News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದಿನಕ್ಕೊಂದು ನೀತಿ ಕಥೆ

ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

429

 ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

ಇತ್ತ ಕಾಶಿಯಲ್ಲಿ ಬ್ರಹ್ಮದತ್ತನಿಗೆ ಸಕಲರೂ ತನ್ನ ಸದ್ಗುಣಗಳನ್ನೇ ಹಾಡಿ ಹೋಗಳತ್ತಿರುವುದನ್ನು ಕೇಳಿ ಕೇಳಿ ಒಂದು ಸಂದೇಹ ಬಂತು. ‘’ಪ್ರತಿಯೊಬ್ಬರೂ ನನ್ನನ್ನೂ ಹೊಗಳುತ್ತಾರೆ, ಕೀರ್ತಿಸುತ್ತಾರೆ. ಅಂದರೆ ನಾನು ಸರ್ವಗುಣ ಸಂಪನನ್ನೇ?ನನ್ನಲ್ಲಿ ಯಾವ ದೋಷವು ಇಲ್ಲವೇ?ಇದ್ದರೂ, ಕಂಡರೂ, ಯಾರೂ ಅದನ್ನು ನನ್ನ ದಾಕ್ಷೀಣ್ಯದಿಂದ ಹೇಳುತ್ತಿಲ್ಲವೇ?’’ ಎಂದುಕೊಂಡ.

ಯಾರಾದರೊಬ್ಬರಿಗೆ ತನ್ನಲ್ಲಿರುವ ದೋಷ ಕಾಣಿಸಬಹುದು, ಯಾರಾದರೊಬ್ಬರಿಗೆ ತನ್ನ ಕೊರತೆಯನ್ನು ಧೈರ್ಯವಾಗಿ ಆಡಿ ತೋರಿಸಬಹುದು, ಎಂದು ಅವನು ಹುಡುಕತೊಡಗಿದ. ಮೊದಲು ಅವನು ತನ್ನ ಪರಿವಾರದಲ್ಲಿ ಹುಡುಕಿದ.

ಆದರೆ ಅವರಲ್ಲಿ ಯಾರೂ ರಾಜನಲ್ಲಿ ದೋಷವಿದೆಯೆಂದು ಹೇಳಲಿಲ್ಲ ಅರಮನೆಯ ಪರಿವಾರದವರು ದೋಷ ಕಂಡವರು ಯಾರೂ ಇರಲಿಲ್ಲ. ನಗರದ ಹೊರಗೆ ವೇಷ ಮರೆಸಿಕೊಂಡು ಸಂಚಾರ ಮಾಡಿದ ಅಲ್ಲೂ ಕೂಡ ಎಲ್ಲ ಅವನ ಗುಣಗಾನ ಮಾಡಿದರೇ  ಹೊರತು, ಒಬ್ಬನಾದರೂ ರಾಜನ ನಡತೆಯಲ್ಲಿ ಈ ತಪ್ಪಿದೆ ಎಂದು ಹೇಳಲಿಲ್ಲ.

ಕಡೆಗೆ ಅವನು ಹಿಮಾಲಯಕ್ಕೆ ಹೋದ. ಆ ಗುಡ್ಡ ಗಾಡಿನ ತುಂಬಾ  ಸಂಚರಿಸಿದ. ಕಡೆಗೆ ಬೋಧಿಸತ್ವನ ಪರ್ಣಕುಟೀರ ಕಣ್ಣಿಗೆ ಬಿತ್ತು. ರಾಜ ಅಲ್ಲಿಗೆ ಹೋಗಿ ಅವನಿಗೆ ನಮಸ್ಕರಿಸಿ ಕುಳಿತುಕೊಂಡ. ಬೋಧಿಸತ್ವ ಅವನ ಯೋಗಕ್ಷೇಮವನ್ನು ವಿಚಾರಿಸಿಕೊಂಡ.

ಬೋಧಿಸತ್ವ ಆಗ ಕಾಡಿನಿಂದ ತಂದಿದ್ದ ಅರಳಿ ಹಣ್ಣುಗಳನ್ನು ತಿನ್ನುತ್ತಿದ್ದ. ಅವನ್ನೇ ರಾಜನಿಗೆ ನೀಡಿ, ‘’ಅಯ್ಯಾ, ಹಸಿದಿರುವಂತಿದೆ, ಈ ಅರಳಿ ಹಣ್ಣುಗಳನ್ನು ತಿಂದು ನೀರು ಕುಡಿ’’ ಎಂದ.

ರಾಜ ಹಾಗೇ ಮಾಡಿದ. ಆ ಅರಳಿ ಹಣ್ಣುಗಳು ಅಮೃತದಂತಿದ್ದವು. ‘’ಪೂಜ್ಯರೆ, ಈ ಹಣ್ಣುಗಳು ಇಷ್ಟೊಂದು ಮಧುರವಾಗಿರಲು ಕಾರಣವೇನು?’’ ಎಂದು ಕೇಳಿದ.

ಬೋಧಿಸತ್ವ ಹೇಳಿದ, ‘’ಈ ಪ್ರಾಂತ್ಯವನ್ನು ಆಳುತ್ತಿರುವ ರಾಜ ಧರ್ಮವನ್ನು ಮೀರದೆ, ನ್ಯಾಯದಿಂದ ನಡೆದುಕೊಳ್ಳುತ್ತಿದ್ದಾನೆ. ಅದಕ್ಕೇ ಈ ಹಣ್ಣುಗಳು ಇಷ್ಟು ಸಿಹಿಯಾಗಿವೆ.’’

‘’ಪೂಜ್ಯರೆ’’ ಬೋಧಿಸತ್ವ ಹೇಳಿದ, ‘’ಸಿಹಿ ಕೊಡುವ ಪದಾರ್ಥಗಳು ತಮ್ಮ ಸಿಹಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಇಡೀ ದೇಶವೇ ಸತ್ವವನ್ನು ಕಳೆದುಕೊಂಡು ನಾಶವಾಗುತ್ತದೆ.’’

ರಾಜ ತನ್ನ ಪರಿಚಯವನ್ನು ಹೇಳಿಕೊಳ್ಳದೆ ನಮಸ್ಕರಿಸಿ ಅಲ್ಲಿಂದ ಹೊರಟು ಬಂದ.

ಬೋಧಿಸತ್ವನ ಹೇಳಿದ ಮಾತುಗಳನ್ನು ಪರೀಕ್ಷಿಸುವ ಮನಸ್ಸಾಯಿತು. ರಾಜ ಅಂದಿನಿಂದ ಅಧರ್ಮದಿಂದ ರಾಜ್ಯಭಾರ ಮಾಡುತ್ತ ಅನ್ಯಾಯದಿಂದ ನಡೆದುಕೊಳ್ಳತೊಡಗಿದ.

ಕೆಲವು ಕಾಲದ ನಂತರ ಮತ್ತೆ ಅವನು ಬೋಧಿಸತ್ವನ ಬಳಿಗೆ ಬಂದು ನಮಸ್ಕರಿಸಿ ಕುಳಿತುಕೊಂಡ. ಆ ದಿನವೂ ಬೋಧಿಸತ್ವ ಅವನಿಗೆ ಅರಳಿ ಹಣ್ಣುಗಳನ್ನು ಕೊಟ್ಟ ಅದನ್ನು ಬಾಯಿಗಿಟ್ಟುಕೊಂಡ ಕೂಡಲೇ ಕಹಿಯಾಗಿ ರಾಜ ತಿನ್ನಲಾರದೆ ಉಗಿದುಬಿಟ್ಟ. ‘’ಪೂಜ್ಯರೇ, ಈ ಹಣ್ಣುಗಳನ್ನು ತಿನ್ನಲಾರದಷ್ಟು ಕಹಿಯಗಿವೆ’’ ಎಂದ.

ಬೋಧಿಸತ್ವ ಹೇಳಿದ, ‘’ಹಾಗಾದರೆ ರಾಜ ನಿಜವಾಗಲೂ ಅಧರ್ಮಿಯಗಿರಬೇಕು. ಅದರಿಂದಲೇ ಹಣ್ಣುಗಳನ್ನು ತಮ್ಮ ಸಿಹಿ ಕಳೆದುಕೊಂಡಿದೆ. ರಾಜ ಅಧಾರ್ಮಿಕನಾದರೆ ಇಡೀ ಪ್ರಜಸಮೂಹಂ ಅಧರ್ಮಚರಣೆ ಮಾಡುತ್ತ ದೇಶವೇ ದುಃಖಕ್ಕೆ ಒಳಗಾಗುತ್ತದೆ,’’

ರಾಜ ತನ್ನ ಪರಿಚಯವನ್ನು ಬಹಿರಂಗಪಡಿಸಿದ. ‘’ಪೂಜ್ಯರೇ, ನಾನೇ ಅರಳಿ ಹಣ್ಣನ್ನು ಸಿಹಿ ಮಾಡಿದೆ. ಅನಂತರ ನಾನೇ ಅದನ್ನು ಕಹಿ ಮಾಡಿದೆ. ಈಗ ಮತ್ತೆ ಸಿಹಿ ಮಾಡುತ್ತೇನೆ’’ ಎಂದು ನಮಸ್ಕರಿಸಿದ.

ಹಿಂದಿರುಗಿ ಕಾಶಿಗೆ ಹೋಗಿ ಧರ್ಮದಿಂದ ರಾಜ್ಯಭಾರ ಮಾಡಿದ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…

  • ಸುದ್ದಿ

    ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಬರೋಬ್ಬರಿ 50ಲಕ್ಷ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟ ಮಹಾನ್ ತಾಯಿ!ಮತ್ತೆ ಮಗಳ ಮದ್ವೆ ಹೇಗೆ?

     ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.    ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…