News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದಿನಕ್ಕೊಂದು ನೀತಿ ಕಥೆ

ಭೂಮಿ ಮೇಲೆ ಯಾರು ಹೆಚ್ಚು ಸುಖೀ?ರಾಜನಿಗೆ ಕಾಡಿದ ಈ ಪ್ರಶ್ನೆಗೆ ಉತ್ತರ ಕೊಟ್ಟವರು ಯಾರು ಗೊತ್ತಾ..?ತಿಳಿಯಲು ಈ ಕಥೆ ಓದಿ…

507

ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ. ರಾಜ್ಯದ ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ, ಅಲ್ಲಿನ ಜನರನ್ನು ಮಾತಾಡಿಸುತ್ತಾ, ಅವರ ಕಷ್ಟ-ಸುಖಗಳನ್ನು, ಆಲಿಸುತ್ತಾ, ಸಮಾಧಾನವನ್ನೋ, ಪರಿಹಾರವನ್ನೋ ಹೇಳುತ್ತಾ ನಡೆದ.

ಒಂದು ರಾತ್ರಿ ದೂರದ ಹಳ್ಳಿಯೊಂದರ ಜಗಲಿಯಲ್ಲಿ ಕುಳಿತು ಆನಂದದಿಂದ ಹಾಡುತ್ತಿದ್ದ ರೈತನೊಬ್ಬ ಕಾಣಿಸಿದ. ಮಾರುವೇಷದಲ್ಲಿದ್ದ ರಾಜನಿಗೆ ಆತನನ್ನು ಕಂಡು ಅಚ್ಚರಿಯಾಯಿತು. ಆತನ ಕುಶಲ ವಿಚಾರಿಸಿ, ಬಹಳ ಸಂತೋಷದಿಂದ ಹಾಡುತ್ತಿರುವ ಕಾರಣ ಕೇಳಿದ. ಅದಕ್ಕೆ ರೈತನ ಉತ್ತರ ಹೀಗಿತ್ತು; “ದಿನವೂ ಕಷ್ಟಪಟ್ಟು ಹೊಲದಲ್ಲಿ ದುಡಿಯುತ್ತೇನೆ. ಭಗವಂತನ ದಯೆಯಿಂದ ಸಿಕ್ಕ ಫ‌ಲದಲ್ಲಿ ಅರ್ಧ ಭಾಗವನ್ನು ಮಾತ್ರ ನನ್ನ ದೈನಂದಿನ ಜೀವನದ ನಿರ್ವಹಣೆಗೆ ಖರ್ಚು ಮಾಡುತ್ತೇನೆ. ಉಳಿದ ಅರ್ಧಭಾಗದಲ್ಲಿ ಕಾಲು ಭಾಗವನ್ನು ಸಾಲ ತೀರಿಸಲು, ಇನ್ನುಳಿದ ಕಾಲು ಭಾಗವನ್ನು ಸಾಲ ಕೊಡುವುದಕ್ಕೂ ವ್ಯಯಿಸುತ್ತೇನೆ. ಹೀಗಾಗಿ ನನ್ನ ಆದಾಯದ ಮಿತಿಯಲ್ಲಿ ನಾನು ಜೀವಿಸುತ್ತಾ ನನ್ನ ಕುಟುಂಬದವರೊಟ್ಟಿಗೆ ಸುಖ- ಸಂತೋಷದಿಂದಿದ್ದೇನೆ’ ಎಂದ.

ರೈತನ ಈ ಮಾತು ರಾಜನಿಗೆ ಒಗಟಾಗಿ ಕಂಡಿತು. “ಸಾಲ ಕೊಡುವುದು, ಸಾಲ ತೀರಿಸುವುದು ಹೀಗಂದರೇನು? ಕೊಂಚ ಬಿಡಿಸಿ ಹೇಳು ಮಹರಾಯ’ ಎಂದ. ರಾಜನ ಮಾತಿಗೆ ನಗುತ್ತ ರೈತನೆಂದ; “ಸಾಲ ಕೊಡುವುದೆಂದರೆ, ನನ್ನ ದುಡಿಮೆಯ ಕಾಲು ಭಾಗವನ್ನು ನಾನು ನನ್ನ ತಂದೆ- ತಾಯಿಯರನ್ನು ಸಾಕಲು ವ್ಯಯಿಸುತ್ತೇನೆ. ಕಾರಣ ಅವರು ನನ್ನನ್ನು ತಮ್ಮ ಕಷ್ಟದಲ್ಲೂ ನನ್ನನ್ನು ಸಾಕಿ- ಸಲಹಿ ದೊಡ್ಡವನನ್ನಾಗಿ ಮಾಡಿ¨ªಾರೆ. ಅವರ ಋಣ ನನ್ನ ಮೇಲಿದೆ. ಹೀಗಾಗಿ ವೃದ್ಧರಾದ ಅವರನ್ನು ನೋಡಿಕೊಳ್ಳುವುದು ನನ್ನ ಹೊಣೆ. ಇದು ನಾನು ಪಡೆದ ಸಾಲ ತೀರಿಸುವ ರೀತಿ. ಇನ್ನು ನಿಮ್ಮ ಅನುಮಾನ ಸಾಲ ಕೊಡುವ ಕುರಿತದ್ದು; ಅದೂ ಹೀಗೆಯೇ, ನಾನು ನನ್ನ ಮಕ್ಕಳನ್ನು ಸಾಕಿ-ಸಲಹಿ, ಸಶಕ್ತರನ್ನಾಗಿ ಮಾಡುತ್ತಿದ್ದೇನೆ. ಇದು ಒಂದು ರೀತಿ ಸಾಲ ಕೊಟ್ಟಂತೆ; ಅಂದರೆ ಅವರು ಮುಂದೆ ನನಗೆ ಮತ್ತು ನನ್ನ ಹೆಂಡತಿಗೆ ವಯಸ್ಸಾದಾಗ ದಿಕ್ಕಾಗುತ್ತಾರೆ. ಇನ್ನು ಉಳಿದ ಅರ್ಧಭಾಗದಲ್ಲಿ ನನ್ನ ದೈನಂದಿನ ಜೀವನ ಹೇಗೋ ಸಾಗುತ್ತದೆ.

ಹೀಗಾಗಿ ನನ್ನ ನೆಮ್ಮದಿಯ ಜೀವನಕ್ಕೆ ಭಂಗವಿಲ್ಲ’ ಎಂದು ನಗೆ ಬೀರಿದ. ರೈತನ ಜೀವನೋತ್ಸಾಹದ ಮಾತು ರಾಜನಲ್ಲಿ ಹೊಸ ಅರಿವನ್ನೇ ಹುಟ್ಟಿಸಿತು. ಸರಳ ಜೀವನ ಹಾಗೂ ಇದ್ದುದರ ತೃಪ್ತಿ ಹೊಂದುವ ಗುಣ ಇವೇ ಬದುಕಿನ ಸುಖ-ಸಂತೋಷದ ಮೂಲ ಎನ್ನುವ ಸತ್ಯ ಗೊತ್ತಾಯಿತು. ಆಗಲೇ ರಾಜನನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರವೂ ದೊರಕಿತು.

ಮೂಲ:- 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ವಿಸ್ಮಯ ಜಗತ್ತು

    ಈ ನಗರಕ್ಕೆ ಬಂದವರಿಗೆ ಇಲ್ಲಿನ ಸರಕಾರ ನೀಡುತ್ತದೆ 38.7 ಲಕ್ಷ ರೂ.!ತಿಳಿಯಲು ಈ ಲೇಖನ ಓದಿ ..

    ಸ್ವಿಟ್ಜರ್‌ಲ್ಯಾಂಡ್‌ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

  • ದೇವರು-ಧರ್ಮ

    ಹೆಣ್ಣುಮಕ್ಕಳಿಗೆ ಮಾತ್ರ ಪ್ರವೇಶವಿರುವ,ಹೆಣ್ಣುಮಕ್ಕಳ ಶಬರಿಮಲೆ..!ಗಿನ್ನಿಸ್ ರೆಕಾರ್ಡ್’ನಲ್ಲಿ ದಾಖಲೆ…ಈ ದೇವಾಲಯದ ವಿಶೇಷತೆ ಏನು ಗೊತ್ತಾ..?

    ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…