ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.

ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಏನಿದು `ಮುದ್ರಾ ಯೋಜನೆ’..?

ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.
1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.
2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.
3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.
ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.
ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.
ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.
* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ
* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ
* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್
* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.
ಮುದ್ರಾ ಕಾರ್ಡ್ :

ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.

ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…