bank, ಬ್ಯಾಂಕ್, ಸಾಲ, ಹಣ

ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

51135

ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.

ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

ಏನಿದು `ಮುದ್ರಾ ಯೋಜನೆ’..?

ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.

1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.

2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.

3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.

ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.

ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.

ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.

* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ

* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ

* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್

* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.

ಮುದ್ರಾ ಕಾರ್ಡ್ :


ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.

ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

    ಇಂದು ಡಿಸೆಂಬರ್‌ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

  • ಆರೋಗ್ಯ

    ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

    ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.   ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…

  • ಆರೋಗ್ಯ

    ಈರುಳ್ಳಿ ಸಿಪ್ಪೆಯ ನಂಬಲೂ ಸಾಧ್ಯವಿಲ್ಲದ ಉಪಯೋಗಗಳ ನಿಮ್ಗೆ ಗೂತ್ತಾ..?ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …