ಉಪಯುಕ್ತ ಮಾಹಿತಿ

ಮಳೆಗಾಲದಲ್ಲಿ ಬರುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಯಲು ಈ ಲೇಖನ ಓದಿ…

1663

ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.

ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಕಾಡುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳೇನು ಎಂಬ ಬಗ್ಗೆ ವಿವರಗಳು ಇಲ್ಲಿವೆ :-

ಮಲೇರಿಯಾ :-

ಮುಂಗಾರು ಸಂದರ್ಭದಲ್ಲಿ ಅತೀ ಸಾಮಾನ್ಯವಾಗಿ ಕಾಣಿಸುವ ಜ್ವರ, ಅಂದರೆ ಮಲೇರಿಯಾ ರೋಗ. ಹೆಣ್ಣು ಅನಾಫಿಲಿಸ್ ಸೊಳ್ಳೆ ಕಡಿತದಿಂದಾಗಿ ಈ ಜ್ವರ ಹಬ್ಬುತ್ತದೆ. ಹೆಚ್ಚಾಗಿ ನೀರು ನಿಂತಿರುವ ಸ್ಥಳಗಳು ಸೊಳ್ಳೆಗಳ ಆವಾಸ ಸ್ಥಾನವಾಗಿರುತ್ತದೆ.

ಪ್ಲಾಸ್ಮೋಡಿಯಂ ಜಾತಿಗೆ ಸೇರಿದ ಪ್ರೊಟೊಸೋವನ್ ಪರಾವಲಂಬಿಯ ಮೂಲಕ ಈ ರೋಗಕ್ಕೆ ಕಾರಣ. ಮಲೇರಿಯಾ ಜ್ವರ ಸಾಮಾನ್ಯ ಜ್ವರದಂತೆಯೇ ಕಾಣಿಸಿಕೊಳ್ಳಬಹುದು. ಆದರೆ ಬಳಿಕ ತೀವ್ರ ರೀತಿಯ ಜ್ವರ ಇರುತ್ತದೆ. ಮೈಕೈ ನೋವು, ತಲೆನೋವು, ತೀವ್ರ ಸುಸ್ತು ಇತ್ಯಾದಿ ಸಾಮಾನ್ಯ. ಇದಕ್ಕಾಗಿ ಸೂಕ್ತ ರಕ್ತ ಪರೀಕ್ಷೆಯೊಂದಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.

ಮುನ್ನೆಚ್ಚರಿಕೆ ಏನು:-

ಮಲೇರಿಯಾ ರೋಗಾಣು ಕೇವಲ ಅನಾಫಿಲಿಸ್ ಹೆಣ್ಣು ಸೊಳ್ಳೆಗಳ ಮೂಲಕ ಮಾತ್ರ ಹರಡುತ್ತದೆ. ಆದ್ದರಿಂದ ಸೊಳ್ಳೆ ಕಡಿತವಾಗದಂತೆ ನೆಟ್ ಹಾಕುವುದು, ಮೈ ಪೂರ್ತಿ ಬಟ್ಟೆ ತೊಟ್ಟುಕೊಳ್ಳುವುದು ಮಾಡಬೇಕು, ಮನೆ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಅಗತ್ಯವಿದ್ದೆಡೆ ಔಷದ ಸಿಂಪಡಣೆ ಮಾಡಬೇಕು. ಒಂದು ವೇಳೆ ಜ್ವರ ತೀವ್ರವಾದಲ್ಲಿ ಕೂಡಲೇ ವೈದ್ಯರನ್ನು ಕಾಣಬೇಕು. ರೋಗಿಗೆ ಸಂಪೂರ್ಣ ವಿಶ್ರಾಂತಿಯೂ ಅಗತ್ಯ.

ಡೆಂಗ್ಯೂ:-


ಮಳೆಗಾಲದಲ್ಲಿ ಸಾಮಾನ್ಯ ಜ್ವರ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ನಮ್ಮ ದೇಹ ಬಹುಬೇಗ ಈ ವೈರಾಣು ಜ್ವರಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು. ಈಡಿಸ್ ಈಜಿಪ್ಟಿ ಎಂಬ ಸೊಳ್ಳೆ ಕಚ್ಚುವುದರಿಂದ ಈ ಜ್ವರ ಹಬ್ಬುತ್ತದೆ.

ಈ ಸೊಳ್ಳೆ ಹಗಲಲ್ಲೇ ಕಚ್ಚುತ್ತದೆ. ಜನ ಸಂಚಾರ ಹಗಲು ಹೆಚ್ಚಾಗುವುದರಿಂದ ವೇಗವಾಗಿ ಜ್ವರ ಹಬ್ಬುವುದಕ್ಕೂ ಕಾರಣವಾಗುತ್ತದೆ. ತೀವ್ರ ಮೈ,ಕೈ ನೋವು, ಬೆನ್ನು ನೋವು, ವಾಂತಿ-ಭೇದಿ, ನಿಶ್ಯಕ್ತಿ ಇತ್ಯಾದಿ ಕಾಣಬಹುದು.

ಈ ಜ್ವರದ ಆರಂಭದಲ್ಲಿ ಶೀತ,ಕೆಮ್ಮು ಇರುವುದಿಲ್ಲ. ಕಣ್ಣು ಕೆಂಪಾದ ಲಕ್ಷಣ, ವಾಂತಿ ಇತ್ಯಾದಿ ಆದರೆ ಕೂಡಲೇ ವೈದ್ಯರನ್ನು ಕಾಣಬೇಕು. ಜ್ವರ ತಗುಲಿ ಹೆಚ್ಚಾದರೆ, ರಕ್ತದ ಕಣಗಳು ಕಡಿಮೆಯಾಗುತ್ತದೆ. ಬಿಳಿ ರಕ್ತಕಣ ಕಡಿಮೆಯಾಗಿ ರೋಗ ನಿರೋಧಕ ಶಕ್ತಿ ಕುಂದುತ್ತದೆ. ಇದರೊಂದಿಗೆ ಇತರ ಆರೋಗ್ಯ ಸಮಸ್ಯೆ ಇದ್ದರೆ ಸಾವಿಗೆ ಕಾರಣವಾಗುತ್ತದೆ.

ಮುನ್ನೆಚ್ಚರಿಕೆಯೇನು:-

ನಿಂತ ನೀರಲ್ಲಿ ಈ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುತ್ತವೆ. ಆದ್ದರಿಂದ ಔಷದಿ, ಸೀಮೆ ಎಣ್ಣೆ ಸಿಂಪಡಣೆ, ಹೊಗೆ ಹಾಕಿ ಸೊಳ್ಳೆಗಳ ಉಪಟಳ ಕಡಿಮೆ ಮಾಡುವುದು, ಮೈಮುಚ್ಚಿಕೊಳ್ಳುವ ಬಟ್ಟೆ ತೊಡುವುದು, ನೀಲಗಿರಿ ಸಿಟ್ರೊಟೊರ ತೈಲವನ್ನು ಮೈಗೆ ಹಚ್ಚಿಕೊಳ್ಳುವುದರಿಂದ ಸೊಳ್ಳೆ ಕಡಿತದಿಂದ ಪಾರಾಗಬಹುದು.

ವಿಷಮಶೀತ ಜ್ವರ


ಸಾಮಾನ್ಯವಾಗಿ ಟೈಫಾಯಿಡ್ ಎಂಬ ಹೆಸರಿನಿಂದ ಕರೆಯುವ ಈ ಜ್ವರ ಸಾಲ್ಮೊನೆಲ್ಲಾ ಎಂಟಾರಿಕಾ ಟೈಪೈ ಎನ್ನುವ ಬ್ಯಾಕ್ಟೀರಿಯಾದಿಂದ ಬರುತ್ತದೆ. ವಿಶ್ವಾದ್ಯಾಂತ ಈ ರೋಗ ಸಾಮಾನ್ಯವಾಗಿ ಕಂಡು ಬರುತ್ತದೆ.

ಮಳೆಗಾಲದಲ್ಲಿ ಈ ರೋಗ ಅತೀ ವೇಗವಾಗಿ ಹರಡುವ ಸಾಧ್ಯತೆ ಹೆಚ್ಚು. ಸೋಂಕಿರುವ ವ್ಯಕ್ತಿಯ ಮಲದಿಂದ ಕಲುಷಿತಗೊಂಡ ಆಹಾರ ಅಥವಾ ನೀರಿನ ಸೇವನೆಯಿಂದ ಈ ರೋಗ ಹಬ್ಬುತ್ತದೆ.

ರೋಗ ಬಾಧಿಸಿದ ವ್ಯಕ್ತಿಗೆ ಜ್ವರ, ಬೇಧಿ,ಗಂಟಲು ನೋವು, ಮೈಕೈ ನೋವು, ಇತ್ಯಾದಿಗಳು ಕಾಣಿಸಿಕೊಳ್ಳಬಹುದು. ಅಲ್ಲದೇ ಜ್ವರ ಶುರುವಾಗಿ ನಾಲ್ಕಾರು ದಿನಗಳಲ್ಲಿ ಮೈ ಮೇಲೆ ಕೆಂಪು ಕಲೆಗಳು ಕಾಣಿಸಿಕೊಳ್ಳುತ್ತದೆ. ರೋಗ ಲಕ್ಷಣ ಕಾಣಿಸಿಕೊಳ್ಳುತ್ತಿದಂತೆಯೇ ವೈದ್ಯರನ್ನು ಕಾಣಬೇಕು.

ಮುನ್ನೆಚ್ಚರಿಕೆ ಕ್ರಮವೇನು:-

ಆಹಾರವನ್ನು ತಯಾರಿಸಿ ಬಳಿಕ ಅದನ್ನು ಮುಚ್ಚಿಡಬೇಕು. ಕುದಿಸಿದ ನೀರನ್ನು ಕುಡಿಯುವುದು ಉತ್ತಮ. ಆಹಾರ ತಯಾರಿಸುವಾಗ ಶುಚಿತ್ವ ಕಾಯ್ದುಕೊಳ್ಳಬೇಕು.

ಚಿಕನ್‌ಗುನ್ಯಾ:-


ಈಡಿಸ್ ಅಲ್ಪೋಪಿಕ್ಟಸ್ ಸೊಳ್ಳೆಗಳಿಂದ ಈ ರೋಗದ ಚಿಕನ್‌ಗುನ್ಯಾ ವೈರಸ್ ಹಬ್ಬುತ್ತದೆ. ಇದು ಪ್ರಾಣಿಗಳಿಂದ ಬರುವ ಕಾಯಿಲೆಯಾಗಿದ್ದು, ತೀವ್ರ ತರವಾದ ಗಂಟುನೋವು, ಜ್ವರ ಇತ್ಯಾದಿಗಳು ಕಾಣಿಸಿಕೊಳ್ಳುತ್ತವೆ. ಹಗಲಲ್ಲೇ ಈ ಸೊಳ್ಳೆಗಳು ಕಚ್ಚುತ್ತವೆ. ಜ್ವರ ವಾಸಿಯಾದ ಮೇಲೂ ವಾರಗಳ ತನಕ ಗಂಟು ನೋವುಗಳು ಇರಬಹುದು.

ಮುನ್ನೆಚ್ಚರಿಕೆ ಏನು:-

ಮನೆ ಸುತ್ತ ಸೊಳ್ಳೆಗಳ ಆವಾಸ ಸ್ಥಾನ ಸೃಷ್ಟಿಯಾಗಲು ಬಿಡಲೇಬಾರದು. ಕೊಳಚೆ ಪ್ರದೇಶದಿಂದ ದೂರವಿರಬೇಕು. ಮೈತುಂಬ ಬಟ್ಟೆ, ನಿಲಗಿರಿ ಎಣ್ಣೆ ಮೈಗೆ ಹಚ್ಚುವುದರಿಂದ ಸೊಳ್ಳೆ ಕಡಿತ ತಪ್ಪಿಸಿಕೊಳ್ಳಬಹುದು.

ಕಾಲರಾ:-


ಮಳೆಗಾಲದ ಮಾರಣಾಂತಿಕ ಕಾಯಲೆಯಾಗಿದ್ದು. ಕಲುಷಿತ ನೀರು, ಆಹಾರ ಸೇವನೆಯಿಂದ ಈ ರೋಗ ಕಾಣಿಸಿಕೊಳ್ಳುತ್ತದೆ. ತೀವ್ರ ಭೇದಿ ಇದರ ಸಾಮಾನ್ಯ ಲಕ್ಷಣ. ತೀವ್ರ ಜ್ವರವೂ ಕಾಣಿಸಿಕೊಳ್ಳಬಹುದು.

ಸೂಕ್ತ ಶೌಚಾಲಯ ಇಲ್ಲದಿರುವ ಸ್ಥಳಗಳಲ್ಲಿ ಈ ರೋಗ ಬಹುಬೇಗನೆ ಹಬ್ಬುತ್ತದೆ. ರೋಗಿಯಲ್ಲಿ ಸಾಮಾನ್ಯ ಜ್ವರ ಕಾಣಿಸಿಕೊಂಡು ಬಳಿಕ ಇದು ಪ್ರಾಣಾಂತಿಕವೇ ಆಗಬಹುದು. ಆದ್ದರಿಂದ ವೈದ್ಯರ ಭೇಟಿ ಅಗತ್ಯ.

ಮುನ್ನೆಚ್ಚರಿಕೆಯೇನು:-

ಕಾಲರಾ ಕಂಡುಬಂದಲ್ಲಿ 6 ತಿಂಗಳು ವೈದ್ಯಕೀಯ ನೆರವು ಬೇಕು. ಆಹಾರ, ನೀರಿನ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ. ಬಯಲು ಶೌಚಾಲಯದಿಂದ ದೂರವಿರುವುದು ಒಳ್ಳೆಯದು.

ಕಾಮಾಲೆ:-
ಅರಸಿನ ಕಾಮಾಲೆ, ಅರಸಿನ ಮುಂಡಿಗೆ,ಕಾಮಾಲೆ ರೋಗ ಎಂಬ ಹೆಸರು ಜಾಂಡಿಸ್‌ಗಿದೆ. ದೇಹದಲ್ಲಿ ಬೈಲ್‌ರೂಬಿನ್ ಎಂಬ ಕಿತ್ತಳೆ ಬಣ್ಣದ ವಿಸರ್ಜನೆಯಾಗಬೇಕಾದ ವಸ್ತು ಅಗತ್ಯಕ್ಕಿಂತ ಹೆಚ್ಚು ಶೇಖರವಾಗಿ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಪಿತ್ತಕೋಶಕ್ಕೆ ವೈರಾಣು ಸೊಂಕು ತಗಲುವುದರಿಂದ ಕಾಮಾಲೆ ಕಾಣಿಸಿಕೊಳ್ಳುತ್ತದೆ.

ಇದಕ್ಕೆ ಕಲುಷಿತ ನೀರು, ಆಹಾರ ಕಾರಣ, ಕಾಮಾಲೆ ರೋಗದಿಂದ ತೀವ್ರ ಬಳಲಿಕೆ, ವಾಂತಿ, ಪಿತ್ತಕೋಶದ ಸಮಸ್ಯೆ ಕಾಣಿಸಬಹುದು. ಅಲ್ಲದೇ ಇದು ಇತರ ದೈಹಿಕ ಸಮಸ್ಯೆಗಳಿಗೂ ಕಾರಣವಾಗಬಹುದು. ಆದ್ದರಿಂದ ರೋಗ ಲಕ್ಷಣ ಕಾಣಿಸುತ್ತಿದಂತೆ ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆ ಅಗತ್ಯ. ಕಾಯಿಲೆ ನಿರ್ಲಕ್ಷಿಸಿ ತೀವ್ರವಾದರೆ ಪ್ರಾಣಕ್ಕೆ ಎರವಾಗಬಹುದು.

ಮುನ್ನೆಚ್ಚರಿಕೆ ಏನು:- ಕಲುಷಿತ ಆಹಾರ ಸೇವಿಸದೇ ಇರುವುದು, ಬಿಸಿ ನೀರನ್ನೇ ಸೇವಿಸುವುದು ಮಾಡಬೇಕು.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

    ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…

  • ವಿಚಿತ್ರ ಆದರೂ ಸತ್ಯ

    ಜುರಾಸಿಕ್ ಅವಧಿಯ ಡೈನೋಸರ್ ಮೊಟ್ಟೆಗಳು ಪತ್ತೆ..!ತಿಳಿಯಲು ಈ ಲೇಖನ ಓದಿ…

    ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…

  • ಸುದ್ದಿ

    ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

    ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…