ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.
ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಕಾಡುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳೇನು ಎಂಬ ಬಗ್ಗೆ ವಿವರಗಳು ಇಲ್ಲಿವೆ :-
ಮಲೇರಿಯಾ :-
ಮುಂಗಾರು ಸಂದರ್ಭದಲ್ಲಿ ಅತೀ ಸಾಮಾನ್ಯವಾಗಿ ಕಾಣಿಸುವ ಜ್ವರ, ಅಂದರೆ ಮಲೇರಿಯಾ ರೋಗ. ಹೆಣ್ಣು ಅನಾಫಿಲಿಸ್ ಸೊಳ್ಳೆ ಕಡಿತದಿಂದಾಗಿ ಈ ಜ್ವರ ಹಬ್ಬುತ್ತದೆ. ಹೆಚ್ಚಾಗಿ ನೀರು ನಿಂತಿರುವ ಸ್ಥಳಗಳು ಸೊಳ್ಳೆಗಳ ಆವಾಸ ಸ್ಥಾನವಾಗಿರುತ್ತದೆ.
ಪ್ಲಾಸ್ಮೋಡಿಯಂ ಜಾತಿಗೆ ಸೇರಿದ ಪ್ರೊಟೊಸೋವನ್ ಪರಾವಲಂಬಿಯ ಮೂಲಕ ಈ ರೋಗಕ್ಕೆ ಕಾರಣ. ಮಲೇರಿಯಾ ಜ್ವರ ಸಾಮಾನ್ಯ ಜ್ವರದಂತೆಯೇ ಕಾಣಿಸಿಕೊಳ್ಳಬಹುದು. ಆದರೆ ಬಳಿಕ ತೀವ್ರ ರೀತಿಯ ಜ್ವರ ಇರುತ್ತದೆ. ಮೈಕೈ ನೋವು, ತಲೆನೋವು, ತೀವ್ರ ಸುಸ್ತು ಇತ್ಯಾದಿ ಸಾಮಾನ್ಯ. ಇದಕ್ಕಾಗಿ ಸೂಕ್ತ ರಕ್ತ ಪರೀಕ್ಷೆಯೊಂದಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
ಮುನ್ನೆಚ್ಚರಿಕೆ ಏನು:-
ಮಲೇರಿಯಾ ರೋಗಾಣು ಕೇವಲ ಅನಾಫಿಲಿಸ್ ಹೆಣ್ಣು ಸೊಳ್ಳೆಗಳ ಮೂಲಕ ಮಾತ್ರ ಹರಡುತ್ತದೆ. ಆದ್ದರಿಂದ ಸೊಳ್ಳೆ ಕಡಿತವಾಗದಂತೆ ನೆಟ್ ಹಾಕುವುದು, ಮೈ ಪೂರ್ತಿ ಬಟ್ಟೆ ತೊಟ್ಟುಕೊಳ್ಳುವುದು ಮಾಡಬೇಕು, ಮನೆ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಅಗತ್ಯವಿದ್ದೆಡೆ ಔಷದ ಸಿಂಪಡಣೆ ಮಾಡಬೇಕು. ಒಂದು ವೇಳೆ ಜ್ವರ ತೀವ್ರವಾದಲ್ಲಿ ಕೂಡಲೇ ವೈದ್ಯರನ್ನು ಕಾಣಬೇಕು. ರೋಗಿಗೆ ಸಂಪೂರ್ಣ ವಿಶ್ರಾಂತಿಯೂ ಅಗತ್ಯ.
ಡೆಂಗ್ಯೂ:-

ಮಳೆಗಾಲದಲ್ಲಿ ಸಾಮಾನ್ಯ ಜ್ವರ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ನಮ್ಮ ದೇಹ ಬಹುಬೇಗ ಈ ವೈರಾಣು ಜ್ವರಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು. ಈಡಿಸ್ ಈಜಿಪ್ಟಿ ಎಂಬ ಸೊಳ್ಳೆ ಕಚ್ಚುವುದರಿಂದ ಈ ಜ್ವರ ಹಬ್ಬುತ್ತದೆ.
ಈ ಸೊಳ್ಳೆ ಹಗಲಲ್ಲೇ ಕಚ್ಚುತ್ತದೆ. ಜನ ಸಂಚಾರ ಹಗಲು ಹೆಚ್ಚಾಗುವುದರಿಂದ ವೇಗವಾಗಿ ಜ್ವರ ಹಬ್ಬುವುದಕ್ಕೂ ಕಾರಣವಾಗುತ್ತದೆ. ತೀವ್ರ ಮೈ,ಕೈ ನೋವು, ಬೆನ್ನು ನೋವು, ವಾಂತಿ-ಭೇದಿ, ನಿಶ್ಯಕ್ತಿ ಇತ್ಯಾದಿ ಕಾಣಬಹುದು.
ಈ ಜ್ವರದ ಆರಂಭದಲ್ಲಿ ಶೀತ,ಕೆಮ್ಮು ಇರುವುದಿಲ್ಲ. ಕಣ್ಣು ಕೆಂಪಾದ ಲಕ್ಷಣ, ವಾಂತಿ ಇತ್ಯಾದಿ ಆದರೆ ಕೂಡಲೇ ವೈದ್ಯರನ್ನು ಕಾಣಬೇಕು. ಜ್ವರ ತಗುಲಿ ಹೆಚ್ಚಾದರೆ, ರಕ್ತದ ಕಣಗಳು ಕಡಿಮೆಯಾಗುತ್ತದೆ. ಬಿಳಿ ರಕ್ತಕಣ ಕಡಿಮೆಯಾಗಿ ರೋಗ ನಿರೋಧಕ ಶಕ್ತಿ ಕುಂದುತ್ತದೆ. ಇದರೊಂದಿಗೆ ಇತರ ಆರೋಗ್ಯ ಸಮಸ್ಯೆ ಇದ್ದರೆ ಸಾವಿಗೆ ಕಾರಣವಾಗುತ್ತದೆ.
ಮುನ್ನೆಚ್ಚರಿಕೆಯೇನು:-
ನಿಂತ ನೀರಲ್ಲಿ ಈ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುತ್ತವೆ. ಆದ್ದರಿಂದ ಔಷದಿ, ಸೀಮೆ ಎಣ್ಣೆ ಸಿಂಪಡಣೆ, ಹೊಗೆ ಹಾಕಿ ಸೊಳ್ಳೆಗಳ ಉಪಟಳ ಕಡಿಮೆ ಮಾಡುವುದು, ಮೈಮುಚ್ಚಿಕೊಳ್ಳುವ ಬಟ್ಟೆ ತೊಡುವುದು, ನೀಲಗಿರಿ ಸಿಟ್ರೊಟೊರ ತೈಲವನ್ನು ಮೈಗೆ ಹಚ್ಚಿಕೊಳ್ಳುವುದರಿಂದ ಸೊಳ್ಳೆ ಕಡಿತದಿಂದ ಪಾರಾಗಬಹುದು.
ವಿಷಮಶೀತ ಜ್ವರ

ಸಾಮಾನ್ಯವಾಗಿ ಟೈಫಾಯಿಡ್ ಎಂಬ ಹೆಸರಿನಿಂದ ಕರೆಯುವ ಈ ಜ್ವರ ಸಾಲ್ಮೊನೆಲ್ಲಾ ಎಂಟಾರಿಕಾ ಟೈಪೈ ಎನ್ನುವ ಬ್ಯಾಕ್ಟೀರಿಯಾದಿಂದ ಬರುತ್ತದೆ. ವಿಶ್ವಾದ್ಯಾಂತ ಈ ರೋಗ ಸಾಮಾನ್ಯವಾಗಿ ಕಂಡು ಬರುತ್ತದೆ.
ಮಳೆಗಾಲದಲ್ಲಿ ಈ ರೋಗ ಅತೀ ವೇಗವಾಗಿ ಹರಡುವ ಸಾಧ್ಯತೆ ಹೆಚ್ಚು. ಸೋಂಕಿರುವ ವ್ಯಕ್ತಿಯ ಮಲದಿಂದ ಕಲುಷಿತಗೊಂಡ ಆಹಾರ ಅಥವಾ ನೀರಿನ ಸೇವನೆಯಿಂದ ಈ ರೋಗ ಹಬ್ಬುತ್ತದೆ.
ರೋಗ ಬಾಧಿಸಿದ ವ್ಯಕ್ತಿಗೆ ಜ್ವರ, ಬೇಧಿ,ಗಂಟಲು ನೋವು, ಮೈಕೈ ನೋವು, ಇತ್ಯಾದಿಗಳು ಕಾಣಿಸಿಕೊಳ್ಳಬಹುದು. ಅಲ್ಲದೇ ಜ್ವರ ಶುರುವಾಗಿ ನಾಲ್ಕಾರು ದಿನಗಳಲ್ಲಿ ಮೈ ಮೇಲೆ ಕೆಂಪು ಕಲೆಗಳು ಕಾಣಿಸಿಕೊಳ್ಳುತ್ತದೆ. ರೋಗ ಲಕ್ಷಣ ಕಾಣಿಸಿಕೊಳ್ಳುತ್ತಿದಂತೆಯೇ ವೈದ್ಯರನ್ನು ಕಾಣಬೇಕು.
ಮುನ್ನೆಚ್ಚರಿಕೆ ಕ್ರಮವೇನು:-
ಆಹಾರವನ್ನು ತಯಾರಿಸಿ ಬಳಿಕ ಅದನ್ನು ಮುಚ್ಚಿಡಬೇಕು. ಕುದಿಸಿದ ನೀರನ್ನು ಕುಡಿಯುವುದು ಉತ್ತಮ. ಆಹಾರ ತಯಾರಿಸುವಾಗ ಶುಚಿತ್ವ ಕಾಯ್ದುಕೊಳ್ಳಬೇಕು.
ಚಿಕನ್ಗುನ್ಯಾ:-

ಈಡಿಸ್ ಅಲ್ಪೋಪಿಕ್ಟಸ್ ಸೊಳ್ಳೆಗಳಿಂದ ಈ ರೋಗದ ಚಿಕನ್ಗುನ್ಯಾ ವೈರಸ್ ಹಬ್ಬುತ್ತದೆ. ಇದು ಪ್ರಾಣಿಗಳಿಂದ ಬರುವ ಕಾಯಿಲೆಯಾಗಿದ್ದು, ತೀವ್ರ ತರವಾದ ಗಂಟುನೋವು, ಜ್ವರ ಇತ್ಯಾದಿಗಳು ಕಾಣಿಸಿಕೊಳ್ಳುತ್ತವೆ. ಹಗಲಲ್ಲೇ ಈ ಸೊಳ್ಳೆಗಳು ಕಚ್ಚುತ್ತವೆ. ಜ್ವರ ವಾಸಿಯಾದ ಮೇಲೂ ವಾರಗಳ ತನಕ ಗಂಟು ನೋವುಗಳು ಇರಬಹುದು.
ಮುನ್ನೆಚ್ಚರಿಕೆ ಏನು:-
ಮನೆ ಸುತ್ತ ಸೊಳ್ಳೆಗಳ ಆವಾಸ ಸ್ಥಾನ ಸೃಷ್ಟಿಯಾಗಲು ಬಿಡಲೇಬಾರದು. ಕೊಳಚೆ ಪ್ರದೇಶದಿಂದ ದೂರವಿರಬೇಕು. ಮೈತುಂಬ ಬಟ್ಟೆ, ನಿಲಗಿರಿ ಎಣ್ಣೆ ಮೈಗೆ ಹಚ್ಚುವುದರಿಂದ ಸೊಳ್ಳೆ ಕಡಿತ ತಪ್ಪಿಸಿಕೊಳ್ಳಬಹುದು.
ಕಾಲರಾ:-

ಮಳೆಗಾಲದ ಮಾರಣಾಂತಿಕ ಕಾಯಲೆಯಾಗಿದ್ದು. ಕಲುಷಿತ ನೀರು, ಆಹಾರ ಸೇವನೆಯಿಂದ ಈ ರೋಗ ಕಾಣಿಸಿಕೊಳ್ಳುತ್ತದೆ. ತೀವ್ರ ಭೇದಿ ಇದರ ಸಾಮಾನ್ಯ ಲಕ್ಷಣ. ತೀವ್ರ ಜ್ವರವೂ ಕಾಣಿಸಿಕೊಳ್ಳಬಹುದು.
ಸೂಕ್ತ ಶೌಚಾಲಯ ಇಲ್ಲದಿರುವ ಸ್ಥಳಗಳಲ್ಲಿ ಈ ರೋಗ ಬಹುಬೇಗನೆ ಹಬ್ಬುತ್ತದೆ. ರೋಗಿಯಲ್ಲಿ ಸಾಮಾನ್ಯ ಜ್ವರ ಕಾಣಿಸಿಕೊಂಡು ಬಳಿಕ ಇದು ಪ್ರಾಣಾಂತಿಕವೇ ಆಗಬಹುದು. ಆದ್ದರಿಂದ ವೈದ್ಯರ ಭೇಟಿ ಅಗತ್ಯ.
ಮುನ್ನೆಚ್ಚರಿಕೆಯೇನು:-
ಕಾಲರಾ ಕಂಡುಬಂದಲ್ಲಿ 6 ತಿಂಗಳು ವೈದ್ಯಕೀಯ ನೆರವು ಬೇಕು. ಆಹಾರ, ನೀರಿನ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ. ಬಯಲು ಶೌಚಾಲಯದಿಂದ ದೂರವಿರುವುದು ಒಳ್ಳೆಯದು.
ಕಾಮಾಲೆ:-
ಅರಸಿನ ಕಾಮಾಲೆ, ಅರಸಿನ ಮುಂಡಿಗೆ,ಕಾಮಾಲೆ ರೋಗ ಎಂಬ ಹೆಸರು ಜಾಂಡಿಸ್ಗಿದೆ. ದೇಹದಲ್ಲಿ ಬೈಲ್ರೂಬಿನ್ ಎಂಬ ಕಿತ್ತಳೆ ಬಣ್ಣದ ವಿಸರ್ಜನೆಯಾಗಬೇಕಾದ ವಸ್ತು ಅಗತ್ಯಕ್ಕಿಂತ ಹೆಚ್ಚು ಶೇಖರವಾಗಿ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಪಿತ್ತಕೋಶಕ್ಕೆ ವೈರಾಣು ಸೊಂಕು ತಗಲುವುದರಿಂದ ಕಾಮಾಲೆ ಕಾಣಿಸಿಕೊಳ್ಳುತ್ತದೆ.
ಇದಕ್ಕೆ ಕಲುಷಿತ ನೀರು, ಆಹಾರ ಕಾರಣ, ಕಾಮಾಲೆ ರೋಗದಿಂದ ತೀವ್ರ ಬಳಲಿಕೆ, ವಾಂತಿ, ಪಿತ್ತಕೋಶದ ಸಮಸ್ಯೆ ಕಾಣಿಸಬಹುದು. ಅಲ್ಲದೇ ಇದು ಇತರ ದೈಹಿಕ ಸಮಸ್ಯೆಗಳಿಗೂ ಕಾರಣವಾಗಬಹುದು. ಆದ್ದರಿಂದ ರೋಗ ಲಕ್ಷಣ ಕಾಣಿಸುತ್ತಿದಂತೆ ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆ ಅಗತ್ಯ. ಕಾಯಿಲೆ ನಿರ್ಲಕ್ಷಿಸಿ ತೀವ್ರವಾದರೆ ಪ್ರಾಣಕ್ಕೆ ಎರವಾಗಬಹುದು.
ಮುನ್ನೆಚ್ಚರಿಕೆ ಏನು:- ಕಲುಷಿತ ಆಹಾರ ಸೇವಿಸದೇ ಇರುವುದು, ಬಿಸಿ ನೀರನ್ನೇ ಸೇವಿಸುವುದು ಮಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ