ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ. ಎಲೆಯ ಅಲಗು ಭಾಗದಲ್ಲಿ ರೆಟಿಕ್ಯುಲೇಟ್ ನಾಳವಿನ್ಯಾಸ ಇದೆ. ಬೆಂಡೆಕಾಯಿ ಎಂಬ ತರಕಾರಿಯನ್ನು ಹಲವು ರೀತಿಯ ಜೀವಸತ್ವಗಳ ಆಗಾರ ಎನ್ನಬಹುದು. ಇದರಿಂದ ತಯಾರಿಸುವ ಅಡುಗೆ ಸಹ ಬಹಳ ರುಚಿಯಾಗಿರುತ್ತದೆ. ಇನ್ನು ಕೆಲವರಿಗೆ ಬೆಂಡೆ ಎಂದರೇನೇ ಅಷ್ಟಕಷ್ಟೆ. ಆದರೆ ಈ ತರಕಾರಿಯಿಂದ ಸಿಗುವ ಪ್ರಯೋಜನಗಳು ಮಾತ್ರ ಅಷ್ಟಿಷ್ಟಲ್ಲ. ಇದರಲ್ಲಿ ಅಡಗಿರುವ ಪೋಷಕಾಂಶಗಳು ಹಲವು ರೋಗಗಳಿಗೆ ಮನೆಮದ್ದು. ಬೆಂಡೆಯು ಮಾಲ್ವೇಸೀ ಕುಟುಂಬಕ್ಕೆ ಸೇರಿದ ದ್ವಿದಳ ಸಸ್ಯ. ಇದರ ವೈಜ್ಞಾನಿಕ ಹೆಸರು ಹೈಬಿಸ್ಕಸ್ ಎಸ್ಕ್ಯುಲೆಂಟಸ್ ಅಥವಾ ಅಬಲ್ಮಾಸ್ಕಸ್ ಎಸ್ಕ್ಯುಲೆಂಟಸ್. ಇದನ್ನು ಹಿಂದಿಯಲ್ಲಿ ಬಿಂಡಿ.
ಬೆಂಡೆಕಾಯಿಯು ತೂಕ ಇಳಿಸಲು ನೆರವಾಗುವುದು

ಬೆಂಡೆಕಾಯಿಯಲ್ಲಿ ಇರುವ ತುಂಬಾ ಕಡಿಮೆ ಕ್ಯಾಲರಿ (30ಕೆಸಿಎಎಲ್/100ಗ್ರಾಂ) ತೂಕ ಇಳಿಸಲು ಒಂದು ಅತ್ಯುತ್ತಮ ಆಹಾರ. ಇದು ತುಂಬಾ ಕಡಿಮೆ ಕ್ಯಾಲರಿ ನೀಡುವುದು. ಅಷ್ಟೇ ಅಲ್ಲದೇ ಬೆಂಡೆಕಾಯಿಯಲ್ಲಿ ಉನ್ನತ ಮಟ್ಟದ ನಾರಿನಾಂಶವಿದ್ದು, ಇದು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು.
ಹೃದಯ ಕಾಯಿಲೆಗೆ ಒಳ್ಳೆಯದು
ಬೆಂಡೆಕಾಯಿಯಲ್ಲಿ ಹೀರಿಕೊಳ್ಳುವ ನಾರಿನಾಂಶ ಪೆಕ್ಟಿನ್ ಇದೆ. ಪೆಕ್ಟಿನ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು ಮತ್ತು ಅಪಧಮನಿಕಾಠಿಣ್ಯ ತಡೆಯುವುದು. ಜಮೆಯಾಗಿರುವಂತಹ ಕೊಲೆಸ್ಟ್ರಾಲ್ ಮತ್ತು ಹೆಪ್ಪುಗಟ್ಟುವಿಕೆಯನ್ನು ಇದು ತಡೆಯುವುದು.
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಇದಕ್ಕೆ ಪ್ರಮುಖ ಕಾರಣವಾಗಿದೆ. ಯುಜೆನಾಲ್ ಎನ್ನುವಂತಹ ಒಂದು ರೀತಿಯ ನಾರಿನಾಂಶವು ಜೀರ್ಣಕ್ರಿಯೆ ನಿಧಾನಗೊಳಿಸುವುದು ಮತ್ತು ರಕ್ತನಾಳದಲ್ಲಿ ಇರುವಂತಹ ಸಕ್ಕರೆ ಹೀರಿಕೊಳ್ಳುವುದು. ಊಟದ ಬಳಿಕ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ಇದು ತಡೆಯುವುದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದು. ನಾರಿನಾಂಶವು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.
ಜೀರ್ಣಕ್ರಿಯೆಗೆ ಸಹಕಾರಿ

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಇದು ಕರುಳಿನ ಕ್ರಿಯೆಯನ್ನು ನಿಯಂತ್ರಿಉಸುವುದ. ಪೆಕ್ಟಿನ್ ಕರುಳಿನಲ್ಲಿ ಊದಿಕೊಂಡು ಕರುಳಿನಲ್ಲಿರುವಂತಹ ಕಲ್ಮಷವು ಸುಲಭವಾಗಿ ಹೊರಹೋಗುವಂತೆ ಮಾಡುವುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೆಂಡೆಕಾಯಿ ತಿಂದರೆ ಅದರಿಂದ ಲಾಭ ಪಡೆಯಬಹುದು.
ಗರ್ಭಧಾರಣೆಗೆ ನೆರವಾಗುವುದು
ಗರ್ಭ ಧರಿಸಬೇಕು ಎಂದು ಬಯಸುವವರಿಗೆ ಬೆಂಡೆಕಾಯಿಯು ತುಂಬಾ ಒಳ್ಳೆಯ ಆಹಾರವಾಗಿದೆ. ಬೆಂಡೆಕಾಯಿಯಲ್ಲಿ ಇರುವಂತಹ ಫಾಲಿಕ್ ಆಮ್ಲವು ಗರ್ಭ ಧರಿಸಲು ನೆರವಾಗುವುದು ಮಾತ್ರವಲ್ಲದೆ ಇದು ಭ್ರೂಣದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುವುದು. ಬೆಂಡೆಕಾಯಿಯು ಗರ್ಭಪಾತವಾಗದಂತೆ ತಡೆಯುವುದು. ಭ್ರೂಣದ ನರಕೊಳವೆಗಳು ಬೆಳೆಯಲು ಫಾಲಿಕ್ ಆಮ್ಲವು ನೆರವಾಗುವುದು.
ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ
ಬೆಂಡೆಯಲ್ಲಿರುವ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಚರ್ಮಕ್ಕೆ ಒಳಗಿನಿಂದ ನೀಡುವ ಪೋಷಣೆಯ ಪರಿಣಾಮವಾಗಿ ಚರ್ಮ ತನ್ನ ಸಹಜ ಸೌಂದರ್ಯ ಮತ್ತು ಕಾಂತಿಯನ್ನು ಹೊಂದುತ್ತದೆ. ಇದಕ್ಕಾಗಿ ಎಳೆಯ ಬೆಂಡೆಯನ್ನು ಆಗಾಗ ಹಸಿಯಾಗಿ ತಿಂದರೆ ಹೆಚ್ಚು ಪರಿಣಾಮಕಾರಿಯಾಗಿದೆ.
ಪ್ರತಿರೋಧಕ ಶಕ್ತಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ವಿಟಮಿನ್ ಸಿ ಅಂಶವು ಪ್ರತಿರೋಧಕ ಶಕ್ತಿ ಸುಧಾರಣೆ ಮಾಡುವಲ್ಲಿ ಸಹಕಾರಿ ಆಗಿರುವುದು.
ರಕ್ತಹೀನತೆ ನಿವಾರಣೆ
ಬೆಂಡೆಕಾಯಿಯಲ್ಲಿ ಕಬ್ಬಿನಾಂಶ, ಫಾಲಿಕ್ ಆಮ್ಲ ಮತ್ತು ವಿಟಮಿನ್ ಕೆ ಇದೆ. ಇದು ರಕ್ತಹೀನತೆ ತಡೆಯಲು ಮತ್ತು ನಿವಾರಣೆ ಮಾಡಲು ನೆರವಾಗುವುದು.
ಕರುಳಿನ ಕ್ಯಾನ್ಸರ್ ತಡೆಯಲು ನೆರವಾಗುವುದು
ಬೇರೆಲ್ಲಾ ನಾರಿನಾಂಶವಿರುವಂತಹ ಆಹಾರದಂತೆ ಬೆಂಡೆಕಾಯಿ ಕೂಡ ಕರುಳಿನ ಕ್ಯಾನರ್ ತಡೆಯುವಲ್ಲಿ ನೆರವಾಗುವುದು. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಟ್ಟು ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ನೆರವಾಗುವುದು.
ಕಣ್ಣಿನ ದೃಷ್ಟಿ ಸುಧಾರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ಬೆಟಾ ಕ್ಯಾರೋಟಿನ್ ಮತ್ತು ವಿಟಮಿನ್ ಎ ಅಂಶವು ಕಣ್ಣಿನ ದೃಷ್ಟಿ ಸುಧಾರಿಸಲು ತುಂಬಾ ನೆರವಾಗುವುದು.
ತಲೆಹೊಟ್ಟು ಮತ್ತು ಹೇನಿಗೆ ಚಿಕಿತ್ಸೆ
ತಲೆಹೊಟ್ಟು ಮತ್ತು ಹೇನು ನಿವಾರಿಸಲು ಬೆಂಡೆಕಾಯಿ ಬಳಸಲಾಗುತ್ತದೆ. ನೇರವಾಗಿ ಬೆಂಡೆಕಾಯಿ ಕತ್ತರಿಸಿಕೊಳ್ಳಿ ಮತ್ತು ಇದನ್ನು ನೀರಿನಲ್ಲಿ ಬಿಸಿ ಮಾಡಿ. ಈ ನೀರಿಗೆ ಲಿಂಬೆರಸ ಹಾಕಿ ಮತ್ತು ಕೂದಲು ತೊಳೆಯಲು ಈ ನೀರನ್ನು ಬಳಸಿ. ಬೆಂಡೆಕಾಯಿಯಲ್ಲಿ ನಾರಿನಾಂಶವು ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣದಿಂದಾಗಿ ಆಹಾರ ತಜ್ಞರು ಸಾಧ್ಯವಾದಷ್ಟು ತರಕಾರಿ ಸೇವಿಸಲು ಹೇಳುವರು.
ಕೊಲೆಸ್ಟ್ರಾಲ್ ರೋಗಿಗಳಿಗೆ ಸೂಕ್ತವಾಗಿದೆ

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇರುವ ರೋಗಿಗಳಿಗೆ ವೈದ್ಯರು ಹೆಚ್ಚಿನ ಆಹಾರಗಳನ್ನು ಸೇವಿಸದಂತೆ ಸಲಹೆ ಮಾಡುತ್ತಾರೆ. ಆದರೆ ಈ ರೋಗಿಗಳು ಬೆಂಡೆಕಾಯಿಯನ್ನು ಮಾತ್ರ ಸುರಕ್ಷಿತವಾಗಿ ಸೇವಿಸಬಹುದು. ಏಕೆಂದರೆ ಬೆಂಡೆಯಲ್ಲಿ ಯಾವುದೇ ಕೊಲೆಸ್ಟ್ರಾಲ್ ಆಗಲೀ ಕೊಲೆಸ್ಟ್ರಾಲ್ ಉಂಟುಮಾಡುವ ಕಣಗಳಾಗಲೀ ಇಲ್ಲದೇ ಇರುವುದರಿಂದ ಕೊಲೆಸ್ಟ್ರಾಲ್ ರೋಗಿಗಳ ಪಾಲಿನ ಪಂಚಾಮೃತವಾಗಿದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟೈಲ್ಗಾಗಿ ಕಡಿಮೆ ಬೆಲೆಯ ಸನ್ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್ಗ್ಲಾಸ್ ಕಣ್ಣಿಗೆ…
ಕರ್ನಾಟಕ ಹೈ ಕೋರ್ಟ್ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್ನ ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.