ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.
ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ. ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ! 
ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.
ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.
ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.
2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.
ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ ನಮ್ಮ ಧನ್ಯವಾದಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…
ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.