bank, ಬ್ಯಾಂಕ್, ಸಾಲ, ಹಣ

ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

51050

ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.

ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

ಏನಿದು `ಮುದ್ರಾ ಯೋಜನೆ’..?

ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.

1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.

2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.

3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.

ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.

ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.

ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.

* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ

* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ

* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್

* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.

ಮುದ್ರಾ ಕಾರ್ಡ್ :


ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.

ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಸುದ್ದಿ

    ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಬರೋಬ್ಬರಿ 50ಲಕ್ಷ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟ ಮಹಾನ್ ತಾಯಿ!ಮತ್ತೆ ಮಗಳ ಮದ್ವೆ ಹೇಗೆ?

     ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.    ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…