ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ. ಎಲೆಯ ಅಲಗು ಭಾಗದಲ್ಲಿ ರೆಟಿಕ್ಯುಲೇಟ್ ನಾಳವಿನ್ಯಾಸ ಇದೆ. ಬೆಂಡೆಕಾಯಿ ಎಂಬ ತರಕಾರಿಯನ್ನು ಹಲವು ರೀತಿಯ ಜೀವಸತ್ವಗಳ ಆಗಾರ ಎನ್ನಬಹುದು. ಇದರಿಂದ ತಯಾರಿಸುವ ಅಡುಗೆ ಸಹ ಬಹಳ ರುಚಿಯಾಗಿರುತ್ತದೆ. ಇನ್ನು ಕೆಲವರಿಗೆ ಬೆಂಡೆ ಎಂದರೇನೇ ಅಷ್ಟಕಷ್ಟೆ. ಆದರೆ ಈ ತರಕಾರಿಯಿಂದ ಸಿಗುವ ಪ್ರಯೋಜನಗಳು ಮಾತ್ರ ಅಷ್ಟಿಷ್ಟಲ್ಲ. ಇದರಲ್ಲಿ ಅಡಗಿರುವ ಪೋಷಕಾಂಶಗಳು ಹಲವು ರೋಗಗಳಿಗೆ ಮನೆಮದ್ದು. ಬೆಂಡೆಯು ಮಾಲ್ವೇಸೀ ಕುಟುಂಬಕ್ಕೆ ಸೇರಿದ ದ್ವಿದಳ ಸಸ್ಯ. ಇದರ ವೈಜ್ಞಾನಿಕ ಹೆಸರು ಹೈಬಿಸ್ಕಸ್ ಎಸ್ಕ್ಯುಲೆಂಟಸ್ ಅಥವಾ ಅಬಲ್ಮಾಸ್ಕಸ್ ಎಸ್ಕ್ಯುಲೆಂಟಸ್. ಇದನ್ನು ಹಿಂದಿಯಲ್ಲಿ ಬಿಂಡಿ.
ಬೆಂಡೆಕಾಯಿಯು ತೂಕ ಇಳಿಸಲು ನೆರವಾಗುವುದು

ಬೆಂಡೆಕಾಯಿಯಲ್ಲಿ ಇರುವ ತುಂಬಾ ಕಡಿಮೆ ಕ್ಯಾಲರಿ (30ಕೆಸಿಎಎಲ್/100ಗ್ರಾಂ) ತೂಕ ಇಳಿಸಲು ಒಂದು ಅತ್ಯುತ್ತಮ ಆಹಾರ. ಇದು ತುಂಬಾ ಕಡಿಮೆ ಕ್ಯಾಲರಿ ನೀಡುವುದು. ಅಷ್ಟೇ ಅಲ್ಲದೇ ಬೆಂಡೆಕಾಯಿಯಲ್ಲಿ ಉನ್ನತ ಮಟ್ಟದ ನಾರಿನಾಂಶವಿದ್ದು, ಇದು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು.
ಹೃದಯ ಕಾಯಿಲೆಗೆ ಒಳ್ಳೆಯದು
ಬೆಂಡೆಕಾಯಿಯಲ್ಲಿ ಹೀರಿಕೊಳ್ಳುವ ನಾರಿನಾಂಶ ಪೆಕ್ಟಿನ್ ಇದೆ. ಪೆಕ್ಟಿನ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು ಮತ್ತು ಅಪಧಮನಿಕಾಠಿಣ್ಯ ತಡೆಯುವುದು. ಜಮೆಯಾಗಿರುವಂತಹ ಕೊಲೆಸ್ಟ್ರಾಲ್ ಮತ್ತು ಹೆಪ್ಪುಗಟ್ಟುವಿಕೆಯನ್ನು ಇದು ತಡೆಯುವುದು.
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಇದಕ್ಕೆ ಪ್ರಮುಖ ಕಾರಣವಾಗಿದೆ. ಯುಜೆನಾಲ್ ಎನ್ನುವಂತಹ ಒಂದು ರೀತಿಯ ನಾರಿನಾಂಶವು ಜೀರ್ಣಕ್ರಿಯೆ ನಿಧಾನಗೊಳಿಸುವುದು ಮತ್ತು ರಕ್ತನಾಳದಲ್ಲಿ ಇರುವಂತಹ ಸಕ್ಕರೆ ಹೀರಿಕೊಳ್ಳುವುದು. ಊಟದ ಬಳಿಕ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ಇದು ತಡೆಯುವುದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದು. ನಾರಿನಾಂಶವು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.
ಜೀರ್ಣಕ್ರಿಯೆಗೆ ಸಹಕಾರಿ

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಇದು ಕರುಳಿನ ಕ್ರಿಯೆಯನ್ನು ನಿಯಂತ್ರಿಉಸುವುದ. ಪೆಕ್ಟಿನ್ ಕರುಳಿನಲ್ಲಿ ಊದಿಕೊಂಡು ಕರುಳಿನಲ್ಲಿರುವಂತಹ ಕಲ್ಮಷವು ಸುಲಭವಾಗಿ ಹೊರಹೋಗುವಂತೆ ಮಾಡುವುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೆಂಡೆಕಾಯಿ ತಿಂದರೆ ಅದರಿಂದ ಲಾಭ ಪಡೆಯಬಹುದು.
ಗರ್ಭಧಾರಣೆಗೆ ನೆರವಾಗುವುದು
ಗರ್ಭ ಧರಿಸಬೇಕು ಎಂದು ಬಯಸುವವರಿಗೆ ಬೆಂಡೆಕಾಯಿಯು ತುಂಬಾ ಒಳ್ಳೆಯ ಆಹಾರವಾಗಿದೆ. ಬೆಂಡೆಕಾಯಿಯಲ್ಲಿ ಇರುವಂತಹ ಫಾಲಿಕ್ ಆಮ್ಲವು ಗರ್ಭ ಧರಿಸಲು ನೆರವಾಗುವುದು ಮಾತ್ರವಲ್ಲದೆ ಇದು ಭ್ರೂಣದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುವುದು. ಬೆಂಡೆಕಾಯಿಯು ಗರ್ಭಪಾತವಾಗದಂತೆ ತಡೆಯುವುದು. ಭ್ರೂಣದ ನರಕೊಳವೆಗಳು ಬೆಳೆಯಲು ಫಾಲಿಕ್ ಆಮ್ಲವು ನೆರವಾಗುವುದು.
ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ
ಬೆಂಡೆಯಲ್ಲಿರುವ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಚರ್ಮಕ್ಕೆ ಒಳಗಿನಿಂದ ನೀಡುವ ಪೋಷಣೆಯ ಪರಿಣಾಮವಾಗಿ ಚರ್ಮ ತನ್ನ ಸಹಜ ಸೌಂದರ್ಯ ಮತ್ತು ಕಾಂತಿಯನ್ನು ಹೊಂದುತ್ತದೆ. ಇದಕ್ಕಾಗಿ ಎಳೆಯ ಬೆಂಡೆಯನ್ನು ಆಗಾಗ ಹಸಿಯಾಗಿ ತಿಂದರೆ ಹೆಚ್ಚು ಪರಿಣಾಮಕಾರಿಯಾಗಿದೆ.
ಪ್ರತಿರೋಧಕ ಶಕ್ತಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ವಿಟಮಿನ್ ಸಿ ಅಂಶವು ಪ್ರತಿರೋಧಕ ಶಕ್ತಿ ಸುಧಾರಣೆ ಮಾಡುವಲ್ಲಿ ಸಹಕಾರಿ ಆಗಿರುವುದು.
ರಕ್ತಹೀನತೆ ನಿವಾರಣೆ
ಬೆಂಡೆಕಾಯಿಯಲ್ಲಿ ಕಬ್ಬಿನಾಂಶ, ಫಾಲಿಕ್ ಆಮ್ಲ ಮತ್ತು ವಿಟಮಿನ್ ಕೆ ಇದೆ. ಇದು ರಕ್ತಹೀನತೆ ತಡೆಯಲು ಮತ್ತು ನಿವಾರಣೆ ಮಾಡಲು ನೆರವಾಗುವುದು.
ಕರುಳಿನ ಕ್ಯಾನ್ಸರ್ ತಡೆಯಲು ನೆರವಾಗುವುದು
ಬೇರೆಲ್ಲಾ ನಾರಿನಾಂಶವಿರುವಂತಹ ಆಹಾರದಂತೆ ಬೆಂಡೆಕಾಯಿ ಕೂಡ ಕರುಳಿನ ಕ್ಯಾನರ್ ತಡೆಯುವಲ್ಲಿ ನೆರವಾಗುವುದು. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಟ್ಟು ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ನೆರವಾಗುವುದು.
ಕಣ್ಣಿನ ದೃಷ್ಟಿ ಸುಧಾರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ಬೆಟಾ ಕ್ಯಾರೋಟಿನ್ ಮತ್ತು ವಿಟಮಿನ್ ಎ ಅಂಶವು ಕಣ್ಣಿನ ದೃಷ್ಟಿ ಸುಧಾರಿಸಲು ತುಂಬಾ ನೆರವಾಗುವುದು.
ತಲೆಹೊಟ್ಟು ಮತ್ತು ಹೇನಿಗೆ ಚಿಕಿತ್ಸೆ
ತಲೆಹೊಟ್ಟು ಮತ್ತು ಹೇನು ನಿವಾರಿಸಲು ಬೆಂಡೆಕಾಯಿ ಬಳಸಲಾಗುತ್ತದೆ. ನೇರವಾಗಿ ಬೆಂಡೆಕಾಯಿ ಕತ್ತರಿಸಿಕೊಳ್ಳಿ ಮತ್ತು ಇದನ್ನು ನೀರಿನಲ್ಲಿ ಬಿಸಿ ಮಾಡಿ. ಈ ನೀರಿಗೆ ಲಿಂಬೆರಸ ಹಾಕಿ ಮತ್ತು ಕೂದಲು ತೊಳೆಯಲು ಈ ನೀರನ್ನು ಬಳಸಿ. ಬೆಂಡೆಕಾಯಿಯಲ್ಲಿ ನಾರಿನಾಂಶವು ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣದಿಂದಾಗಿ ಆಹಾರ ತಜ್ಞರು ಸಾಧ್ಯವಾದಷ್ಟು ತರಕಾರಿ ಸೇವಿಸಲು ಹೇಳುವರು.
ಕೊಲೆಸ್ಟ್ರಾಲ್ ರೋಗಿಗಳಿಗೆ ಸೂಕ್ತವಾಗಿದೆ

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇರುವ ರೋಗಿಗಳಿಗೆ ವೈದ್ಯರು ಹೆಚ್ಚಿನ ಆಹಾರಗಳನ್ನು ಸೇವಿಸದಂತೆ ಸಲಹೆ ಮಾಡುತ್ತಾರೆ. ಆದರೆ ಈ ರೋಗಿಗಳು ಬೆಂಡೆಕಾಯಿಯನ್ನು ಮಾತ್ರ ಸುರಕ್ಷಿತವಾಗಿ ಸೇವಿಸಬಹುದು. ಏಕೆಂದರೆ ಬೆಂಡೆಯಲ್ಲಿ ಯಾವುದೇ ಕೊಲೆಸ್ಟ್ರಾಲ್ ಆಗಲೀ ಕೊಲೆಸ್ಟ್ರಾಲ್ ಉಂಟುಮಾಡುವ ಕಣಗಳಾಗಲೀ ಇಲ್ಲದೇ ಇರುವುದರಿಂದ ಕೊಲೆಸ್ಟ್ರಾಲ್ ರೋಗಿಗಳ ಪಾಲಿನ ಪಂಚಾಮೃತವಾಗಿದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…
ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.