ದಿನಕ್ಕೊಂದು ನೀತಿ ಕಥೆ

ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

425

 ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

ಇತ್ತ ಕಾಶಿಯಲ್ಲಿ ಬ್ರಹ್ಮದತ್ತನಿಗೆ ಸಕಲರೂ ತನ್ನ ಸದ್ಗುಣಗಳನ್ನೇ ಹಾಡಿ ಹೋಗಳತ್ತಿರುವುದನ್ನು ಕೇಳಿ ಕೇಳಿ ಒಂದು ಸಂದೇಹ ಬಂತು. ‘’ಪ್ರತಿಯೊಬ್ಬರೂ ನನ್ನನ್ನೂ ಹೊಗಳುತ್ತಾರೆ, ಕೀರ್ತಿಸುತ್ತಾರೆ. ಅಂದರೆ ನಾನು ಸರ್ವಗುಣ ಸಂಪನನ್ನೇ?ನನ್ನಲ್ಲಿ ಯಾವ ದೋಷವು ಇಲ್ಲವೇ?ಇದ್ದರೂ, ಕಂಡರೂ, ಯಾರೂ ಅದನ್ನು ನನ್ನ ದಾಕ್ಷೀಣ್ಯದಿಂದ ಹೇಳುತ್ತಿಲ್ಲವೇ?’’ ಎಂದುಕೊಂಡ.

ಯಾರಾದರೊಬ್ಬರಿಗೆ ತನ್ನಲ್ಲಿರುವ ದೋಷ ಕಾಣಿಸಬಹುದು, ಯಾರಾದರೊಬ್ಬರಿಗೆ ತನ್ನ ಕೊರತೆಯನ್ನು ಧೈರ್ಯವಾಗಿ ಆಡಿ ತೋರಿಸಬಹುದು, ಎಂದು ಅವನು ಹುಡುಕತೊಡಗಿದ. ಮೊದಲು ಅವನು ತನ್ನ ಪರಿವಾರದಲ್ಲಿ ಹುಡುಕಿದ.

ಆದರೆ ಅವರಲ್ಲಿ ಯಾರೂ ರಾಜನಲ್ಲಿ ದೋಷವಿದೆಯೆಂದು ಹೇಳಲಿಲ್ಲ ಅರಮನೆಯ ಪರಿವಾರದವರು ದೋಷ ಕಂಡವರು ಯಾರೂ ಇರಲಿಲ್ಲ. ನಗರದ ಹೊರಗೆ ವೇಷ ಮರೆಸಿಕೊಂಡು ಸಂಚಾರ ಮಾಡಿದ ಅಲ್ಲೂ ಕೂಡ ಎಲ್ಲ ಅವನ ಗುಣಗಾನ ಮಾಡಿದರೇ  ಹೊರತು, ಒಬ್ಬನಾದರೂ ರಾಜನ ನಡತೆಯಲ್ಲಿ ಈ ತಪ್ಪಿದೆ ಎಂದು ಹೇಳಲಿಲ್ಲ.

ಕಡೆಗೆ ಅವನು ಹಿಮಾಲಯಕ್ಕೆ ಹೋದ. ಆ ಗುಡ್ಡ ಗಾಡಿನ ತುಂಬಾ  ಸಂಚರಿಸಿದ. ಕಡೆಗೆ ಬೋಧಿಸತ್ವನ ಪರ್ಣಕುಟೀರ ಕಣ್ಣಿಗೆ ಬಿತ್ತು. ರಾಜ ಅಲ್ಲಿಗೆ ಹೋಗಿ ಅವನಿಗೆ ನಮಸ್ಕರಿಸಿ ಕುಳಿತುಕೊಂಡ. ಬೋಧಿಸತ್ವ ಅವನ ಯೋಗಕ್ಷೇಮವನ್ನು ವಿಚಾರಿಸಿಕೊಂಡ.

ಬೋಧಿಸತ್ವ ಆಗ ಕಾಡಿನಿಂದ ತಂದಿದ್ದ ಅರಳಿ ಹಣ್ಣುಗಳನ್ನು ತಿನ್ನುತ್ತಿದ್ದ. ಅವನ್ನೇ ರಾಜನಿಗೆ ನೀಡಿ, ‘’ಅಯ್ಯಾ, ಹಸಿದಿರುವಂತಿದೆ, ಈ ಅರಳಿ ಹಣ್ಣುಗಳನ್ನು ತಿಂದು ನೀರು ಕುಡಿ’’ ಎಂದ.

ರಾಜ ಹಾಗೇ ಮಾಡಿದ. ಆ ಅರಳಿ ಹಣ್ಣುಗಳು ಅಮೃತದಂತಿದ್ದವು. ‘’ಪೂಜ್ಯರೆ, ಈ ಹಣ್ಣುಗಳು ಇಷ್ಟೊಂದು ಮಧುರವಾಗಿರಲು ಕಾರಣವೇನು?’’ ಎಂದು ಕೇಳಿದ.

ಬೋಧಿಸತ್ವ ಹೇಳಿದ, ‘’ಈ ಪ್ರಾಂತ್ಯವನ್ನು ಆಳುತ್ತಿರುವ ರಾಜ ಧರ್ಮವನ್ನು ಮೀರದೆ, ನ್ಯಾಯದಿಂದ ನಡೆದುಕೊಳ್ಳುತ್ತಿದ್ದಾನೆ. ಅದಕ್ಕೇ ಈ ಹಣ್ಣುಗಳು ಇಷ್ಟು ಸಿಹಿಯಾಗಿವೆ.’’

‘’ಪೂಜ್ಯರೆ’’ ಬೋಧಿಸತ್ವ ಹೇಳಿದ, ‘’ಸಿಹಿ ಕೊಡುವ ಪದಾರ್ಥಗಳು ತಮ್ಮ ಸಿಹಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಇಡೀ ದೇಶವೇ ಸತ್ವವನ್ನು ಕಳೆದುಕೊಂಡು ನಾಶವಾಗುತ್ತದೆ.’’

ರಾಜ ತನ್ನ ಪರಿಚಯವನ್ನು ಹೇಳಿಕೊಳ್ಳದೆ ನಮಸ್ಕರಿಸಿ ಅಲ್ಲಿಂದ ಹೊರಟು ಬಂದ.

ಬೋಧಿಸತ್ವನ ಹೇಳಿದ ಮಾತುಗಳನ್ನು ಪರೀಕ್ಷಿಸುವ ಮನಸ್ಸಾಯಿತು. ರಾಜ ಅಂದಿನಿಂದ ಅಧರ್ಮದಿಂದ ರಾಜ್ಯಭಾರ ಮಾಡುತ್ತ ಅನ್ಯಾಯದಿಂದ ನಡೆದುಕೊಳ್ಳತೊಡಗಿದ.

ಕೆಲವು ಕಾಲದ ನಂತರ ಮತ್ತೆ ಅವನು ಬೋಧಿಸತ್ವನ ಬಳಿಗೆ ಬಂದು ನಮಸ್ಕರಿಸಿ ಕುಳಿತುಕೊಂಡ. ಆ ದಿನವೂ ಬೋಧಿಸತ್ವ ಅವನಿಗೆ ಅರಳಿ ಹಣ್ಣುಗಳನ್ನು ಕೊಟ್ಟ ಅದನ್ನು ಬಾಯಿಗಿಟ್ಟುಕೊಂಡ ಕೂಡಲೇ ಕಹಿಯಾಗಿ ರಾಜ ತಿನ್ನಲಾರದೆ ಉಗಿದುಬಿಟ್ಟ. ‘’ಪೂಜ್ಯರೇ, ಈ ಹಣ್ಣುಗಳನ್ನು ತಿನ್ನಲಾರದಷ್ಟು ಕಹಿಯಗಿವೆ’’ ಎಂದ.

ಬೋಧಿಸತ್ವ ಹೇಳಿದ, ‘’ಹಾಗಾದರೆ ರಾಜ ನಿಜವಾಗಲೂ ಅಧರ್ಮಿಯಗಿರಬೇಕು. ಅದರಿಂದಲೇ ಹಣ್ಣುಗಳನ್ನು ತಮ್ಮ ಸಿಹಿ ಕಳೆದುಕೊಂಡಿದೆ. ರಾಜ ಅಧಾರ್ಮಿಕನಾದರೆ ಇಡೀ ಪ್ರಜಸಮೂಹಂ ಅಧರ್ಮಚರಣೆ ಮಾಡುತ್ತ ದೇಶವೇ ದುಃಖಕ್ಕೆ ಒಳಗಾಗುತ್ತದೆ,’’

ರಾಜ ತನ್ನ ಪರಿಚಯವನ್ನು ಬಹಿರಂಗಪಡಿಸಿದ. ‘’ಪೂಜ್ಯರೇ, ನಾನೇ ಅರಳಿ ಹಣ್ಣನ್ನು ಸಿಹಿ ಮಾಡಿದೆ. ಅನಂತರ ನಾನೇ ಅದನ್ನು ಕಹಿ ಮಾಡಿದೆ. ಈಗ ಮತ್ತೆ ಸಿಹಿ ಮಾಡುತ್ತೇನೆ’’ ಎಂದು ನಮಸ್ಕರಿಸಿದ.

ಹಿಂದಿರುಗಿ ಕಾಶಿಗೆ ಹೋಗಿ ಧರ್ಮದಿಂದ ರಾಜ್ಯಭಾರ ಮಾಡಿದ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

    ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

  • ಉಪಯುಕ್ತ ಮಾಹಿತಿ

    ರಥಸಪ್ತಮಿ ಮಹತ್ವ?

    *ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

    ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…

  • ಸುದ್ದಿ

    ದಾಖಲೆಯ ಬೆಲೆಗೆ ಸೇಲಾಯ್ತು ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ವಿತರಣೆ ಹಕ್ಕು…!

    ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…

  • ರಾಜಕೀಯ

    ಇವರು ಹೇಳಿರುವ ಪ್ರಕಾರ 2019ಕ್ಕೆ ಭಾರತದ ಜನರಿಗೆ ಬಿಜೆಪಿ ಮತ್ತು ಜಿಯೋ ಮಾತ್ರ ಆಪ್ಷನ್ ಆಗುತ್ತಾ!

    ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…