ಸುದ್ದಿ

ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

52

ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ ಜೂನ್‌ನಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದು ತಮ್ಮ ಸಮಸ್ಯೆ ವಿವರಿಸಿದ್ದರು.

ಅಲ್ಲದೇ 2018ರ ಸೆ.15ರಂದು ಪಿಎಂ ಟ್ವಿಟರ್‌ ಖಾತೆಗೆ ಸಮಸ್ಯೆ ಬರೆದು ಟ್ಯಾಗ್‌ ಮಾಡಿದ್ದರು. ಅದರ ಪ್ರತಿಫಲವಾಗಿ 2018ರ ಅ.1ರಂದು ರೂರಲ್‌ ಎಲೆಕ್ಟ್ರಿಕಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ವತಿಯಿಂದ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಮರೇಶಗೆ ಉತ್ತರ ಬಂತು. ಕೇಂದ್ರ ಸರ್ಕಾರದ ಸೌಭಾಗ್ಯ ಯೋಜನೆಯಡಿ ಆಯ್ದ ದೊಡ್ಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುತ್ತಿರುವ ವಿಷಯವನ್ನು ಪತ್ರದಲ್ಲಿ ಉಲ್ಲೇಖೀಸಲಾಗಿತ್ತು.

ವಿದ್ಯುತ್‌ ಇಲ್ಲದೇ ಚಿಮಣಿ ಬೆಳಕಿನಲ್ಲಿ ಕಾಲ ಕಳೆಯುತ್ತಿದ್ದ ದೊಡ್ಡಿಗಳಿಗೆ ಈಗ ಬೆಳಕಿನ ಸೌಭಾಗ್ಯ ಬಂದಂತಾಗಿದೆ. ಜೆಸ್ಕಾಂ ವಿಭಾಗೀಯ ಕಚೇರಿ ಸಹಾಯಕ ಎಂಜಿನಿಯರ್‌ ಹಳ್ಳಿಗಳಿಗೆ ತೆರಳಿ ಸಮೀಕ್ಷೆ ನಡೆಸಿ ಅಂದಾಜು ಪಟ್ಟಿ ಸಿದ್ಧಪಡಿಸಿದ್ದರು. ಈಗಾಗಲೇ ಗ್ರಾಮಗಳಲ್ಲಿ ವಿದ್ಯುತ್‌ ಕಂಬಗಳನ್ನು ಹಾಕಿದ್ದು, ಬಹುತೇಕ ಮನೆಗಳಿಗೆ ಮೀಟರ್‌ ಅಳವಡಿಸಲಾಗಿದೆ.ಜತೆಗೆ, ಟ್ರಾನ್ಸ್‌ಫಾರ್ಮರ್‌ ತರಲಾಗಿದ್ದು, ಒಂದೆರಡು ದಿನಗಳಲ್ಲಿ ಅಳವಡಿಸುವ ಸಾಧ್ಯತೆಯಿದೆ. ಇದು ಕೇವಲ ಮೂರು ದೊಡ್ಡಿಗಳಿಗೆ ಮಾತ್ರವಲ್ಲದೇ ಇನ್ನುಳಿದ ಹತ್ತಾರು ದೊಡ್ಡಿಗಳ ಭಾಗ್ಯದ ಬಾಗಿಲು ತೆರೆಸಿದೆ. ಜೆಸ್ಕಾಂ ಅಧಿಕಾರಿಗಳ ಮಾಹಿತಿ ಪ್ರಕಾರ 1,400 ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತಿದೆ.

 ತಮ್ಮ ದೊಡ್ಡಿಗಳಲ್ಲಿ ಉನ್ನತ ವ್ಯಾಸಂಗಕ್ಕೆ ಅವಕಾಶ ಇಲ್ಲದ ಕಾರಣ ಮಾವನ ಮನೆಯಲ್ಲಿದ್ದು ಓದಿದ ಅಮರೇಶ, ಎಂಟೆಕ್‌ ಪದವಿ ಪಡೆದಿದ್ದಾರೆ. ಬಳಿಕ ಮುಂಬೈನಲ್ಲಿ ಕೆಲ ಕಾಲ ಉದ್ಯೋಗ ಮಾಡಿ ಈಗ ಪುನಃ ಊರು ಸೇರಿಕೊಂಡಿದ್ದಾರೆ. ಸ್ಥಳೀಯ ಮಟ್ಟದಲ್ಲಿ ತಮ್ಮ ದೊಡ್ಡಿಗಳ ಸಮಸ್ಯೆ ನೀಗದ ಕಾರಣ ಪ್ರಧಾನಿ ಕಚೇರಿಯ ಮೊರೆ ಹೋಗಿದ್ದಾರೆ. ಅವರ ಸಣ್ಣ ನಡೆ ಈಗ ದೊಡ್ಡಮಟ್ಟದ ಪ್ರತಿಫಲವನ್ನೇ ನೀಡಿದೆ.

ಅನೇಕ ದೊಡ್ಡಿಗಳಿಗೆ ತೆರಳಿ ಶುಲ್ಕ ಪಾವತಿಸಿದರೆ ವಿದ್ಯುತ್‌ ನೀಡುವುದಾಗಿ ನಾವು ಈ ಮೊದಲೂ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ಜನರು ಶುಲ್ಕ ಕಟ್ಟಲು ಮುಂದಾಗುತ್ತಿರಲಿಲ್ಲ. ಸೌಭಾಗ್ಯ ಯೋಜನೆಯಡಿ ವಿದ್ಯುತ್‌ ನೀಡುವಂತೆ ನಮಗೆ ನಿರ್ದೇಶನ ಬಂದ ಕಾರಣ ಆ ಮೂರು ದೊಡ್ಡಿಗಳ ಜತೆ ಇನ್ನೂ ಅನೇಕ ಕಡೆ ವಿದ್ಯುತ್‌ ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ವಿದ್ಯುತ್‌ ಸರಬರಾಜು ಆರಂಭಿಸಲಾಗುವುದು. ಅಲ್ಲಿನ ನಿವಾಸಿಗಳು ಇನ್ನು ಮುಂದೆ ಸರಿಯಾಗಿ ವಿದ್ಯುತ್‌ ಬಿಲ್‌ ಪಾವತಿಸಿದರೆ ಸಾಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • ಸುದ್ದಿ

    30 ಸೆಕೆಂಡಿಗೆ ಮೊಬೈಲ್ ಫುಲ್ ಚಾರ್ಜ್ ಆಗುವ ಡಿವೈಸ್ ಕಂಡುಹಿಡಿದ ಭಾರತದ ಹುಡುಗಿ, ದೊಡ್ಡ ದೊಡ್ಡ ಕಂಪನಿಗಳು ಶಾಕ್.

    ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…

  • ಮನರಂಜನೆ

    ‘ಹರ ಹರ ಮಹಾದೇವ’ ಧಾರಾವಾಹಿಯನ್ನು ನಿಲ್ಲಿಸಿದ ಕಾರಣ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…!

    ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.