ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.
ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.
ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಬರುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ.

ನಾವು ಹಬ್ಬ ಆಚರಣೆ ಮಾಡುವುದು ಹಾಗೂ ರಾಶಿ ನಕ್ಷತ್ರಗಳನ್ನು ನೋಡುವುದು ಕೇವಲ ಪರಂಪರೆ ಎಂದು ತಿಳಿದು ಆಚರಣೆ ಮಾಡುವುದಕ್ಕಿಂತ ವೈಜ್ಞಾನಿಕವಾಗಿಯು ತಿಳಿದುಕೊಳ್ಳಬೇಕಾಗುತ್ತದೆ. ನಕ್ಷತ್ರ ರಾಶಿ ಹಾಗೂ ಪಂಚಾಂಗಗಳು ಏನು ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡು ನಮ್ಮ ಗೊಂದಲವನ್ನು ನಾವೇ ನಿವಾರಣೆ ಮಾಡಿಕೊಳ್ಳಬಹುದು. ಸಂವತ್ಸರಗಳನ್ನು ಸೂರ್ಯ, ಚಂದ್ರರ ಚಲನ ವಲನದಿಂದ ಲೆಕ್ಕ ಹಾಕಿ ಸೌರಮಾನ ಹಾಗೂ ಚಂದ್ರಮಾನ ಎನ್ನುವ ಮಾನದಂಡದಿಂದ ನಿರ್ಣಯಿಸಲಾಗುತ್ತದೆ.

ಸೂರ್ಯನಿಗೆ ಮೇಷ, ವೃಷಭ ಎಂಬ ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಲು 30 ತಿಂಗಳು 14 ದಿವಸ ಬೇಕು. ಅದೇ ಸೂರ್ಯನಿಗೆ ಒಂದು ವರ್ಷ ಅಂದರೆ ಚೈತ್ರ, ವೈಶಾಖ ದಿಂದ ಮೀನ ಮಾಸ ಎಂಬ ಋತು ಚಕ್ರವನ್ನು ಸುತ್ತಲು 365.25 ಘಳಿಗೆ ಬೇಕಾಗುತ್ತದೆ. ಇದಕ್ಕೆ ಸೌರಮಾನ ಎಂದು ಕರೆಯುತ್ತಾರೆ. ಅದೇ ಚಂದ್ರನಿಗೆ 354 ದಿನಗಳು ಬೇಕಾಗುತ್ತದೆ. ಇದಕ್ಕೆ ಚಂದ್ರಮಾನ ಎಂದು ಕರೆಯುತ್ತಾರೆ.
ಸೂರ್ಯನಿಗೂ, ಚಂದ್ರನಿಗೂ ಒಂದು ವರ್ಷ ಮುಗಿಸಬೇಕಾದರೆ ಪ್ರತಿ ವರ್ಷವು 11 ದಿನ ವ್ಯತ್ಯಾಸಗಳು ಬಂದು ಆ ದಿನಗಳು ಪ್ರತಿ ವರ್ಷವು ಬಾಕಿಯಾಗಿ 3 ವರ್ಷಕ್ಕೊಮ್ಮೆ ಆ 11 ದಿನಗಳನ್ನು ಸೇರಿಸಿ ಒಂದು ಆಧಿಕ ಮಾಸ ಎಂದು ಮಾಡುತ್ತಾರೆ. ಹೀಗೆ ಬೇರೆ ಬೇರೆ ಧರ್ಮದವರು ಹಾಗೂ ಬೇರೆ ಬೇರೆ ದಿನ ಮಾಸಗಳನ್ನು ನಿರ್ಣಯಿಸುವವರು ಇಂಗ್ಲಿಷ್ ಕ್ಯಾಲೆಂಡರ್ಗಳನ್ನು 30-31 ಹಾಗೂ ಫೆಬ್ರವರಿ 28-29 ದಿನಾಂಕಗಳನ್ನು ಹೆಚ್ಚುವರಿ ಹಾಕಿ ಸಮದೂಗಿಸುತ್ತಾರೆ. ಹಾಗೆಯೇ ಬೇರೆ ಬೇರೆ ಧರ್ಮದ ಕ್ಯಾಲೆಂಡರ್ಗಳಲ್ಲಿ ಕೂಡ ಹೀಗೆ ಸರಿದೂಗಿಸಲಾಗುತ್ತದೆ.
ಅದೇ ಪ್ರಕಾರ ಪ್ರತಿ ಮೂರು ವರ್ಷಕೊಮ್ಮೆ ಬೇರೆ ಬೇರೆ ತಿಂಗಳುಗಳು ಅಧಿಕ ಮಾಸ ಎಂದು ಬರುತ್ತದೆ. ಆದ್ದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
ಪ್ರತಿವರ್ಷ ಮಹಾಲಯ ಅಮಾವಾಸ್ಯೆ ಆಚರಣೆ ಮಾಡುವವರು ಸೆ.17 ರಂದು ಆಚರಿಸಬಹುದು. ನವರಾತ್ರಿ ಹಾಗೂ ದಸರಾ ಆಚರಣೆ ಮಾಡುವವರು ಮುಂದಿನ ಅಮವಾಸ್ಯೆ ಕಳೆದ ಮೇಲೆ ಆಚರಣೆ ಮಾಡಬೇಕು. ಈ ಮಧ್ಯದ ಅಧಿಕ ಮಾಸದಲ್ಲಿ ಶುಭಕಾರ್ಯಗಳನ್ನು ಅಂದರೆ ಮದುವೆ, ಗೃಹ ಪ್ರವೇಶ, ಮಂಗಳ ಕಾರ್ಯಗಳನ್ನು ಆಚರಿಸುವಂತಿಲ್ಲ.

ದೇವತಾ ಆರಾಧನೆ, ವ್ರತÀ, ದಾನ, ಧರ್ಮ ಮತ್ತು ಪೂರ್ವ ನಿಯೋಜಿತ ಅಂದರೆ ಸೀಮಂತಾದಿಗಳನ್ನು ನಡೆಸಬಹುದು. ಹೀಗೆ ಎಲ್ಲವು ಕೂಡ ಹಿಂದಿನ ಋಷಿ ಮುನಿಗಳು ತಮ್ಮ ಸ್ವಯಂ ಆಚರಣೆಯಿಂದ ಸಂತುಷ್ಟಿ ಜೀವನವನ್ನು ಕಂಡಿರುವುದರಿಂದ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿ ಇಂತಹ ಧರ್ಮ ವಿಚಾರವನ್ನು ಗ್ರಂಥವಾಗಿ ಬರೆದಿಟ್ಟಿದ್ದಾರೆ.
ಆದ್ದರಿಂದ ಜೋತಿಷ್ಯ ಶಾಸ್ತ್ರವು ಅಂದರೆ ಈಗಿನ (ಆಷ್ಟ್ರಾಲಜಿ) ಸುಳ್ಳಲ್ಲ. ಅದೇ ಜ್ಯೋತಿಷ್ಯ ಹೇಳುವವನು (ಅಸ್ಟ್ರಾಲಜಿಕ್) ಗೊತ್ತಿಲ್ಲದೆ ಸುಳ್ಳು ಹೇಳಬಹುದು. ಆದರೆ ಜ್ಯೋತಿಷ್ಯವೇ ಸುಳ್ಳು ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬರುವ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಎಂದು ಅವರವರ ವರ್ಗದ ಹಾಗೂ ಕುಟುಂಬದ ನಿಯಮಾನುಸಾರ ಹಿರಿಯರಿಗೆ (ಮರಣ ಹೊಂದಿದ ಪಿತೃಗಳಿಗೆ) ತೃಪ್ತಿಯಾಗಲೆಂದು ಪಿಂಡ ಪ್ರಧಾನ ತಿಲತರ್ಪಣ ಗೋಗ್ರಾಸ ಅಂದರೆ ಗೋವಿನ ಅನ್ನನೀಡುವುದು, ಗೋವು ಪೂಜೆಯನ್ನು ಮಾಡುವುದು, ಕಾಗೆಗಳಿಗೆ ಭಕ್ಷ ಸಿದ್ಧ ಪಡಿಸಿ ಬಡಿಸುವುದು ಹಾಗೂ ಪಿತೃಗಳ ಸಂತುಷ್ಟಿಗೆಂದು ದಾನ ಧರ್ಮಾಧಿಗಳನ್ನು ಮಾಡಿ ಪುಣ್ಯ ಸಂಪಾದನೆಗೆ ಮಾರ್ಗವಿದೆ.
ಅದರಿಂದ ಸಂತೃಪ್ತಿ ಮತ್ತು ಮನ:ಶಾಂತಿಯನ್ನು ಕಂಡುಕೊಳ್ಳಬಹುದು ಮತ್ತು ದಸರಾ ಹಬ್ಬ ಆಚರಣೆಯಲ್ಲಿ ಯಾವುದೇ ಗೊಂದಲಗಳು ಬೇಡ. ಸರ್ವೇ ಜನೋ ಸುಖಿನೋ ಭವಂತು.
ಡಾ.ಮಹಾಭಲೇಶ್ವರ ಭಟ್,
source whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…