News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದಿನಕ್ಕೊಂದು ನೀತಿ ಕಥೆ

ಭೂಮಿ ಮೇಲೆ ಯಾರು ಹೆಚ್ಚು ಸುಖೀ?ರಾಜನಿಗೆ ಕಾಡಿದ ಈ ಪ್ರಶ್ನೆಗೆ ಉತ್ತರ ಕೊಟ್ಟವರು ಯಾರು ಗೊತ್ತಾ..?ತಿಳಿಯಲು ಈ ಕಥೆ ಓದಿ…

506

ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ. ರಾಜ್ಯದ ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ, ಅಲ್ಲಿನ ಜನರನ್ನು ಮಾತಾಡಿಸುತ್ತಾ, ಅವರ ಕಷ್ಟ-ಸುಖಗಳನ್ನು, ಆಲಿಸುತ್ತಾ, ಸಮಾಧಾನವನ್ನೋ, ಪರಿಹಾರವನ್ನೋ ಹೇಳುತ್ತಾ ನಡೆದ.

ಒಂದು ರಾತ್ರಿ ದೂರದ ಹಳ್ಳಿಯೊಂದರ ಜಗಲಿಯಲ್ಲಿ ಕುಳಿತು ಆನಂದದಿಂದ ಹಾಡುತ್ತಿದ್ದ ರೈತನೊಬ್ಬ ಕಾಣಿಸಿದ. ಮಾರುವೇಷದಲ್ಲಿದ್ದ ರಾಜನಿಗೆ ಆತನನ್ನು ಕಂಡು ಅಚ್ಚರಿಯಾಯಿತು. ಆತನ ಕುಶಲ ವಿಚಾರಿಸಿ, ಬಹಳ ಸಂತೋಷದಿಂದ ಹಾಡುತ್ತಿರುವ ಕಾರಣ ಕೇಳಿದ. ಅದಕ್ಕೆ ರೈತನ ಉತ್ತರ ಹೀಗಿತ್ತು; “ದಿನವೂ ಕಷ್ಟಪಟ್ಟು ಹೊಲದಲ್ಲಿ ದುಡಿಯುತ್ತೇನೆ. ಭಗವಂತನ ದಯೆಯಿಂದ ಸಿಕ್ಕ ಫ‌ಲದಲ್ಲಿ ಅರ್ಧ ಭಾಗವನ್ನು ಮಾತ್ರ ನನ್ನ ದೈನಂದಿನ ಜೀವನದ ನಿರ್ವಹಣೆಗೆ ಖರ್ಚು ಮಾಡುತ್ತೇನೆ. ಉಳಿದ ಅರ್ಧಭಾಗದಲ್ಲಿ ಕಾಲು ಭಾಗವನ್ನು ಸಾಲ ತೀರಿಸಲು, ಇನ್ನುಳಿದ ಕಾಲು ಭಾಗವನ್ನು ಸಾಲ ಕೊಡುವುದಕ್ಕೂ ವ್ಯಯಿಸುತ್ತೇನೆ. ಹೀಗಾಗಿ ನನ್ನ ಆದಾಯದ ಮಿತಿಯಲ್ಲಿ ನಾನು ಜೀವಿಸುತ್ತಾ ನನ್ನ ಕುಟುಂಬದವರೊಟ್ಟಿಗೆ ಸುಖ- ಸಂತೋಷದಿಂದಿದ್ದೇನೆ’ ಎಂದ.

ರೈತನ ಈ ಮಾತು ರಾಜನಿಗೆ ಒಗಟಾಗಿ ಕಂಡಿತು. “ಸಾಲ ಕೊಡುವುದು, ಸಾಲ ತೀರಿಸುವುದು ಹೀಗಂದರೇನು? ಕೊಂಚ ಬಿಡಿಸಿ ಹೇಳು ಮಹರಾಯ’ ಎಂದ. ರಾಜನ ಮಾತಿಗೆ ನಗುತ್ತ ರೈತನೆಂದ; “ಸಾಲ ಕೊಡುವುದೆಂದರೆ, ನನ್ನ ದುಡಿಮೆಯ ಕಾಲು ಭಾಗವನ್ನು ನಾನು ನನ್ನ ತಂದೆ- ತಾಯಿಯರನ್ನು ಸಾಕಲು ವ್ಯಯಿಸುತ್ತೇನೆ. ಕಾರಣ ಅವರು ನನ್ನನ್ನು ತಮ್ಮ ಕಷ್ಟದಲ್ಲೂ ನನ್ನನ್ನು ಸಾಕಿ- ಸಲಹಿ ದೊಡ್ಡವನನ್ನಾಗಿ ಮಾಡಿ¨ªಾರೆ. ಅವರ ಋಣ ನನ್ನ ಮೇಲಿದೆ. ಹೀಗಾಗಿ ವೃದ್ಧರಾದ ಅವರನ್ನು ನೋಡಿಕೊಳ್ಳುವುದು ನನ್ನ ಹೊಣೆ. ಇದು ನಾನು ಪಡೆದ ಸಾಲ ತೀರಿಸುವ ರೀತಿ. ಇನ್ನು ನಿಮ್ಮ ಅನುಮಾನ ಸಾಲ ಕೊಡುವ ಕುರಿತದ್ದು; ಅದೂ ಹೀಗೆಯೇ, ನಾನು ನನ್ನ ಮಕ್ಕಳನ್ನು ಸಾಕಿ-ಸಲಹಿ, ಸಶಕ್ತರನ್ನಾಗಿ ಮಾಡುತ್ತಿದ್ದೇನೆ. ಇದು ಒಂದು ರೀತಿ ಸಾಲ ಕೊಟ್ಟಂತೆ; ಅಂದರೆ ಅವರು ಮುಂದೆ ನನಗೆ ಮತ್ತು ನನ್ನ ಹೆಂಡತಿಗೆ ವಯಸ್ಸಾದಾಗ ದಿಕ್ಕಾಗುತ್ತಾರೆ. ಇನ್ನು ಉಳಿದ ಅರ್ಧಭಾಗದಲ್ಲಿ ನನ್ನ ದೈನಂದಿನ ಜೀವನ ಹೇಗೋ ಸಾಗುತ್ತದೆ.

ಹೀಗಾಗಿ ನನ್ನ ನೆಮ್ಮದಿಯ ಜೀವನಕ್ಕೆ ಭಂಗವಿಲ್ಲ’ ಎಂದು ನಗೆ ಬೀರಿದ. ರೈತನ ಜೀವನೋತ್ಸಾಹದ ಮಾತು ರಾಜನಲ್ಲಿ ಹೊಸ ಅರಿವನ್ನೇ ಹುಟ್ಟಿಸಿತು. ಸರಳ ಜೀವನ ಹಾಗೂ ಇದ್ದುದರ ತೃಪ್ತಿ ಹೊಂದುವ ಗುಣ ಇವೇ ಬದುಕಿನ ಸುಖ-ಸಂತೋಷದ ಮೂಲ ಎನ್ನುವ ಸತ್ಯ ಗೊತ್ತಾಯಿತು. ಆಗಲೇ ರಾಜನನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರವೂ ದೊರಕಿತು.

ಮೂಲ:- 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • ಸುದ್ದಿ

    ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು- ಸಚಿವರಿಗೆ ತಿರುಗೇಟು ಹರ್ಷಿಕಾ ಪೂನಚ್ಚ….!

    ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್‍ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಸಿನಿಮಾ

    ರಿತೇಶ್‌ಗೆ ಐಶಾರಾಮಿ ಕಾರ್‌ ಬರ್ತಡೇ ಗಿಫ್ಟ್ ನೀಡಿದ ಪತ್ನಿ,ಕಾರಿನ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಇದನ್ನು ಓದಿ..

    ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….

  • ಸುದ್ದಿ

    ಪ್ಲಾಸ್ಟಿಕ್ ಬಳಕೆಯನ್ನು ನಿಷೇದ ಮಾಡಿ, ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು – ಡಾ. ಕೆ. ಸುಧಾಕರ್ ಹೇಳಿಕೆ …!

    ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.  ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಬ್ರಿಗೇಡ್…