News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದಿನಕ್ಕೊಂದು ನೀತಿ ಕಥೆ

ಭೂಮಿ ಮೇಲೆ ಯಾರು ಹೆಚ್ಚು ಸುಖೀ?ರಾಜನಿಗೆ ಕಾಡಿದ ಈ ಪ್ರಶ್ನೆಗೆ ಉತ್ತರ ಕೊಟ್ಟವರು ಯಾರು ಗೊತ್ತಾ..?ತಿಳಿಯಲು ಈ ಕಥೆ ಓದಿ…

506

ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ. ರಾಜ್ಯದ ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ, ಅಲ್ಲಿನ ಜನರನ್ನು ಮಾತಾಡಿಸುತ್ತಾ, ಅವರ ಕಷ್ಟ-ಸುಖಗಳನ್ನು, ಆಲಿಸುತ್ತಾ, ಸಮಾಧಾನವನ್ನೋ, ಪರಿಹಾರವನ್ನೋ ಹೇಳುತ್ತಾ ನಡೆದ.

ಒಂದು ರಾತ್ರಿ ದೂರದ ಹಳ್ಳಿಯೊಂದರ ಜಗಲಿಯಲ್ಲಿ ಕುಳಿತು ಆನಂದದಿಂದ ಹಾಡುತ್ತಿದ್ದ ರೈತನೊಬ್ಬ ಕಾಣಿಸಿದ. ಮಾರುವೇಷದಲ್ಲಿದ್ದ ರಾಜನಿಗೆ ಆತನನ್ನು ಕಂಡು ಅಚ್ಚರಿಯಾಯಿತು. ಆತನ ಕುಶಲ ವಿಚಾರಿಸಿ, ಬಹಳ ಸಂತೋಷದಿಂದ ಹಾಡುತ್ತಿರುವ ಕಾರಣ ಕೇಳಿದ. ಅದಕ್ಕೆ ರೈತನ ಉತ್ತರ ಹೀಗಿತ್ತು; “ದಿನವೂ ಕಷ್ಟಪಟ್ಟು ಹೊಲದಲ್ಲಿ ದುಡಿಯುತ್ತೇನೆ. ಭಗವಂತನ ದಯೆಯಿಂದ ಸಿಕ್ಕ ಫ‌ಲದಲ್ಲಿ ಅರ್ಧ ಭಾಗವನ್ನು ಮಾತ್ರ ನನ್ನ ದೈನಂದಿನ ಜೀವನದ ನಿರ್ವಹಣೆಗೆ ಖರ್ಚು ಮಾಡುತ್ತೇನೆ. ಉಳಿದ ಅರ್ಧಭಾಗದಲ್ಲಿ ಕಾಲು ಭಾಗವನ್ನು ಸಾಲ ತೀರಿಸಲು, ಇನ್ನುಳಿದ ಕಾಲು ಭಾಗವನ್ನು ಸಾಲ ಕೊಡುವುದಕ್ಕೂ ವ್ಯಯಿಸುತ್ತೇನೆ. ಹೀಗಾಗಿ ನನ್ನ ಆದಾಯದ ಮಿತಿಯಲ್ಲಿ ನಾನು ಜೀವಿಸುತ್ತಾ ನನ್ನ ಕುಟುಂಬದವರೊಟ್ಟಿಗೆ ಸುಖ- ಸಂತೋಷದಿಂದಿದ್ದೇನೆ’ ಎಂದ.

ರೈತನ ಈ ಮಾತು ರಾಜನಿಗೆ ಒಗಟಾಗಿ ಕಂಡಿತು. “ಸಾಲ ಕೊಡುವುದು, ಸಾಲ ತೀರಿಸುವುದು ಹೀಗಂದರೇನು? ಕೊಂಚ ಬಿಡಿಸಿ ಹೇಳು ಮಹರಾಯ’ ಎಂದ. ರಾಜನ ಮಾತಿಗೆ ನಗುತ್ತ ರೈತನೆಂದ; “ಸಾಲ ಕೊಡುವುದೆಂದರೆ, ನನ್ನ ದುಡಿಮೆಯ ಕಾಲು ಭಾಗವನ್ನು ನಾನು ನನ್ನ ತಂದೆ- ತಾಯಿಯರನ್ನು ಸಾಕಲು ವ್ಯಯಿಸುತ್ತೇನೆ. ಕಾರಣ ಅವರು ನನ್ನನ್ನು ತಮ್ಮ ಕಷ್ಟದಲ್ಲೂ ನನ್ನನ್ನು ಸಾಕಿ- ಸಲಹಿ ದೊಡ್ಡವನನ್ನಾಗಿ ಮಾಡಿ¨ªಾರೆ. ಅವರ ಋಣ ನನ್ನ ಮೇಲಿದೆ. ಹೀಗಾಗಿ ವೃದ್ಧರಾದ ಅವರನ್ನು ನೋಡಿಕೊಳ್ಳುವುದು ನನ್ನ ಹೊಣೆ. ಇದು ನಾನು ಪಡೆದ ಸಾಲ ತೀರಿಸುವ ರೀತಿ. ಇನ್ನು ನಿಮ್ಮ ಅನುಮಾನ ಸಾಲ ಕೊಡುವ ಕುರಿತದ್ದು; ಅದೂ ಹೀಗೆಯೇ, ನಾನು ನನ್ನ ಮಕ್ಕಳನ್ನು ಸಾಕಿ-ಸಲಹಿ, ಸಶಕ್ತರನ್ನಾಗಿ ಮಾಡುತ್ತಿದ್ದೇನೆ. ಇದು ಒಂದು ರೀತಿ ಸಾಲ ಕೊಟ್ಟಂತೆ; ಅಂದರೆ ಅವರು ಮುಂದೆ ನನಗೆ ಮತ್ತು ನನ್ನ ಹೆಂಡತಿಗೆ ವಯಸ್ಸಾದಾಗ ದಿಕ್ಕಾಗುತ್ತಾರೆ. ಇನ್ನು ಉಳಿದ ಅರ್ಧಭಾಗದಲ್ಲಿ ನನ್ನ ದೈನಂದಿನ ಜೀವನ ಹೇಗೋ ಸಾಗುತ್ತದೆ.

ಹೀಗಾಗಿ ನನ್ನ ನೆಮ್ಮದಿಯ ಜೀವನಕ್ಕೆ ಭಂಗವಿಲ್ಲ’ ಎಂದು ನಗೆ ಬೀರಿದ. ರೈತನ ಜೀವನೋತ್ಸಾಹದ ಮಾತು ರಾಜನಲ್ಲಿ ಹೊಸ ಅರಿವನ್ನೇ ಹುಟ್ಟಿಸಿತು. ಸರಳ ಜೀವನ ಹಾಗೂ ಇದ್ದುದರ ತೃಪ್ತಿ ಹೊಂದುವ ಗುಣ ಇವೇ ಬದುಕಿನ ಸುಖ-ಸಂತೋಷದ ಮೂಲ ಎನ್ನುವ ಸತ್ಯ ಗೊತ್ತಾಯಿತು. ಆಗಲೇ ರಾಜನನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರವೂ ದೊರಕಿತು.

ಮೂಲ:- 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ಆರೋಗ್ಯ

    ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.

  • ವ್ಯಕ್ತಿ ವಿಶೇಷಣ

    ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಮಂಗಳವೊ ಅಮಂಗಳವೋ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…