News

ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು
ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ
ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
bank, ಬ್ಯಾಂಕ್, ಸಾಲ, ಹಣ

ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

51135

ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.

ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

ಏನಿದು `ಮುದ್ರಾ ಯೋಜನೆ’..?

ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.

1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.

2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.

3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.

ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.

ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.

ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.

* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ

* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ

* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್

* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.

ಮುದ್ರಾ ಕಾರ್ಡ್ :


ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.

ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಖ್ಯಾತ ಸ್ಯಾಕ್ಸೋಫೋನ್ ವಾದಕ,ಪದ್ಮಶ್ರೀ ಪುರಸ್ಕೃತ ವಿಜೇತ ಕದ್ರಿ ಗೋಪಾಲನಾಥ್ ಇನ್ನಿಲ್ಲ …..

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70)​ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಆರೋಗ್ಯ

    ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.