bank, ಬ್ಯಾಂಕ್, ಸಾಲ, ಹಣ

ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

51094

ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.

ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

ಏನಿದು `ಮುದ್ರಾ ಯೋಜನೆ’..?

ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.

1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.

2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.

3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.

ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.

ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.

ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.

* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ

* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ

* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್

* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.

ಮುದ್ರಾ ಕಾರ್ಡ್ :


ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.

ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಲಾಗಿದೆ,..!

    ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ  S ಕ್ರಾಸ್  ಖರೀದಿಸುವ ಗ್ರಾಹಕರಿಗೆ ಗರಿಷ್ಠ…

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ತಂಡದ ಈ ಆಟಗಾರ ಸಿಕ್ಸರ್ ಕಿಂಗ್, ಪತ್ನಿ ಬಿಕಿನಿ ಕ್ವೀನ್.!ಯಾರು ಗೊತ್ತ.?ತಿಳಿಯಲು ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…

  • ಉಪಯುಕ್ತ ಮಾಹಿತಿ

    ಆಸ್ಪತ್ರೆಗೆ ಹೋಗುವುದು ಬೇಡ ಎಂದರೆ, ಈ ಹಣ್ಣುಗಳನ್ನು ತಿನ್ನಿರಿ..!ತಿಳಿಯಲು ಇದನ್ನು ಓದಿ…

    ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…

  • ಸುದ್ದಿ

    ಕೃಷ್ಣ ಜನ್ಮಾಷ್ಠಮಿಯಂದು ನವಿಲು ಗರಿಯನ್ನು ನಿಮ್ಮ ಮನೆಯ ಈ ಭಾಗದಲ್ಲಿಡಿ..ಅದೃಷ್ಟವಂತರಾಗಿ….!

    ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…