News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

102

ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್‍ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್‍ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್‍ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್‍ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್‍ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್‍ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • ಮನರಂಜನೆ

    ವೀಕ್ಷಕರಿಗೆ ಸಿಹಿ ಸುದ್ದಿ ನೀಡಿದ ಜೊತೆ ಜೊತೆಯಲಿ ತಂಡ;ಇನ್ಮುಂದೆ ಅರ್ಧ ಗಂಟೆಯಲ್ಲ, 1ಗಂಟೆ‌ ಪ್ರಸಾರವಾಗಲಿದೆ? ಯಾಕೆ ಗೊತ್ತಾ?

    ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…

  • ಸುದ್ದಿ

    ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

    ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ಸುದ್ದಿ, ಸ್ಪೂರ್ತಿ

    ಪ್ರಧಾನಮಂತ್ರಿ ಯೋಜನೆಯ ಲಾಭ ಪಡೆದು ಈ ಮಹಿಳೆ ಆಗಿದ್ದೇನು ಗೊತ್ತಾ?ಮರೆಯದೇ ಈ ಸುದ್ದಿ ನೋಡಿ

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್  ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…

  • ಆರೋಗ್ಯ

    ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.