ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ ಜೂನ್ನಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದು ತಮ್ಮ ಸಮಸ್ಯೆ ವಿವರಿಸಿದ್ದರು.
ಅಲ್ಲದೇ 2018ರ ಸೆ.15ರಂದು ಪಿಎಂ ಟ್ವಿಟರ್ ಖಾತೆಗೆ ಸಮಸ್ಯೆ ಬರೆದು ಟ್ಯಾಗ್ ಮಾಡಿದ್ದರು. ಅದರ ಪ್ರತಿಫಲವಾಗಿ 2018ರ ಅ.1ರಂದು ರೂರಲ್ ಎಲೆಕ್ಟ್ರಿಕಲ್ ಕಾರ್ಪೊರೇಶನ್ ಲಿಮಿಟೆಡ್ ವತಿಯಿಂದ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಮರೇಶಗೆ ಉತ್ತರ ಬಂತು. ಕೇಂದ್ರ ಸರ್ಕಾರದ ಸೌಭಾಗ್ಯ ಯೋಜನೆಯಡಿ ಆಯ್ದ ದೊಡ್ಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿರುವ ವಿಷಯವನ್ನು ಪತ್ರದಲ್ಲಿ ಉಲ್ಲೇಖೀಸಲಾಗಿತ್ತು.
ವಿದ್ಯುತ್ ಇಲ್ಲದೇ ಚಿಮಣಿ ಬೆಳಕಿನಲ್ಲಿ ಕಾಲ ಕಳೆಯುತ್ತಿದ್ದ ದೊಡ್ಡಿಗಳಿಗೆ ಈಗ ಬೆಳಕಿನ ಸೌಭಾಗ್ಯ ಬಂದಂತಾಗಿದೆ. ಜೆಸ್ಕಾಂ ವಿಭಾಗೀಯ ಕಚೇರಿ ಸಹಾಯಕ ಎಂಜಿನಿಯರ್ ಹಳ್ಳಿಗಳಿಗೆ ತೆರಳಿ ಸಮೀಕ್ಷೆ ನಡೆಸಿ ಅಂದಾಜು ಪಟ್ಟಿ ಸಿದ್ಧಪಡಿಸಿದ್ದರು. ಈಗಾಗಲೇ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳನ್ನು ಹಾಕಿದ್ದು, ಬಹುತೇಕ ಮನೆಗಳಿಗೆ ಮೀಟರ್ ಅಳವಡಿಸಲಾಗಿದೆ.ಜತೆಗೆ, ಟ್ರಾನ್ಸ್ಫಾರ್ಮರ್ ತರಲಾಗಿದ್ದು, ಒಂದೆರಡು ದಿನಗಳಲ್ಲಿ ಅಳವಡಿಸುವ ಸಾಧ್ಯತೆಯಿದೆ. ಇದು ಕೇವಲ ಮೂರು ದೊಡ್ಡಿಗಳಿಗೆ ಮಾತ್ರವಲ್ಲದೇ ಇನ್ನುಳಿದ ಹತ್ತಾರು ದೊಡ್ಡಿಗಳ ಭಾಗ್ಯದ ಬಾಗಿಲು ತೆರೆಸಿದೆ. ಜೆಸ್ಕಾಂ ಅಧಿಕಾರಿಗಳ ಮಾಹಿತಿ ಪ್ರಕಾರ 1,400 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ.
ತಮ್ಮ ದೊಡ್ಡಿಗಳಲ್ಲಿ ಉನ್ನತ ವ್ಯಾಸಂಗಕ್ಕೆ ಅವಕಾಶ ಇಲ್ಲದ ಕಾರಣ ಮಾವನ ಮನೆಯಲ್ಲಿದ್ದು ಓದಿದ ಅಮರೇಶ, ಎಂಟೆಕ್ ಪದವಿ ಪಡೆದಿದ್ದಾರೆ. ಬಳಿಕ ಮುಂಬೈನಲ್ಲಿ ಕೆಲ ಕಾಲ ಉದ್ಯೋಗ ಮಾಡಿ ಈಗ ಪುನಃ ಊರು ಸೇರಿಕೊಂಡಿದ್ದಾರೆ. ಸ್ಥಳೀಯ ಮಟ್ಟದಲ್ಲಿ ತಮ್ಮ ದೊಡ್ಡಿಗಳ ಸಮಸ್ಯೆ ನೀಗದ ಕಾರಣ ಪ್ರಧಾನಿ ಕಚೇರಿಯ ಮೊರೆ ಹೋಗಿದ್ದಾರೆ. ಅವರ ಸಣ್ಣ ನಡೆ ಈಗ ದೊಡ್ಡಮಟ್ಟದ ಪ್ರತಿಫಲವನ್ನೇ ನೀಡಿದೆ.
ಅನೇಕ ದೊಡ್ಡಿಗಳಿಗೆ ತೆರಳಿ ಶುಲ್ಕ ಪಾವತಿಸಿದರೆ ವಿದ್ಯುತ್ ನೀಡುವುದಾಗಿ ನಾವು ಈ ಮೊದಲೂ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ಜನರು ಶುಲ್ಕ ಕಟ್ಟಲು ಮುಂದಾಗುತ್ತಿರಲಿಲ್ಲ. ಸೌಭಾಗ್ಯ ಯೋಜನೆಯಡಿ ವಿದ್ಯುತ್ ನೀಡುವಂತೆ ನಮಗೆ ನಿರ್ದೇಶನ ಬಂದ ಕಾರಣ ಆ ಮೂರು ದೊಡ್ಡಿಗಳ ಜತೆ ಇನ್ನೂ ಅನೇಕ ಕಡೆ ವಿದ್ಯುತ್ ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ವಿದ್ಯುತ್ ಸರಬರಾಜು ಆರಂಭಿಸಲಾಗುವುದು. ಅಲ್ಲಿನ ನಿವಾಸಿಗಳು ಇನ್ನು ಮುಂದೆ ಸರಿಯಾಗಿ ವಿದ್ಯುತ್ ಬಿಲ್ ಪಾವತಿಸಿದರೆ ಸಾಕು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…