ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್ಗಳಲ್ಲಿ ರಾಯಲ್ ಎನ್ಫೀಲ್ಡ್ ಒಂದಾಗಿದೆ.
ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-
ಆದ್ರೆ ಅಂತಹ ಬೈಕ್ಗಳ ರಾಜ, ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.
ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್ಫೀಲ್ಡ್ ಬೈಕ್ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.
ಬಜಾಜ್ ಆಟೋದಿಂದ ರಾಯಲ್ ಎನ್ಫೀಲ್ಡ್ ಬೈಕ್’ನ ವ್ಯಂಗ್ಯ :-
ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್ಫೀಲ್ಡ್ ಬೈಕ್ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.
ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.
ಡೊಮಿನರ್ನಿಂದ ಅಪಹಾಸ್ಯ :-
ರಾಯಲ್ ಎನ್ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.
ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…
ಎನ್ಫೀಲ್ಡ್ ಬೈಕ್’ನ್ನು ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಗೊತ್ತಾ? (ಫೀಚರ್)
ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,
ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,
ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ
ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,
ಸಂಪೂರ್ಣ ಎಲ್ಇಡಿ ಹೆಡ್ಲ್ಯಾಂಪ್,
ಆಟೋ ಹೆಡ್ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್ಸಿಡಿ ಡಿಸ್ಪ್ಲೇ,
ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.
ಮೂಲ:ಮಾಹಿತಿ ಸಂಗ್ರಹ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.