News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

102

ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್‍ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್‍ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್‍ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್‍ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್‍ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್‍ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • ಸುದ್ದಿ

    ಗಂಡು ಹೆಣ್ಣು ಹಾರ ಬದ್ಲಾಯಿಸಿಕೊಂಡ ನಂತರ ವರನ ದುರ್ಮರಣ……?ಯಾಕೆ

    ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…

  • ರಾಜಕೀಯ

    ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

    ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…

  • ವಿಚಿತ್ರ ಆದರೂ ಸತ್ಯ

    10 ವರ್ಷಗಳ ಹಿಂದೆ 16 ಕೆಜಿ ತೂಕವಿದ್ದ ಈ ಯುವತಿ ಈಗ ಹೇಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.