News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
bank, ಬ್ಯಾಂಕ್, ಸಾಲ, ಹಣ

ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

51211

ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.

ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

ಏನಿದು `ಮುದ್ರಾ ಯೋಜನೆ’..?

ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.

1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.

2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.

3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.

ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.

ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.

ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.

* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ

* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ

* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್

* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.

ಮುದ್ರಾ ಕಾರ್ಡ್ :


ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.

ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…