು ಬೆಂಡೆಕಾಯಿಯನ್ನು ಮಾತ್ರ ಸುರಕ್ಷಿತವಾಗಿ ಸೇವಿಸಬಹುದು. ಏಕೆಂದರೆ ಬೆಂಡೆಯಲ್ಲಿ ಯಾವುದೇ ಕೊಲೆಸ್ಟ್ರಾಲ್ ಆಗಲೀ ಕೊಲೆಸ್ಟ್ರಾಲ್ ಉಂಟುಮಾಡುವ ಕಣಗಳಾಗಲೀ ಇಲ್ಲದೇ ಇರುವುದರಿಂದ ಕೊಲೆಸ್ಟ್ರಾಲ್ ರೋಗಿಗಳ ಪಾಲಿನ ಪಂಚಾಮೃತವಾಗಿದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…