ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ. ರಾಜ್ಯದ ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ, ಅಲ್ಲಿನ ಜನರನ್ನು ಮಾತಾಡಿಸುತ್ತಾ, ಅವರ ಕಷ್ಟ-ಸುಖಗಳನ್ನು, ಆಲಿಸುತ್ತಾ, ಸಮಾಧಾನವನ್ನೋ, ಪರಿಹಾರವನ್ನೋ ಹೇಳುತ್ತಾ ನಡೆದ.
ಒಂದು ರಾತ್ರಿ ದೂರದ ಹಳ್ಳಿಯೊಂದರ ಜಗಲಿಯಲ್ಲಿ ಕುಳಿತು ಆನಂದದಿಂದ ಹಾಡುತ್ತಿದ್ದ ರೈತನೊಬ್ಬ ಕಾಣಿಸಿದ. ಮಾರುವೇಷದಲ್ಲಿದ್ದ ರಾಜನಿಗೆ ಆತನನ್ನು ಕಂಡು ಅಚ್ಚರಿಯಾಯಿತು. ಆತನ ಕುಶಲ ವಿಚಾರಿಸಿ, ಬಹಳ ಸಂತೋಷದಿಂದ ಹಾಡುತ್ತಿರುವ ಕಾರಣ ಕೇಳಿದ. ಅದಕ್ಕೆ ರೈತನ ಉತ್ತರ ಹೀಗಿತ್ತು; “ದಿನವೂ ಕಷ್ಟಪಟ್ಟು ಹೊಲದಲ್ಲಿ ದುಡಿಯುತ್ತೇನೆ. ಭಗವಂತನ ದಯೆಯಿಂದ ಸಿಕ್ಕ ಫಲದಲ್ಲಿ ಅರ್ಧ ಭಾಗವನ್ನು ಮಾತ್ರ ನನ್ನ ದೈನಂದಿನ ಜೀವನದ ನಿರ್ವಹಣೆಗೆ ಖರ್ಚು ಮಾಡುತ್ತೇನೆ. ಉಳಿದ ಅರ್ಧಭಾಗದಲ್ಲಿ ಕಾಲು ಭಾಗವನ್ನು ಸಾಲ ತೀರಿಸಲು, ಇನ್ನುಳಿದ ಕಾಲು ಭಾಗವನ್ನು ಸಾಲ ಕೊಡುವುದಕ್ಕೂ ವ್ಯಯಿಸುತ್ತೇನೆ. ಹೀಗಾಗಿ ನನ್ನ ಆದಾಯದ ಮಿತಿಯಲ್ಲಿ ನಾನು ಜೀವಿಸುತ್ತಾ ನನ್ನ ಕುಟುಂಬದವರೊಟ್ಟಿಗೆ ಸುಖ- ಸಂತೋಷದಿಂದಿದ್ದೇನೆ’ ಎಂದ.
ರೈತನ ಈ ಮಾತು ರಾಜನಿಗೆ ಒಗಟಾಗಿ ಕಂಡಿತು. “ಸಾಲ ಕೊಡುವುದು, ಸಾಲ ತೀರಿಸುವುದು ಹೀಗಂದರೇನು? ಕೊಂಚ ಬಿಡಿಸಿ ಹೇಳು ಮಹರಾಯ’ ಎಂದ. ರಾಜನ ಮಾತಿಗೆ ನಗುತ್ತ ರೈತನೆಂದ; “ಸಾಲ ಕೊಡುವುದೆಂದರೆ, ನನ್ನ ದುಡಿಮೆಯ ಕಾಲು ಭಾಗವನ್ನು ನಾನು ನನ್ನ ತಂದೆ- ತಾಯಿಯರನ್ನು ಸಾಕಲು ವ್ಯಯಿಸುತ್ತೇನೆ. ಕಾರಣ ಅವರು ನನ್ನನ್ನು ತಮ್ಮ ಕಷ್ಟದಲ್ಲೂ ನನ್ನನ್ನು ಸಾಕಿ- ಸಲಹಿ ದೊಡ್ಡವನನ್ನಾಗಿ ಮಾಡಿ¨ªಾರೆ. ಅವರ ಋಣ ನನ್ನ ಮೇಲಿದೆ. ಹೀಗಾಗಿ ವೃದ್ಧರಾದ ಅವರನ್ನು ನೋಡಿಕೊಳ್ಳುವುದು ನನ್ನ ಹೊಣೆ. ಇದು ನಾನು ಪಡೆದ ಸಾಲ ತೀರಿಸುವ ರೀತಿ. ಇನ್ನು ನಿಮ್ಮ ಅನುಮಾನ ಸಾಲ ಕೊಡುವ ಕುರಿತದ್ದು; ಅದೂ ಹೀಗೆಯೇ, ನಾನು ನನ್ನ ಮಕ್ಕಳನ್ನು ಸಾಕಿ-ಸಲಹಿ, ಸಶಕ್ತರನ್ನಾಗಿ ಮಾಡುತ್ತಿದ್ದೇನೆ. ಇದು ಒಂದು ರೀತಿ ಸಾಲ ಕೊಟ್ಟಂತೆ; ಅಂದರೆ ಅವರು ಮುಂದೆ ನನಗೆ ಮತ್ತು ನನ್ನ ಹೆಂಡತಿಗೆ ವಯಸ್ಸಾದಾಗ ದಿಕ್ಕಾಗುತ್ತಾರೆ. ಇನ್ನು ಉಳಿದ ಅರ್ಧಭಾಗದಲ್ಲಿ ನನ್ನ ದೈನಂದಿನ ಜೀವನ ಹೇಗೋ ಸಾಗುತ್ತದೆ.
ಹೀಗಾಗಿ ನನ್ನ ನೆಮ್ಮದಿಯ ಜೀವನಕ್ಕೆ ಭಂಗವಿಲ್ಲ’ ಎಂದು ನಗೆ ಬೀರಿದ. ರೈತನ ಜೀವನೋತ್ಸಾಹದ ಮಾತು ರಾಜನಲ್ಲಿ ಹೊಸ ಅರಿವನ್ನೇ ಹುಟ್ಟಿಸಿತು. ಸರಳ ಜೀವನ ಹಾಗೂ ಇದ್ದುದರ ತೃಪ್ತಿ ಹೊಂದುವ ಗುಣ ಇವೇ ಬದುಕಿನ ಸುಖ-ಸಂತೋಷದ ಮೂಲ ಎನ್ನುವ ಸತ್ಯ ಗೊತ್ತಾಯಿತು. ಆಗಲೇ ರಾಜನನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರವೂ ದೊರಕಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….
ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…