ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ. ತೀವ್ರ ಸಮಸ್ಯೆಗಳ ಸುಳಿಗೆ ಸಿಗುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ಶೀಘ್ರದಲ್ಲೇ ಇಂತಹ ಯುವತಿಯರಿಗೆ ಒತ್ತಾಸೆಯಾಗಿ ಒಂದು ಹೊಸ ಕಾನೂನು ತರಲಿದೆ.
ಇನ್ನು ಮುಂದೆ ಎನ್ಆರ್ಐಗಳು ಯಾರಾದರೂ ಸರಿ… ಭಾರತದಲ್ಲಿ ಯುವತಿಯರು ಮದುವೆ ಮಾಡಿಕೊಂಡು ಅವರೊಂದಿಗೆ ಸ್ವಲ್ಪ ಸಮಯ ಕಳೆದು ಬಳಿಕ ಅವರನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗಿ ಇನ್ನು ಅವರು ಮರಳಿ ಬಾರದಿದ್ದರೆ ಅಂತಹವರಿಗೆ ಭಾರತದಲ್ಲಿ ಇರುವ ಆಸ್ತಿಯನ್ನು ಸರಕಾರ ಅಟ್ಯಾಚ್ ಮಾಡಿಕೊಳ್ಳುತ್ತದೆ.
ಆರಂಭದಲ್ಲಿ ಮೂರು ಸಲ ಅಂತಹ ಎನ್ಆರ್ಐಗಳಿಗೆ ಕೇಂದ್ರ ನೋಟೀಸ್ ಕಳುಸಲಿದೆ. ಅದಕ್ಕೆ ಪ್ರತಿಕ್ರಿಯಿಸದಿದ್ದರೆ ಆ ಎನ್ಆರ್ಐ ಬಾರದೆ ತಪ್ಪಿಸಿಕೊಂಡು ಓಡಾಡುತ್ತಿದ್ದಾನೆಂದು ಭಾವಿಸಿ ಆತನ ಮೇಲೆ ಪ್ರಕರಣ ದಾಖಲಿಸುತ್ತಾರೆ. ಅಷ್ಟೇ ಅಲ್ಲ, ಅವರಿಗೆ ಭಾರತದಲ್ಲಿ ಇರುವ ಆಸ್ತಿಗಳನ್ನು ಅಟ್ಯಾಚ್ ಮಾಡಿ ಸ್ವಾಧೀನ ಪಡಿಸಿಕೊಳ್ಳುತ್ತಾರೆ.
ಮೇಲೆ ತಿಳಿಸಿದ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಿದ್ದಾರೆ. ಇದರ ಬಗ್ಗೆ ಈಗಾಗಲೇ ಕೇಂದ್ರ ಮಹಿಳಾ ಶಿಶು ಸಂರಕ್ಷಣಾ ಇಲಾಖೆ ಸಚಿವೆ ಮೇನಕಾ ಗಾಂಧಿ ನೇತೃತ್ವದಲ್ಲಿ ಜಾರಿಗೆ ತರುವ ಕೆಲಸಗಳು ನಡೆಯುತ್ತಿವೆ. ಶೀಘ್ರದಲ್ಲೇ ಈ ಕಾನೂನು ಜಾರಿಗೆ ಬರಲಿದೆ. ಇದು ಜಾರಿಗೆ ಬಂದರೆ ಆಗ ಎನ್ಆರ್ಐಗಳು ಸುಳಿಗೆ ಸಿಲುಕಿ ತೊಂದರೆ ಅನುಭವಿಸುತ್ತಿರುವ ಮಹಿಳೆಯರಿಗೆ ಸಹಕಾರಿಯಾಗಲಿದೆ.
ದೇಶದಲ್ಲಿ ಈಗಾಗಲೆ ಮಹಿಳೆಯರನ್ನು ಬಿಟ್ಟುಬಿಟ್ಟ ಅಂತಹ ಎನ್ಆರ್ಐ ಪ್ರಕರಣಗಳು 3328ರವೆಗೂ ಇವೆ. ಈ ಹಿನ್ನೆಲೆಯಲ್ಲಿ ಈ ಕಾನೂನು ಜಾರಿಗೆ ಬಂದರೆ ಆಗ ಅಂತಹ ಮಹಿಳೆಯರಿಗೆ ಸಾಕಷ್ಟು ಸಹಕಾರಿಯಾಗಲಿದೆ ಎಂದು ಸರಕಾರ ಭಾವಿಸುತ್ತಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….
ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.