ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಇತ್ತ ಕಾಶಿಯಲ್ಲಿ ಬ್ರಹ್ಮದತ್ತನಿಗೆ ಸಕಲರೂ ತನ್ನ ಸದ್ಗುಣಗಳನ್ನೇ ಹಾಡಿ ಹೋಗಳತ್ತಿರುವುದನ್ನು ಕೇಳಿ ಕೇಳಿ ಒಂದು ಸಂದೇಹ ಬಂತು. ‘’ಪ್ರತಿಯೊಬ್ಬರೂ ನನ್ನನ್ನೂ ಹೊಗಳುತ್ತಾರೆ, ಕೀರ್ತಿಸುತ್ತಾರೆ. ಅಂದರೆ ನಾನು ಸರ್ವಗುಣ ಸಂಪನನ್ನೇ?ನನ್ನಲ್ಲಿ ಯಾವ ದೋಷವು ಇಲ್ಲವೇ?ಇದ್ದರೂ, ಕಂಡರೂ, ಯಾರೂ ಅದನ್ನು ನನ್ನ ದಾಕ್ಷೀಣ್ಯದಿಂದ ಹೇಳುತ್ತಿಲ್ಲವೇ?’’ ಎಂದುಕೊಂಡ.
ಯಾರಾದರೊಬ್ಬರಿಗೆ ತನ್ನಲ್ಲಿರುವ ದೋಷ ಕಾಣಿಸಬಹುದು, ಯಾರಾದರೊಬ್ಬರಿಗೆ ತನ್ನ ಕೊರತೆಯನ್ನು ಧೈರ್ಯವಾಗಿ ಆಡಿ ತೋರಿಸಬಹುದು, ಎಂದು ಅವನು ಹುಡುಕತೊಡಗಿದ. ಮೊದಲು ಅವನು ತನ್ನ ಪರಿವಾರದಲ್ಲಿ ಹುಡುಕಿದ.
ಆದರೆ ಅವರಲ್ಲಿ ಯಾರೂ ರಾಜನಲ್ಲಿ ದೋಷವಿದೆಯೆಂದು ಹೇಳಲಿಲ್ಲ ಅರಮನೆಯ ಪರಿವಾರದವರು ದೋಷ ಕಂಡವರು ಯಾರೂ ಇರಲಿಲ್ಲ. ನಗರದ ಹೊರಗೆ ವೇಷ ಮರೆಸಿಕೊಂಡು ಸಂಚಾರ ಮಾಡಿದ ಅಲ್ಲೂ ಕೂಡ ಎಲ್ಲ ಅವನ ಗುಣಗಾನ ಮಾಡಿದರೇ ಹೊರತು, ಒಬ್ಬನಾದರೂ ರಾಜನ ನಡತೆಯಲ್ಲಿ ಈ ತಪ್ಪಿದೆ ಎಂದು ಹೇಳಲಿಲ್ಲ.
ಕಡೆಗೆ ಅವನು ಹಿಮಾಲಯಕ್ಕೆ ಹೋದ. ಆ ಗುಡ್ಡ ಗಾಡಿನ ತುಂಬಾ ಸಂಚರಿಸಿದ. ಕಡೆಗೆ ಬೋಧಿಸತ್ವನ ಪರ್ಣಕುಟೀರ ಕಣ್ಣಿಗೆ ಬಿತ್ತು. ರಾಜ ಅಲ್ಲಿಗೆ ಹೋಗಿ ಅವನಿಗೆ ನಮಸ್ಕರಿಸಿ ಕುಳಿತುಕೊಂಡ. ಬೋಧಿಸತ್ವ ಅವನ ಯೋಗಕ್ಷೇಮವನ್ನು ವಿಚಾರಿಸಿಕೊಂಡ.
ಬೋಧಿಸತ್ವ ಆಗ ಕಾಡಿನಿಂದ ತಂದಿದ್ದ ಅರಳಿ ಹಣ್ಣುಗಳನ್ನು ತಿನ್ನುತ್ತಿದ್ದ. ಅವನ್ನೇ ರಾಜನಿಗೆ ನೀಡಿ, ‘’ಅಯ್ಯಾ, ಹಸಿದಿರುವಂತಿದೆ, ಈ ಅರಳಿ ಹಣ್ಣುಗಳನ್ನು ತಿಂದು ನೀರು ಕುಡಿ’’ ಎಂದ.
ರಾಜ ಹಾಗೇ ಮಾಡಿದ. ಆ ಅರಳಿ ಹಣ್ಣುಗಳು ಅಮೃತದಂತಿದ್ದವು. ‘’ಪೂಜ್ಯರೆ, ಈ ಹಣ್ಣುಗಳು ಇಷ್ಟೊಂದು ಮಧುರವಾಗಿರಲು ಕಾರಣವೇನು?’’ ಎಂದು ಕೇಳಿದ.
ಬೋಧಿಸತ್ವ ಹೇಳಿದ, ‘’ಈ ಪ್ರಾಂತ್ಯವನ್ನು ಆಳುತ್ತಿರುವ ರಾಜ ಧರ್ಮವನ್ನು ಮೀರದೆ, ನ್ಯಾಯದಿಂದ ನಡೆದುಕೊಳ್ಳುತ್ತಿದ್ದಾನೆ. ಅದಕ್ಕೇ ಈ ಹಣ್ಣುಗಳು ಇಷ್ಟು ಸಿಹಿಯಾಗಿವೆ.’’
‘’ಪೂಜ್ಯರೆ’’ ಬೋಧಿಸತ್ವ ಹೇಳಿದ, ‘’ಸಿಹಿ ಕೊಡುವ ಪದಾರ್ಥಗಳು ತಮ್ಮ ಸಿಹಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಇಡೀ ದೇಶವೇ ಸತ್ವವನ್ನು ಕಳೆದುಕೊಂಡು ನಾಶವಾಗುತ್ತದೆ.’’
ರಾಜ ತನ್ನ ಪರಿಚಯವನ್ನು ಹೇಳಿಕೊಳ್ಳದೆ ನಮಸ್ಕರಿಸಿ ಅಲ್ಲಿಂದ ಹೊರಟು ಬಂದ.
ಬೋಧಿಸತ್ವನ ಹೇಳಿದ ಮಾತುಗಳನ್ನು ಪರೀಕ್ಷಿಸುವ ಮನಸ್ಸಾಯಿತು. ರಾಜ ಅಂದಿನಿಂದ ಅಧರ್ಮದಿಂದ ರಾಜ್ಯಭಾರ ಮಾಡುತ್ತ ಅನ್ಯಾಯದಿಂದ ನಡೆದುಕೊಳ್ಳತೊಡಗಿದ.
ಕೆಲವು ಕಾಲದ ನಂತರ ಮತ್ತೆ ಅವನು ಬೋಧಿಸತ್ವನ ಬಳಿಗೆ ಬಂದು ನಮಸ್ಕರಿಸಿ ಕುಳಿತುಕೊಂಡ. ಆ ದಿನವೂ ಬೋಧಿಸತ್ವ ಅವನಿಗೆ ಅರಳಿ ಹಣ್ಣುಗಳನ್ನು ಕೊಟ್ಟ ಅದನ್ನು ಬಾಯಿಗಿಟ್ಟುಕೊಂಡ ಕೂಡಲೇ ಕಹಿಯಾಗಿ ರಾಜ ತಿನ್ನಲಾರದೆ ಉಗಿದುಬಿಟ್ಟ. ‘’ಪೂಜ್ಯರೇ, ಈ ಹಣ್ಣುಗಳನ್ನು ತಿನ್ನಲಾರದಷ್ಟು ಕಹಿಯಗಿವೆ’’ ಎಂದ.
ಬೋಧಿಸತ್ವ ಹೇಳಿದ, ‘’ಹಾಗಾದರೆ ರಾಜ ನಿಜವಾಗಲೂ ಅಧರ್ಮಿಯಗಿರಬೇಕು. ಅದರಿಂದಲೇ ಹಣ್ಣುಗಳನ್ನು ತಮ್ಮ ಸಿಹಿ ಕಳೆದುಕೊಂಡಿದೆ. ರಾಜ ಅಧಾರ್ಮಿಕನಾದರೆ ಇಡೀ ಪ್ರಜಸಮೂಹಂ ಅಧರ್ಮಚರಣೆ ಮಾಡುತ್ತ ದೇಶವೇ ದುಃಖಕ್ಕೆ ಒಳಗಾಗುತ್ತದೆ,’’
ರಾಜ ತನ್ನ ಪರಿಚಯವನ್ನು ಬಹಿರಂಗಪಡಿಸಿದ. ‘’ಪೂಜ್ಯರೇ, ನಾನೇ ಅರಳಿ ಹಣ್ಣನ್ನು ಸಿಹಿ ಮಾಡಿದೆ. ಅನಂತರ ನಾನೇ ಅದನ್ನು ಕಹಿ ಮಾಡಿದೆ. ಈಗ ಮತ್ತೆ ಸಿಹಿ ಮಾಡುತ್ತೇನೆ’’ ಎಂದು ನಮಸ್ಕರಿಸಿದ.
ಹಿಂದಿರುಗಿ ಕಾಶಿಗೆ ಹೋಗಿ ಧರ್ಮದಿಂದ ರಾಜ್ಯಭಾರ ಮಾಡಿದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…
![]()
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
Why did India fight for freedom from British?
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.