News

ದಿನಕ್ಕೊಂದು ನೀತಿ ಕಥೆ

ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

2141

ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

ಒಂದು ದಿನ ಆ ಮೊಲ ತಾಳೆಯ ಮರದ ನೆರಳಿನಲ್ಲಿ ಮಲಗಿತ್ತು. ಒಂದು ಕ್ಷಣ ಅದಕ್ಕೆ ಅಕಸ್ಮಾತ್ ಈ ಭೂಮಿಯೇ ತಲೆಕೆಳಗಾದರೇನುಗತಿ? ಎಂಬ ಯೋಚನೆ ಬಂತು. ಅದೇ ಸಮಯದಲ್ಲಿ ಒಂದು ಬೇಲದ ಹಣ್ಣು ತೊಟ್ಟು ಕಳಚಿ ತಾಳೆಯ ಗರಿಯ ಮೇಲೆ ಬಿದ್ದು ಶಬ್ದವಾಯಿತು. ಅದನ್ನು ಕೇಳಿ ಮೊಲ ಭೂಮಿ ತಲೆಕೆಳಗಾಗುತ್ತಿದೆ ಎಂದೇ ಬಾವಿಸಿ ಬೀತಿಯಿಂದ ಓಡತೊಡಗಿತು.

ವಿಪರೀತ ಭಯದಿಂದ ಓಡುತ್ತಿರುವ ಅದನ್ನು ದಾರಿಯಲ್ಲಿ ಇನ್ನೊಂದು ಮೊಲ ಕಂಡು, ‘’ಏಕೆ ಹೀಗೆ ಓಡುತ್ತಿರುವೆ? ಏನಾಯಿತು?’’ ಎಂದು ಕೇಳಿತು.

‘’ಅಯ್ಯೋ, ಅದನ್ನು ಏನೆಂದು ಹೇಳಲಿ? ಭೂಮಿ ತಲೆಕೆಳಗಾಗುತ್ತಿದೆ‘’ ಎಂದು ಅದು ಓಡುತ್ತಲೇ ಇತ್ತು. ಆ ಇನ್ನೊಂದು ಮೊಲವು ಭಯಬೀತಿಯಿಂದ ಅದರ ಹಿಂದೆ ಓಡತೊಡಗಿತು. ಅವೆರಡನ್ನೂ ನೋಡಿ ಇನ್ನೊಂದು ಮತ್ತೊಂದು, ಹೀಗೆ ಸಾವಿರ ಮೊಲಗಳ ಹಿಂಡೇ ಓಡತೊಡಗಿತು.

ಅಷ್ಟೇ ಅಲ್ಲದೆ ಅಷ್ಟು ಮೊಲಗಳ ಗಾಬರಿಯಿಂದ ಹಾಗೆ ಓಡುತ್ತಿರುವುದನ್ನು ಕಂಡು ಭೂಮಿ ತಲೆಕೆಳಗಾಗುವ ಆಪತ್ತು ಬಂದಿದೆಯೆಂದು ತಿಳಿದು ಭಯದಿಂದ ಒಂದು ಹಂದಿ, ಹಸು, ಎಮ್ಮೆ ಮತ್ತು ಹುಲಿ, ಸಿಂಹ, ಆನೆ ಇತ್ಯಾದಿ ಪ್ರಾಣಿಗಳೂ ಓಡತೊಡಗಿದವು ಹಲವು ಪ್ರಾಣಿಗಳ ಸಾಲುಗಳ ಸೇರಿ ಒಂದು ಯೋಜನದಷ್ಟು ಉದ್ದವಾಯಿತು.

ದಾರಿಯಲ್ಲಿ ಸಿಂಹವಾಗಿದ್ದ ಬೋದಿಸುತ್ತ ಈ ಮೆರವಣಿಗೆಯನ್ನು ಕಂಡು ‘’ಎಲ್ಲ ಏಕೆ ಹೀಗೆ ಓಡುತ್ತಿರುವಿರಿ?’’ ಎಂದು ಕೇಳಿದ. ಅವೆಲ್ಲ ‘ಭೂಮಿ ತಲೆಕೆಳಗಾಗುವುದು ಎಂದಾದರೂ ಸಾದ್ಯವೇ? ಇವು ಬೇರೆ ಏನನ್ನೋ ಕಂಡು ತಪ್ಪು ತಿಳಿದು ಹೀಗೆ ಓಡುತ್ತಿರಬೇಕು. ಹೀಗೆ ಬಿಟ್ಟರೆ ಎಲ್ಲ ಪ್ರಾಣಿಗಳು ಅನ್ಯಾಯವಾಗಿ ನಾಶವಾಗಿಬಿಡುತ್ತವೆ. ಅದನ್ನು ತಪ್ಪಿಸಬೇಕು’ ಎಂದು ಬೋದಿಸತ್ವ ಯೋಚಿಸಿದ.

ಕೂಡಲೇ ಸಿಂಹ ವೇಗವಾಗಿ ಓಡಿ ಬಂದು ಎಲ್ಲ ಪ್ರಾಣಿಗಳು ಅಡ್ಡವಾಗಿ ನಿಂತು ಮೂರೂ ಸಲ ಸಿಂಹನಾದ ಮಾಡಿತು. ಹೆದರಿದ ಪ್ರಾಣಿಗಳೆಲ್ಲ ನಿಂತವು. ‘’ಏಕೆ ಓಡುತ್ತಿರುವೆ?’’ಎಂದು ಅವನು ಕೇಳಿದ.

‘’ಭೂಮಿ ತಲೆಕೆಳಗಾಗುತ್ತಿದೆ.’’

‘’ಅದನ್ನು ನೋಡಿದವರಾರು?’’

‘’ಆನೆ’’

ಆನೆ ತನಗೆ ಗೊತ್ತಿಲ್ಲ, ಸಿಂಹಕ್ಕೆ ಗೊತ್ತು ಎಂದು ಹೇಳಿತು. ಸಿಂಹ ಹುಲಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು.  ಕಡೆಗೆ ಮೊಲಗಳ ಸರದಿ ಬಂತು. ಮೊಲಗಳು ತಮ್ಮ ಮುಂದೆ ಓಡಾಡುತಿದ್ದ ಮೊಲವನ್ನು ತೋರಿಸಿದೆವು.

‘’ಭೂಮಿ ತಲೆಕೆಳಗಾಗಿರುವದನ್ನು ನೋಡಿದೆಯಾ?’’ ಎಂದು ಸಿಂಹ ಮೊಲವನ್ನು ಕೇಳಿತು.

‘’ಹೌದು, ನಾನು ನೋಡಿದೆ’’ ಎಂದಿತು ಮೊಲ.

‘’ಎಲ್ಲಿ?’’

‘’ಸಮುದ್ರದಲ್ಲಿ ಹತ್ತಿರ ಬೇಲ ಮತ್ತು ತಾಳೆಯ ಮರಗಳ ತೋಪಿನಲ್ಲಿ. ಅಲ್ಲಿ ನಾನು ಬೇಲದ ಮರದ ಬುಡದಲ್ಲಿ ಮಲಗಿದ್ದೆ. ಒಂದು ವೇಳೆ ಭೂಮಿ ತಲೆಕೆಳಗಾದರೆ ಎಲ್ಲಿ ಹೋಗಲಿ? ಎಂದು ನಾನು ಯೋಚಿಸಿದ್ದೆ. ಆಗ ಭೂಮಿ ತಲೆಕೆಳಗಾಗುವ ಸದ್ದು ಕೇಳಿ ಬಂತು. ನಾನು ಓಡಿ ಬಂದೆ.’’

ನಿಜ ಸಂಗತಿಯನ್ನು ತಿಳಿಯಬೇಕೆಂದು ಸಿಂಹ ಇತರ ಪ್ರಾಣಿಗಳನ್ನು ಕುರಿತು ‘’ಈ ಮೊಲ ಹೇಳಿದ ಮಾತು ನಿಜವೇ ಎಂಬುದನ್ನು ನಾನು ತಿಳಿದು ಬರುವವರೆಗೆ ನೀವೆಲ್ಲ ಇಲ್ಲಿಯೇ ಇರಿ‘’ ಎಂದು ಹೇಳಿ ಮೊಲವನ್ನು ಕರೆದು ತನ್ನ ಬೆನ್ನ ಮೇಲೆ ಕೂಡಿಸಿಕೊಂಡು ಹೊರಟಿತು.

ಅವೆರೆಡೂ ಬಹುಬೇಗ ಆ ತೋಪಿನ ಬಳಿಗೆ ಬಂದವು. ಮೊಲವನ್ನು ಇಳಿಸಿ ‘’ಆ ಸ್ಥಳವನ್ನು ತೋರಿಸಿ’’ ಎಂದು ಸಿಂಹ ಹೇಳಿತು. ಅದು ಹೆದುರುತ್ತಲೇ ಹೋಗಿ, ‘’ಇದೇ ಶಬ್ದವಾದ ಸ್ಥಳ’’  ಎಂದು ತೋರಿಸಿತು.

ಸಿಂಹ ಆ ಸ್ಥಳಕ್ಕೆ ಹೋಗಿ ಪರಿಶೀಲಿಸಿತು. ಅಲ್ಲೇ ತಾಳೆಗರಿಯ ಮೇಲೆ ಬಿದ್ದಿದ್ದ ಬೇಲದ ಹಣ್ಣನ್ನು ನೋಡಿ, ಇದು ಭೂಮಿ ತಲೆಕೆಳಗಾಗುತ್ತಿರುವ ಶಬ್ದವಲ್ಲ. ಬೇಲದ ಹಣ್ಣು ತಾಳೆಯ ಗರಿಯ ಮೇಲೆ ಬಿದ್ದ ಶಬ್ದವನ್ನು ಕೇಳಿ ತಪ್ಪು ತಿಳಿದುಕೊಂಡಿದೆಯೆಂದು ಅರ್ಥಮಾಡಿಕೊಂಡಿತು.

ಅನಂತರ ಮತ್ತೆ ಮೊಲವನ್ನು ಬೆನ್ನ ಮೇಲೆ ಕೂಡಿಸಿಕೊಂಡು ಸಿಂಹ ಆ ಪ್ರಾಣಿಗಳಿದ್ದ ಸ್ಥಳಕ್ಕೆ ಬಂದು, ನಿಜ ಸಂಗತಿಯನ್ನ್ಜು ತಿಳಿಸಿ ಪ್ರಾಣಿಗಳಿಗೆ ಧೈರ್ಯ ಹೇಳಿತು. ತಮ್ಮ ಪ್ರಾಣವುಳಿಸಿದ ಸಿಂಹವನ್ನು ಎಲ್ಲ ಪ್ರಾಣಿಗಳೂ ಕೊಂಡಾಡಿದವು.

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸಿನಿಮಾ

    ರಜನಿಕಾಂತ್ ಅಭಿಮಾನಿಗಳು ಅರೆಸ್ಟ್ !!!

    ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾರ್ಟ್ ಅಟ್ಯಾಕ್ ಆದ 5 ನಿಮಿಷದ ಒಳಗಡೆ ಈ ಕೆಲಸ ಮಾಡಿದ್ರೆ ಆ ವ್ಯಕ್ತಿ ಬದುಕುವ ಸಾಧ್ಯತೆ ಹೆಚ್ಚು…

    ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…

  • ಸುದ್ದಿ

    ವಿಸ್ಮಯಕಾರಿ ಘಟನೆಗಳಿಗೆ ಸಾಕ್ಷಿಯಾಗಿರುವ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾಗಿರುವ ಬೆಟ್ಟದಲ್ಲಿ ಈ ಬಾರಿ ಮತ್ತೊಂದು ಪವಾಡ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…