ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.
ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ. ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ! 
ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.
ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.
ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.
2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.
ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ ನಮ್ಮ ಧನ್ಯವಾದಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…
ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…