News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

“ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

497

ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ.  ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು  ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ  ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.

ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ.  ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು  ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ! 

ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.

ಚಾಚಾ ಶಿಕಾಗೋರವರು ಮಹೇಂದ್ರ ಸಿಂಗ್  ಧೋನಿಯ ಅಪ್ಪಟ ಅಭಿಮಾನಿ :-

ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.

ಅಷ್ಟಕ್ಕೂ, ಇವರಿಗೆ ಭಾರತದ ತಂಡದ ಮೇಲೇಕೆ ಪ್ರೀತಿ ???

ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.

ಇವರು ಭಾರತ-ಪಾಕಿಸ್ತಾನದ ಯಾವ ಮ್ಯಾಚ್ ನೋಡದೇ ಬಿಟ್ಟಿಲ್ಲ :-

2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.

ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ  ನಮ್ಮ  ಧನ್ಯವಾದಗಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

    ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

  • ಆಧ್ಯಾತ್ಮ

    ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

    ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • ಗ್ಯಾಜೆಟ್

    ವಾಟ್ಸಾಪ್ ಮೂಲಕ ಅವಿವಾಹಿತರು ತಮ್ಮ ಬಾಳಸಂಗಾತಿ ಆಯ್ಕೆ ಮಾಡಿಕೊಳ್ಳಬಹುದು ..!ತಿಳಿಯಲು ಈ ಲೇಖನ ಓದಿ..

    ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.

  • ಸುದ್ದಿ

    ಎನ್​ಆರ್​ಸಿ ಪಟ್ಟಿಯಿಂದ 19.06 ಲಕ್ಷ ಜನ ಹೊರಕ್ಕೆ ಇವರೆಲ್ಲರ ಪರಿಸ್ಥಿತಿ ಏನು, ಇದನ್ನೊಮ್ಮೆ ಓದಿ..?

    ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್​ಆರ್​ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….