News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

102

ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್‍ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್‍ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್‍ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್‍ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್‍ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್‍ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಸುದ್ದಿ

    ಶಾಕಿಂಗ್ ನ್ಯೂಸ್!ಯಶ್ ಹತ್ಯೆಗೆ ಸಂಚು ರೂಪಿಸಿದ್ದ ಕಿಲ್ಲರ್ಸ್ ಅರೆಸ್ಟ್!ಸುಪಾರಿ ಕೊಟ್ಟದ್ದು ಯಾರು ಗೊತ್ತಾ..?

    ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….

  • ಆರೋಗ್ಯ

    ಅತಿ ವ್ಯಾಯಾಮ ಮಾಡುವುದರಿಂದ ಆರೋಗ್ಯಕ್ಕೆ ಆಗುವ ತೊಂದರೆಗಳು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.